Homeಮುಖಪುಟರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

- Advertisement -
- Advertisement -

ಕರ್ನಾಟಕದಲ್ಲಿ ಬಸವರಾಜ್‌ ಬೊಮ್ಮಯಿ ನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಜಾಬ್‌ ವಿವಾದ ಸೃಷ್ಟಿಯಾಗಿತ್ತು. ಇದೀಗ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲೂ ಹಿಜಾಬ್‌ ವಿವಾದ ಭುಗಿಲೆದ್ದಿದೆ. ರಾಜಸ್ಥಾನದಲ್ಲಿ ಬಿಜೆಪಿಯ ಭಜನ್​ಲಾಲ್​ ಶರ್ಮಾ ಅಧಿಕಾರಕ್ಕೇರಿದ ಬಳಿಕ ಮುಸ್ಲಿಂ ವಿರೋಧಿ ನೀತಿಗಳನ್ನು ಜಾರಿಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಜಸ್ಥಾನದ ಸರ್ಕಾರಿ ಶಾಲೆಗಳಲ್ಲಿ ಮಾತ್ರವಲ್ಲದೆ ಖಾಸಗಿ ಶಾಲೆಗಳು ಮತ್ತು ಮದರಸಾಗಳಲ್ಲಿಯೂ ಹಿಜಾಬ್‌ನ್ನು ನಿಷೇಧಿಸಬೇಕು ಎಂದು ರಾಜಸ್ಥಾನದ ಹಿರಿಯ ಸಚಿವ ಕಿರೋರಿ ಲಾಲ್ ಮೀನಾ ಹೇಳಿದ್ದಾರೆ.

ಸಚಿವ ಕಿರೋರಿ ಲಾಲ್ ಮೀನಾ ಈ ಕುರಿತು ಮಾತನಾಡಿದ್ದು, ಶಾಲೆಗಳಲ್ಲಿ ಹಿಜಾಬ್ ಧರಿಸುವುದು ತಪ್ಪಾಗಿದೆ. ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರವನ್ನು ಬಿಜೆಪಿ ಶಾಸಕರು ಸರಿಯಾಗಿ ಪ್ರಸ್ತಾಪಿಸಿರುವುದರಿಂದ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಶಾಲೆಯಲ್ಲಿ ಎರಡು ಡ್ರೆಸ್ ಕೋಡ್‌ಗಳ ಬಗ್ಗೆ ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ವಿಚಾರಣೆ ನಡೆಸಿರುವುದರ ವಿರುದ್ಧ ಜೈಪುರದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಸಚಿವ ಕಿರೋರಿ ಲಾಲ್ ಮೀನಾ ಈ ಹೇಳಿಕೆಯನ್ನು ನೀಡಿದ್ದಾರೆ.

ಶಾಲೆಗಳಲ್ಲಿ ಡ್ರೆಸ್ ಕೋಡ್‌ನ್ನು ಅನುಸರಿಸಬೇಕು, ಇಲ್ಲದಿದ್ದರೆ ಶಾಲೆಗಳಲ್ಲಿ ಯಾವುದೇ ಶಿಸ್ತು ಇರುವುದಿಲ್ಲ. ಡ್ರೆಸ್ ಕೋಡ್ ಅನುಸರಿಸದಿದ್ದರೆ ಪೊಲೀಸರೂ ಸಹ ಒಂದು ದಿನ ಧೋತಿಯಲ್ಲಿ ಬರಬಹುದು. ಅನೇಕ ದೇಶಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿಸಲಾಗಿದೆ. ಮುಸ್ಲಿಮರ ಮೂಲಭೂತವಾದಿ ಧೋರಣೆ ಮತ್ತು ಕಾಂಗ್ರೆಸ್‌ನ ಮುಸ್ಲಿಮರ ಓಲೈಕೆ ನೀತಿ ಸಮುದಾಯವನ್ನು ಹಿಂದುಳಿದಂತೆ ಮಾಡಿದೆ. ಮುಸ್ಲಿಮರಲ್ಲಿ ಶಿಕ್ಷಣ ಮತ್ತು ಪ್ರಗತಿಪರ ಚಿಂತನೆಯ ಕೊರತೆಯಿದೆ. ಆದ್ದರಿಂದ ಅವರು ಅಪರಾಧದಲ್ಲಿ ಹೆಚ್ಚು ತೊಡಗುತ್ತಾರೆ ಎಂದು ಹೇಳಿದ್ದಾರೆ.

ಗಂಗಾಪೋಲ್ ಸರ್ಕಾರಿ ಬಾಲಕಿಯರ ಹಿರಿಯ ಮಾಧ್ಯಮಿಕ ಶಾಲೆಯ ಮುಸ್ಲಿಂ ವಿದ್ಯಾರ್ಥಿನಿಯರು ಶಾಲೆಯಲ್ಲಿ ಹಿಜಾಬ್  ಧರಿಸಿರುವುದನ್ನು ವಿರೋಧಿಸಿದ ಹವಾ ಮಹಲ್ ಶಾಸಕ ಆಚಾರ್ಯ ಬಲ್ಮುಕುಂದ್ ಅವರು ಕ್ಷಮೆಯಾಚಿಸುವಂತೆ ಒತ್ತಾಯಿಸಿ ಪೊಲೀಸ್ ಠಾಣೆಯ ಹೊರಗೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ‘ಹಿಜಾಬ್  ಮೈ ಐಡೆಂಟಿಟಿ ಮತ್ತು ಹಿಜಾಬ್ ಕೋ ಮಿಟವಾನೆ ವಾಲೇ ಮಿಟ್ಟಿ ಮಿ ಮಿಲ್ ಜಾಯೇಂಗೆ’ ಎಂಬ ಫಲಕಗಳೊಂದಿಗೆ ಪೊಲೀಸ್ ಠಾಣೆಗೆ ಘೇರಾವ್ ಹಾಕಿ, ಹಿಜಾಬ್ ಮತ್ತು ಬುರ್ಖಾ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಬಾಲ್ಮುಕುಂದ್ ಆಚಾರ್ಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕೂಡ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಬಾಲ್ಮುಕುಂದ್ ಅವರು ಶಾಲೆಯೊಂದಕ್ಕೆ ಹೋಗಿದ್ದ ವಿಡಿಯೋ ವೈರಲ್‌ ಆಗಿತ್ತು.  ಹಿಜಾಬ್ ಮತ್ತು ಬುರ್ಖಾವನ್ನು ಧರಿಸಿರುವ ಮುಸ್ಲಿಂ ವಿದ್ಯಾರ್ಥಿನಿಯರನ್ನು ನೋಡಿ ಶಾಲೆಯ ಡ್ರೆಸ್ ಕೋಡ್ ಬಗ್ಗೆ ಪ್ರಿನ್ಸಿಪಾಲ್‌ಗೆ ಪ್ರಶ್ನಿಸಿದ್ದಾರೆ. ಶಾಲೆಯಲ್ಲಿ ಎರಡು ರೀತಿಯ ಡ್ರೆಸ್ ಕೋಡ್ ಇದೆಯೇ ಎಂದು ಪ್ರಾಂಶುಪಾಲರನ್ನು ಕೇಳಿದ್ದಾರೆ. ಒಂದು ಮುಸ್ಲಿಮರಿಗೆ ಮತ್ತು ಇನ್ನೊಂದು ಹಿಂದೂಗಳಿಗೆ ಬೇರೆ ಬೇರೆ ಡ್ರೆಸ್‌ ಕೋಡ್‌ ಇದೆಯಾ?  ಪ್ರಾಂಶುಪಾಲರು ಶಾಲೆಯಲ್ಲಿ ಒಂದೇ ಡ್ರೆಸ್ ಕೋಡ್ ಮಾತ್ರ ಇದೆ ಎಂದು ಹೇಳಿದ್ದು, ಕೆಲ ಬಾಲಕಿಯರು ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಹೇಳಿದ್ದಾರೆ.  ಶಾಲೆಗಳಲ್ಲಿ ಡ್ರೆಸ್ ಕೋಡ್ ಬಗ್ಗೆ ಚರ್ಚೆ ನಡೆಸಬೇಕಿದೆ ಎಂದು ಅವರು ಈ ವೇಳೆ ಹೇಳಿದ್ದಾರೆ.

ಪ್ರತಿಭಟನಾ ನಿರತ ಬಾಲಕಿಯರು ಈ ಪ್ರದೇಶದಲ್ಲಿ ರಸ್ತೆ ತಡೆ ನಡೆಸಿದ್ದಾರೆ. ಆದರ್ಶನಗರದ ಕಾಂಗ್ರೆಸ್ ಶಾಸಕ ರಫೀಕ್ ಖಾನ್ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದ್ದಾರೆ. ಈ ವಿಚಾರದಲ್ಲಿ ವಿಧಾನಸೌಧದಲ್ಲೂ ವಿಷಯ ಪ್ರಸ್ತಾಪಿಸಲು ಅವರು ಯತ್ನಿಸಿದ್ದರು ಅದರೆ ಸ್ಪೀಕರ್ ಅದಕ್ಕೆ ಅವಕಾಶ ನೀಡಿರಲಿಲ್ಲ.

ಮೊದಲ ಬಾರಿಗೆ ಶಾಸಕರಾಗಿರುವ ಬಲ್ಮುಕುಂದ್ ಆಚಾರ್ಯ ಅವರು ಹವಾ ಮಹಲ್ ಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. ಬಲ್ಮುಕುಂದ್ ಆಚಾರ್ಯ ಗೆಲವಿನ ಬಳಿಕ ಹಲವು ವಿವಾದವನ್ನು ಸೃಷ್ಟಿಸುತ್ತಿದ್ದಾರೆ. ಈ ಮೊದಲು ಮಾಂಸದ ವ್ಯಾಪಾರಿಗಳನ್ನು  ಭೇಟಿ ಮಾಡಿ ಅಗತ್ಯ ಪರವಾನಗಿ ಇಲ್ಲದೆ ಇದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದರು.

ಇದನ್ನು ಓದಿ: 2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...