Homeಮುಖಪುಟರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

- Advertisement -
- Advertisement -

ಕರ್ನಾಟಕದಲ್ಲಿ ಬಸವರಾಜ್‌ ಬೊಮ್ಮಯಿ ನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಜಾಬ್‌ ವಿವಾದ ಸೃಷ್ಟಿಯಾಗಿತ್ತು. ಇದೀಗ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲೂ ಹಿಜಾಬ್‌ ವಿವಾದ ಭುಗಿಲೆದ್ದಿದೆ. ರಾಜಸ್ಥಾನದಲ್ಲಿ ಬಿಜೆಪಿಯ ಭಜನ್​ಲಾಲ್​ ಶರ್ಮಾ ಅಧಿಕಾರಕ್ಕೇರಿದ ಬಳಿಕ ಮುಸ್ಲಿಂ ವಿರೋಧಿ ನೀತಿಗಳನ್ನು ಜಾರಿಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಜಸ್ಥಾನದ ಸರ್ಕಾರಿ ಶಾಲೆಗಳಲ್ಲಿ ಮಾತ್ರವಲ್ಲದೆ ಖಾಸಗಿ ಶಾಲೆಗಳು ಮತ್ತು ಮದರಸಾಗಳಲ್ಲಿಯೂ ಹಿಜಾಬ್‌ನ್ನು ನಿಷೇಧಿಸಬೇಕು ಎಂದು ರಾಜಸ್ಥಾನದ ಹಿರಿಯ ಸಚಿವ ಕಿರೋರಿ ಲಾಲ್ ಮೀನಾ ಹೇಳಿದ್ದಾರೆ.

ಸಚಿವ ಕಿರೋರಿ ಲಾಲ್ ಮೀನಾ ಈ ಕುರಿತು ಮಾತನಾಡಿದ್ದು, ಶಾಲೆಗಳಲ್ಲಿ ಹಿಜಾಬ್ ಧರಿಸುವುದು ತಪ್ಪಾಗಿದೆ. ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರವನ್ನು ಬಿಜೆಪಿ ಶಾಸಕರು ಸರಿಯಾಗಿ ಪ್ರಸ್ತಾಪಿಸಿರುವುದರಿಂದ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಶಾಲೆಯಲ್ಲಿ ಎರಡು ಡ್ರೆಸ್ ಕೋಡ್‌ಗಳ ಬಗ್ಗೆ ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ವಿಚಾರಣೆ ನಡೆಸಿರುವುದರ ವಿರುದ್ಧ ಜೈಪುರದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಸಚಿವ ಕಿರೋರಿ ಲಾಲ್ ಮೀನಾ ಈ ಹೇಳಿಕೆಯನ್ನು ನೀಡಿದ್ದಾರೆ.

ಶಾಲೆಗಳಲ್ಲಿ ಡ್ರೆಸ್ ಕೋಡ್‌ನ್ನು ಅನುಸರಿಸಬೇಕು, ಇಲ್ಲದಿದ್ದರೆ ಶಾಲೆಗಳಲ್ಲಿ ಯಾವುದೇ ಶಿಸ್ತು ಇರುವುದಿಲ್ಲ. ಡ್ರೆಸ್ ಕೋಡ್ ಅನುಸರಿಸದಿದ್ದರೆ ಪೊಲೀಸರೂ ಸಹ ಒಂದು ದಿನ ಧೋತಿಯಲ್ಲಿ ಬರಬಹುದು. ಅನೇಕ ದೇಶಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿಸಲಾಗಿದೆ. ಮುಸ್ಲಿಮರ ಮೂಲಭೂತವಾದಿ ಧೋರಣೆ ಮತ್ತು ಕಾಂಗ್ರೆಸ್‌ನ ಮುಸ್ಲಿಮರ ಓಲೈಕೆ ನೀತಿ ಸಮುದಾಯವನ್ನು ಹಿಂದುಳಿದಂತೆ ಮಾಡಿದೆ. ಮುಸ್ಲಿಮರಲ್ಲಿ ಶಿಕ್ಷಣ ಮತ್ತು ಪ್ರಗತಿಪರ ಚಿಂತನೆಯ ಕೊರತೆಯಿದೆ. ಆದ್ದರಿಂದ ಅವರು ಅಪರಾಧದಲ್ಲಿ ಹೆಚ್ಚು ತೊಡಗುತ್ತಾರೆ ಎಂದು ಹೇಳಿದ್ದಾರೆ.

ಗಂಗಾಪೋಲ್ ಸರ್ಕಾರಿ ಬಾಲಕಿಯರ ಹಿರಿಯ ಮಾಧ್ಯಮಿಕ ಶಾಲೆಯ ಮುಸ್ಲಿಂ ವಿದ್ಯಾರ್ಥಿನಿಯರು ಶಾಲೆಯಲ್ಲಿ ಹಿಜಾಬ್  ಧರಿಸಿರುವುದನ್ನು ವಿರೋಧಿಸಿದ ಹವಾ ಮಹಲ್ ಶಾಸಕ ಆಚಾರ್ಯ ಬಲ್ಮುಕುಂದ್ ಅವರು ಕ್ಷಮೆಯಾಚಿಸುವಂತೆ ಒತ್ತಾಯಿಸಿ ಪೊಲೀಸ್ ಠಾಣೆಯ ಹೊರಗೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ‘ಹಿಜಾಬ್  ಮೈ ಐಡೆಂಟಿಟಿ ಮತ್ತು ಹಿಜಾಬ್ ಕೋ ಮಿಟವಾನೆ ವಾಲೇ ಮಿಟ್ಟಿ ಮಿ ಮಿಲ್ ಜಾಯೇಂಗೆ’ ಎಂಬ ಫಲಕಗಳೊಂದಿಗೆ ಪೊಲೀಸ್ ಠಾಣೆಗೆ ಘೇರಾವ್ ಹಾಕಿ, ಹಿಜಾಬ್ ಮತ್ತು ಬುರ್ಖಾ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಬಾಲ್ಮುಕುಂದ್ ಆಚಾರ್ಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕೂಡ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಬಾಲ್ಮುಕುಂದ್ ಅವರು ಶಾಲೆಯೊಂದಕ್ಕೆ ಹೋಗಿದ್ದ ವಿಡಿಯೋ ವೈರಲ್‌ ಆಗಿತ್ತು.  ಹಿಜಾಬ್ ಮತ್ತು ಬುರ್ಖಾವನ್ನು ಧರಿಸಿರುವ ಮುಸ್ಲಿಂ ವಿದ್ಯಾರ್ಥಿನಿಯರನ್ನು ನೋಡಿ ಶಾಲೆಯ ಡ್ರೆಸ್ ಕೋಡ್ ಬಗ್ಗೆ ಪ್ರಿನ್ಸಿಪಾಲ್‌ಗೆ ಪ್ರಶ್ನಿಸಿದ್ದಾರೆ. ಶಾಲೆಯಲ್ಲಿ ಎರಡು ರೀತಿಯ ಡ್ರೆಸ್ ಕೋಡ್ ಇದೆಯೇ ಎಂದು ಪ್ರಾಂಶುಪಾಲರನ್ನು ಕೇಳಿದ್ದಾರೆ. ಒಂದು ಮುಸ್ಲಿಮರಿಗೆ ಮತ್ತು ಇನ್ನೊಂದು ಹಿಂದೂಗಳಿಗೆ ಬೇರೆ ಬೇರೆ ಡ್ರೆಸ್‌ ಕೋಡ್‌ ಇದೆಯಾ?  ಪ್ರಾಂಶುಪಾಲರು ಶಾಲೆಯಲ್ಲಿ ಒಂದೇ ಡ್ರೆಸ್ ಕೋಡ್ ಮಾತ್ರ ಇದೆ ಎಂದು ಹೇಳಿದ್ದು, ಕೆಲ ಬಾಲಕಿಯರು ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಹೇಳಿದ್ದಾರೆ.  ಶಾಲೆಗಳಲ್ಲಿ ಡ್ರೆಸ್ ಕೋಡ್ ಬಗ್ಗೆ ಚರ್ಚೆ ನಡೆಸಬೇಕಿದೆ ಎಂದು ಅವರು ಈ ವೇಳೆ ಹೇಳಿದ್ದಾರೆ.

ಪ್ರತಿಭಟನಾ ನಿರತ ಬಾಲಕಿಯರು ಈ ಪ್ರದೇಶದಲ್ಲಿ ರಸ್ತೆ ತಡೆ ನಡೆಸಿದ್ದಾರೆ. ಆದರ್ಶನಗರದ ಕಾಂಗ್ರೆಸ್ ಶಾಸಕ ರಫೀಕ್ ಖಾನ್ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದ್ದಾರೆ. ಈ ವಿಚಾರದಲ್ಲಿ ವಿಧಾನಸೌಧದಲ್ಲೂ ವಿಷಯ ಪ್ರಸ್ತಾಪಿಸಲು ಅವರು ಯತ್ನಿಸಿದ್ದರು ಅದರೆ ಸ್ಪೀಕರ್ ಅದಕ್ಕೆ ಅವಕಾಶ ನೀಡಿರಲಿಲ್ಲ.

ಮೊದಲ ಬಾರಿಗೆ ಶಾಸಕರಾಗಿರುವ ಬಲ್ಮುಕುಂದ್ ಆಚಾರ್ಯ ಅವರು ಹವಾ ಮಹಲ್ ಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. ಬಲ್ಮುಕುಂದ್ ಆಚಾರ್ಯ ಗೆಲವಿನ ಬಳಿಕ ಹಲವು ವಿವಾದವನ್ನು ಸೃಷ್ಟಿಸುತ್ತಿದ್ದಾರೆ. ಈ ಮೊದಲು ಮಾಂಸದ ವ್ಯಾಪಾರಿಗಳನ್ನು  ಭೇಟಿ ಮಾಡಿ ಅಗತ್ಯ ಪರವಾನಗಿ ಇಲ್ಲದೆ ಇದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದರು.

ಇದನ್ನು ಓದಿ: 2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...