Homeಮುಖಪುಟರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ

- Advertisement -
- Advertisement -

ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಭಜನ್ ಲಾಲ್ ಶರ್ಮಾ ನೇತೃತ್ವದ ಬಿಜೆಪಿ ಸರಕಾರ ರಾಜಸ್ಥಾನದಲ್ಲಿ ಅಧಿಕಾರದಲ್ಲಿದೆ.

ಹಿರಿಯ ನ್ಯಾಯಾಧೀಶರು ಮತ್ತು ಐಎಎಸ್ ಅಧಿಕಾರಿಗಳ ನಿವಾಸಗಳಿಗೆ ಜೈಪುರದ ಗಾಂಧಿನಗರದಲ್ಲಿ ವಸತಿ ಸಂಕೀರ್ಣ ಯೋಜನೆಯಿಂದ ರಾಜ್ಯ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ನಷ್ಟವುಂಟಾಗಲಿದೆಯೆಂದು ಹಿರಿಯ ಬಿಜೆಪಿ ನಾಯಕ ಹಾಗೂ ಕೃಷಿ ಸಚಿವ ಕಿರೋಡಿ ಲಾಲ್ ಮೀನಾ ಆಪಾದಿಸಿದ್ದಾರೆ. ಮುಖ್ಯಮಂತ್ರಿಯವರ ಅಧೀನದಲ್ಲಿರುವ ಸಾಮಾನ್ಯ ಆಡಳಿತ ಇಲಾಖೆ (ಜಿಎಡಿ) ಕ್ಯಾಬಿನೆಟ್ ಅನುಮತಿಯಿಲ್ಲದೆ ಯೋಜನೆಯನ್ನು ಮುಂದುವರಿಸುತ್ತಿದೆ ಎಂದು ಮೀನಾ ಹೇಳಿದ್ದು, ಯೋಜನೆಗೆ ತಡೆ ನೀಡಬೇಕು ಮತ್ತು ಈ ಕುರಿತ ಫೈಲ್‌ನ್ನು ವಾಪಾಸ್ಸು ತರಿಸುವಂತೆ ಸಿಎಂಗೆ ಆಗ್ರಹಿಸಿದ್ದಾರೆ.

ಸಾಮಾನ್ಯ ಆಡಳಿತ ಇಲಾಖೆ ಗಾಂಧಿನಗರದಲ್ಲಿರುವ ಹಳೆಯ ಎಂಆರ್‌ಇಸಿ ಕ್ಯಾಂಪಸ್ ಕಟ್ಟಡಗಳನ್ನು ನಾಶಪಡಿಸಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವ ಯೋಜನೆಯನ್ನು ಹೊಂದಿದೆ. ಐದು ವರ್ಷಗಳ ಹಿಂದೆ ಈ ನಿವೇಶನದ ಮೌಲ್ಯವು ರೂ.277 ಕೋಟಿಗಳಾಗಿದ್ದರೂ, ಈಗ ಅದರ ಮೌಲ್ಯವನ್ನು ಕಡಿಮೆಗೊಳಿಸಿ 218 ಕೋಟಿ ರೂ. ಎಂದು ಹೇಳಲಾಗಿದೆ. ಜಮೀನಿನ ಮೀಸಲು ಬೆಲೆಯು ಪ್ರಸಕ್ತ 25 ಸಾವಿರ ರೂ.ಗಳಾಗಿದ್ದರೂ, ಅದನ್ನು 8 ಸಾವಿರ ಚದರ ಅಡಿಗೆ ನೀಡಲಾಗಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಪ್ರತಿ ಚದರ ಅಡಿಗೆ 17 ಸಾವಿರ ರೂ.ನಷ್ಟವಾಗಲಿದೆ. ಈ ವಸತಿ ಸಂಕೀರ್ಣ ಯೋಜನೆಯಡಿ ರಾಜ್ಯ ಸರಕಾರವು ಮೂರನೇ ಒಂದರಷ್ಟು ಫ್ಲ್ಯಾಟ್‌ಗಳನ್ನು ಸಾರ್ವಜನಿಕ-ಖಾಸಗಿ ಪಾಲುದಾರಿಕೆಯಡಿ ಖಾಸಗಿಯವರಿಗೆ ನೀಡಲಿದೆ ಎಂದು ಮೀನಾ ತಿಳಿಸಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವುಂಟಾಗಲಿದೆ ಎಂದು ಮೀನಾ ಹೇಳಿದ್ದಾರೆ. ಯೋಜನೆಯ ಕಡತವನ್ನು ಕ್ಯಾಬಿನೆಟ್ ಅಥವಾ ಹಣಕಾಸು ಸಚಿವಾಲಯ ಪಾಸ್ ಮಾಡಿಲ್ಲ  ಎಂದು ಹೇಳಿರುವ ಸಚಿವರು, ಅದನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರನ್ನು ಒತ್ತಾಯಿಸಿದ್ದಾರೆ.

ಹಿರಿಯ ಸಚಿವರಾಗಿರುವ ಕಿರೋಡಿ ಲಾಲ್ ಮೀನಾ ತಮ್ಮದೇ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳನ್ನು ವಿರೋಧಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು, ಅವರು ಪೂರ್ವ ರಾಜಸ್ಥಾನ ಕಾಲುವೆ ಯೋಜನೆಯಡಿಯಲ್ಲಿ ಭೂಮಿಯನ್ನು ಮಾರಾಟ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಭ್ರಷ್ಟಾಚಾರದ ಸುಳಿವು ನೀಡಿದ್ದರು.

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಮೊದಲು ಕಿರೋಡಿ ಲಾಲ್ ಮೀನಾ ಮೀನಾ ರಾಜ್ಯಸಭಾ ಸದಸ್ಯರಾಗಿದ್ದರು ಮತ್ತು ಚುನಾವಣಾ ಪ್ರಚಾರದಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದರು. ಕಳೆದ ವರ್ಷ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪತನದ ಬಳಿಕ ಬಿಜೆಪಿಯು ಶಾಸಕ ಭಜನ್ ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಅಚ್ಚರಿಯ ನಿರ್ಧಾರವನ್ನು ಪ್ರಕಟಿಸಿತ್ತು.

ಮೀನಾ ಅವರು ತಮಗೆ ನೀಡಲಾದ ಖಾತೆಗಳ ಬಗ್ಗೆ ಅತೃಪ್ತರಾಗಿದ್ದಾರೆ ಮತ್ತು ದೌಸಾ ಲೋಕಸಭಾ ಕ್ಷೇತ್ರದಿಂದ ತಮ್ಮ ಸಹೋದರನಿಗೆ ಟಿಕೆಟ್ ನೀಡಲು ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ 25ರಲ್ಲಿ 24 ಸ್ಥಾನಗಳನ್ನು ಗೆದ್ದಿತ್ತು. ಇದು 2014ರಲ್ಲಿ ಎಲ್ಲಾ 25 ಸ್ಥಾನಗಳನ್ನು ಗೆದ್ದಿತ್ತು. ಈ ಎರಡೂ ಚುನಾವಣೆಗಳು ವಸುಂಧರಾ ರಾಜೆ ನೇತೃತ್ವದಲ್ಲಿ ನಡೆದಿದ್ದವು. ಈ ವರ್ಷದ ಲೋಕಸಭೆ ಚುನಾವಣೆಯನ್ನು ಹೊಸ ಆಡಳಿತಕ್ಕೆ ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ ಮತ್ತು ಬಿಜೆಪಿಯ ಸ್ಥಾನಗಳು  ಕಡಿಮೆಯಾದರೆ, ಶರ್ಮಾ ಅವರು ತಮ್ಮ ಸರ್ಕಾರ ಮತ್ತು ಪಕ್ಷದೊಳಗಿನ ಬಣಗಳನ್ನು ಎದುರಿಸುವ ಪರಿಸ್ಥಿತಿ ಎದುರಾಗಬಹುದು ಎಂದು ಹೇಳಲಾಗಿದೆ.

ಇದನ್ನು ಓದಿ: ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...