Homeಮುಖಪುಟರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

- Advertisement -
- Advertisement -

ಕರ್ನಾಟಕದಲ್ಲಿ ಬಸವರಾಜ್‌ ಬೊಮ್ಮಯಿ ನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಜಾಬ್‌ ವಿವಾದ ಸೃಷ್ಟಿಯಾಗಿತ್ತು. ಇದೀಗ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲೂ ಹಿಜಾಬ್‌ ವಿವಾದ ಭುಗಿಲೆದ್ದಿದೆ. ರಾಜಸ್ಥಾನದಲ್ಲಿ ಬಿಜೆಪಿಯ ಭಜನ್​ಲಾಲ್​ ಶರ್ಮಾ ಅಧಿಕಾರಕ್ಕೇರಿದ ಬಳಿಕ ಮುಸ್ಲಿಂ ವಿರೋಧಿ ನೀತಿಗಳನ್ನು ಜಾರಿಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಜಸ್ಥಾನದ ಸರ್ಕಾರಿ ಶಾಲೆಗಳಲ್ಲಿ ಮಾತ್ರವಲ್ಲದೆ ಖಾಸಗಿ ಶಾಲೆಗಳು ಮತ್ತು ಮದರಸಾಗಳಲ್ಲಿಯೂ ಹಿಜಾಬ್‌ನ್ನು ನಿಷೇಧಿಸಬೇಕು ಎಂದು ರಾಜಸ್ಥಾನದ ಹಿರಿಯ ಸಚಿವ ಕಿರೋರಿ ಲಾಲ್ ಮೀನಾ ಹೇಳಿದ್ದಾರೆ.

ಸಚಿವ ಕಿರೋರಿ ಲಾಲ್ ಮೀನಾ ಈ ಕುರಿತು ಮಾತನಾಡಿದ್ದು, ಶಾಲೆಗಳಲ್ಲಿ ಹಿಜಾಬ್ ಧರಿಸುವುದು ತಪ್ಪಾಗಿದೆ. ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರವನ್ನು ಬಿಜೆಪಿ ಶಾಸಕರು ಸರಿಯಾಗಿ ಪ್ರಸ್ತಾಪಿಸಿರುವುದರಿಂದ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಶಾಲೆಯಲ್ಲಿ ಎರಡು ಡ್ರೆಸ್ ಕೋಡ್‌ಗಳ ಬಗ್ಗೆ ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ವಿಚಾರಣೆ ನಡೆಸಿರುವುದರ ವಿರುದ್ಧ ಜೈಪುರದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಸಚಿವ ಕಿರೋರಿ ಲಾಲ್ ಮೀನಾ ಈ ಹೇಳಿಕೆಯನ್ನು ನೀಡಿದ್ದಾರೆ.

ಶಾಲೆಗಳಲ್ಲಿ ಡ್ರೆಸ್ ಕೋಡ್‌ನ್ನು ಅನುಸರಿಸಬೇಕು, ಇಲ್ಲದಿದ್ದರೆ ಶಾಲೆಗಳಲ್ಲಿ ಯಾವುದೇ ಶಿಸ್ತು ಇರುವುದಿಲ್ಲ. ಡ್ರೆಸ್ ಕೋಡ್ ಅನುಸರಿಸದಿದ್ದರೆ ಪೊಲೀಸರೂ ಸಹ ಒಂದು ದಿನ ಧೋತಿಯಲ್ಲಿ ಬರಬಹುದು. ಅನೇಕ ದೇಶಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿಸಲಾಗಿದೆ. ಮುಸ್ಲಿಮರ ಮೂಲಭೂತವಾದಿ ಧೋರಣೆ ಮತ್ತು ಕಾಂಗ್ರೆಸ್‌ನ ಮುಸ್ಲಿಮರ ಓಲೈಕೆ ನೀತಿ ಸಮುದಾಯವನ್ನು ಹಿಂದುಳಿದಂತೆ ಮಾಡಿದೆ. ಮುಸ್ಲಿಮರಲ್ಲಿ ಶಿಕ್ಷಣ ಮತ್ತು ಪ್ರಗತಿಪರ ಚಿಂತನೆಯ ಕೊರತೆಯಿದೆ. ಆದ್ದರಿಂದ ಅವರು ಅಪರಾಧದಲ್ಲಿ ಹೆಚ್ಚು ತೊಡಗುತ್ತಾರೆ ಎಂದು ಹೇಳಿದ್ದಾರೆ.

ಗಂಗಾಪೋಲ್ ಸರ್ಕಾರಿ ಬಾಲಕಿಯರ ಹಿರಿಯ ಮಾಧ್ಯಮಿಕ ಶಾಲೆಯ ಮುಸ್ಲಿಂ ವಿದ್ಯಾರ್ಥಿನಿಯರು ಶಾಲೆಯಲ್ಲಿ ಹಿಜಾಬ್  ಧರಿಸಿರುವುದನ್ನು ವಿರೋಧಿಸಿದ ಹವಾ ಮಹಲ್ ಶಾಸಕ ಆಚಾರ್ಯ ಬಲ್ಮುಕುಂದ್ ಅವರು ಕ್ಷಮೆಯಾಚಿಸುವಂತೆ ಒತ್ತಾಯಿಸಿ ಪೊಲೀಸ್ ಠಾಣೆಯ ಹೊರಗೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ‘ಹಿಜಾಬ್  ಮೈ ಐಡೆಂಟಿಟಿ ಮತ್ತು ಹಿಜಾಬ್ ಕೋ ಮಿಟವಾನೆ ವಾಲೇ ಮಿಟ್ಟಿ ಮಿ ಮಿಲ್ ಜಾಯೇಂಗೆ’ ಎಂಬ ಫಲಕಗಳೊಂದಿಗೆ ಪೊಲೀಸ್ ಠಾಣೆಗೆ ಘೇರಾವ್ ಹಾಕಿ, ಹಿಜಾಬ್ ಮತ್ತು ಬುರ್ಖಾ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಬಾಲ್ಮುಕುಂದ್ ಆಚಾರ್ಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕೂಡ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಬಾಲ್ಮುಕುಂದ್ ಅವರು ಶಾಲೆಯೊಂದಕ್ಕೆ ಹೋಗಿದ್ದ ವಿಡಿಯೋ ವೈರಲ್‌ ಆಗಿತ್ತು.  ಹಿಜಾಬ್ ಮತ್ತು ಬುರ್ಖಾವನ್ನು ಧರಿಸಿರುವ ಮುಸ್ಲಿಂ ವಿದ್ಯಾರ್ಥಿನಿಯರನ್ನು ನೋಡಿ ಶಾಲೆಯ ಡ್ರೆಸ್ ಕೋಡ್ ಬಗ್ಗೆ ಪ್ರಿನ್ಸಿಪಾಲ್‌ಗೆ ಪ್ರಶ್ನಿಸಿದ್ದಾರೆ. ಶಾಲೆಯಲ್ಲಿ ಎರಡು ರೀತಿಯ ಡ್ರೆಸ್ ಕೋಡ್ ಇದೆಯೇ ಎಂದು ಪ್ರಾಂಶುಪಾಲರನ್ನು ಕೇಳಿದ್ದಾರೆ. ಒಂದು ಮುಸ್ಲಿಮರಿಗೆ ಮತ್ತು ಇನ್ನೊಂದು ಹಿಂದೂಗಳಿಗೆ ಬೇರೆ ಬೇರೆ ಡ್ರೆಸ್‌ ಕೋಡ್‌ ಇದೆಯಾ?  ಪ್ರಾಂಶುಪಾಲರು ಶಾಲೆಯಲ್ಲಿ ಒಂದೇ ಡ್ರೆಸ್ ಕೋಡ್ ಮಾತ್ರ ಇದೆ ಎಂದು ಹೇಳಿದ್ದು, ಕೆಲ ಬಾಲಕಿಯರು ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಹೇಳಿದ್ದಾರೆ.  ಶಾಲೆಗಳಲ್ಲಿ ಡ್ರೆಸ್ ಕೋಡ್ ಬಗ್ಗೆ ಚರ್ಚೆ ನಡೆಸಬೇಕಿದೆ ಎಂದು ಅವರು ಈ ವೇಳೆ ಹೇಳಿದ್ದಾರೆ.

ಪ್ರತಿಭಟನಾ ನಿರತ ಬಾಲಕಿಯರು ಈ ಪ್ರದೇಶದಲ್ಲಿ ರಸ್ತೆ ತಡೆ ನಡೆಸಿದ್ದಾರೆ. ಆದರ್ಶನಗರದ ಕಾಂಗ್ರೆಸ್ ಶಾಸಕ ರಫೀಕ್ ಖಾನ್ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದ್ದಾರೆ. ಈ ವಿಚಾರದಲ್ಲಿ ವಿಧಾನಸೌಧದಲ್ಲೂ ವಿಷಯ ಪ್ರಸ್ತಾಪಿಸಲು ಅವರು ಯತ್ನಿಸಿದ್ದರು ಅದರೆ ಸ್ಪೀಕರ್ ಅದಕ್ಕೆ ಅವಕಾಶ ನೀಡಿರಲಿಲ್ಲ.

ಮೊದಲ ಬಾರಿಗೆ ಶಾಸಕರಾಗಿರುವ ಬಲ್ಮುಕುಂದ್ ಆಚಾರ್ಯ ಅವರು ಹವಾ ಮಹಲ್ ಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. ಬಲ್ಮುಕುಂದ್ ಆಚಾರ್ಯ ಗೆಲವಿನ ಬಳಿಕ ಹಲವು ವಿವಾದವನ್ನು ಸೃಷ್ಟಿಸುತ್ತಿದ್ದಾರೆ. ಈ ಮೊದಲು ಮಾಂಸದ ವ್ಯಾಪಾರಿಗಳನ್ನು  ಭೇಟಿ ಮಾಡಿ ಅಗತ್ಯ ಪರವಾನಗಿ ಇಲ್ಲದೆ ಇದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದರು.

ಇದನ್ನು ಓದಿ: 2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...