Homeಮುಖಪುಟರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ

- Advertisement -
- Advertisement -

ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಭಜನ್ ಲಾಲ್ ಶರ್ಮಾ ನೇತೃತ್ವದ ಬಿಜೆಪಿ ಸರಕಾರ ರಾಜಸ್ಥಾನದಲ್ಲಿ ಅಧಿಕಾರದಲ್ಲಿದೆ.

ಹಿರಿಯ ನ್ಯಾಯಾಧೀಶರು ಮತ್ತು ಐಎಎಸ್ ಅಧಿಕಾರಿಗಳ ನಿವಾಸಗಳಿಗೆ ಜೈಪುರದ ಗಾಂಧಿನಗರದಲ್ಲಿ ವಸತಿ ಸಂಕೀರ್ಣ ಯೋಜನೆಯಿಂದ ರಾಜ್ಯ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ನಷ್ಟವುಂಟಾಗಲಿದೆಯೆಂದು ಹಿರಿಯ ಬಿಜೆಪಿ ನಾಯಕ ಹಾಗೂ ಕೃಷಿ ಸಚಿವ ಕಿರೋಡಿ ಲಾಲ್ ಮೀನಾ ಆಪಾದಿಸಿದ್ದಾರೆ. ಮುಖ್ಯಮಂತ್ರಿಯವರ ಅಧೀನದಲ್ಲಿರುವ ಸಾಮಾನ್ಯ ಆಡಳಿತ ಇಲಾಖೆ (ಜಿಎಡಿ) ಕ್ಯಾಬಿನೆಟ್ ಅನುಮತಿಯಿಲ್ಲದೆ ಯೋಜನೆಯನ್ನು ಮುಂದುವರಿಸುತ್ತಿದೆ ಎಂದು ಮೀನಾ ಹೇಳಿದ್ದು, ಯೋಜನೆಗೆ ತಡೆ ನೀಡಬೇಕು ಮತ್ತು ಈ ಕುರಿತ ಫೈಲ್‌ನ್ನು ವಾಪಾಸ್ಸು ತರಿಸುವಂತೆ ಸಿಎಂಗೆ ಆಗ್ರಹಿಸಿದ್ದಾರೆ.

ಸಾಮಾನ್ಯ ಆಡಳಿತ ಇಲಾಖೆ ಗಾಂಧಿನಗರದಲ್ಲಿರುವ ಹಳೆಯ ಎಂಆರ್‌ಇಸಿ ಕ್ಯಾಂಪಸ್ ಕಟ್ಟಡಗಳನ್ನು ನಾಶಪಡಿಸಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವ ಯೋಜನೆಯನ್ನು ಹೊಂದಿದೆ. ಐದು ವರ್ಷಗಳ ಹಿಂದೆ ಈ ನಿವೇಶನದ ಮೌಲ್ಯವು ರೂ.277 ಕೋಟಿಗಳಾಗಿದ್ದರೂ, ಈಗ ಅದರ ಮೌಲ್ಯವನ್ನು ಕಡಿಮೆಗೊಳಿಸಿ 218 ಕೋಟಿ ರೂ. ಎಂದು ಹೇಳಲಾಗಿದೆ. ಜಮೀನಿನ ಮೀಸಲು ಬೆಲೆಯು ಪ್ರಸಕ್ತ 25 ಸಾವಿರ ರೂ.ಗಳಾಗಿದ್ದರೂ, ಅದನ್ನು 8 ಸಾವಿರ ಚದರ ಅಡಿಗೆ ನೀಡಲಾಗಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಪ್ರತಿ ಚದರ ಅಡಿಗೆ 17 ಸಾವಿರ ರೂ.ನಷ್ಟವಾಗಲಿದೆ. ಈ ವಸತಿ ಸಂಕೀರ್ಣ ಯೋಜನೆಯಡಿ ರಾಜ್ಯ ಸರಕಾರವು ಮೂರನೇ ಒಂದರಷ್ಟು ಫ್ಲ್ಯಾಟ್‌ಗಳನ್ನು ಸಾರ್ವಜನಿಕ-ಖಾಸಗಿ ಪಾಲುದಾರಿಕೆಯಡಿ ಖಾಸಗಿಯವರಿಗೆ ನೀಡಲಿದೆ ಎಂದು ಮೀನಾ ತಿಳಿಸಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವುಂಟಾಗಲಿದೆ ಎಂದು ಮೀನಾ ಹೇಳಿದ್ದಾರೆ. ಯೋಜನೆಯ ಕಡತವನ್ನು ಕ್ಯಾಬಿನೆಟ್ ಅಥವಾ ಹಣಕಾಸು ಸಚಿವಾಲಯ ಪಾಸ್ ಮಾಡಿಲ್ಲ  ಎಂದು ಹೇಳಿರುವ ಸಚಿವರು, ಅದನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರನ್ನು ಒತ್ತಾಯಿಸಿದ್ದಾರೆ.

ಹಿರಿಯ ಸಚಿವರಾಗಿರುವ ಕಿರೋಡಿ ಲಾಲ್ ಮೀನಾ ತಮ್ಮದೇ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳನ್ನು ವಿರೋಧಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು, ಅವರು ಪೂರ್ವ ರಾಜಸ್ಥಾನ ಕಾಲುವೆ ಯೋಜನೆಯಡಿಯಲ್ಲಿ ಭೂಮಿಯನ್ನು ಮಾರಾಟ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಭ್ರಷ್ಟಾಚಾರದ ಸುಳಿವು ನೀಡಿದ್ದರು.

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಮೊದಲು ಕಿರೋಡಿ ಲಾಲ್ ಮೀನಾ ಮೀನಾ ರಾಜ್ಯಸಭಾ ಸದಸ್ಯರಾಗಿದ್ದರು ಮತ್ತು ಚುನಾವಣಾ ಪ್ರಚಾರದಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದರು. ಕಳೆದ ವರ್ಷ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪತನದ ಬಳಿಕ ಬಿಜೆಪಿಯು ಶಾಸಕ ಭಜನ್ ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಅಚ್ಚರಿಯ ನಿರ್ಧಾರವನ್ನು ಪ್ರಕಟಿಸಿತ್ತು.

ಮೀನಾ ಅವರು ತಮಗೆ ನೀಡಲಾದ ಖಾತೆಗಳ ಬಗ್ಗೆ ಅತೃಪ್ತರಾಗಿದ್ದಾರೆ ಮತ್ತು ದೌಸಾ ಲೋಕಸಭಾ ಕ್ಷೇತ್ರದಿಂದ ತಮ್ಮ ಸಹೋದರನಿಗೆ ಟಿಕೆಟ್ ನೀಡಲು ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ 25ರಲ್ಲಿ 24 ಸ್ಥಾನಗಳನ್ನು ಗೆದ್ದಿತ್ತು. ಇದು 2014ರಲ್ಲಿ ಎಲ್ಲಾ 25 ಸ್ಥಾನಗಳನ್ನು ಗೆದ್ದಿತ್ತು. ಈ ಎರಡೂ ಚುನಾವಣೆಗಳು ವಸುಂಧರಾ ರಾಜೆ ನೇತೃತ್ವದಲ್ಲಿ ನಡೆದಿದ್ದವು. ಈ ವರ್ಷದ ಲೋಕಸಭೆ ಚುನಾವಣೆಯನ್ನು ಹೊಸ ಆಡಳಿತಕ್ಕೆ ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ ಮತ್ತು ಬಿಜೆಪಿಯ ಸ್ಥಾನಗಳು  ಕಡಿಮೆಯಾದರೆ, ಶರ್ಮಾ ಅವರು ತಮ್ಮ ಸರ್ಕಾರ ಮತ್ತು ಪಕ್ಷದೊಳಗಿನ ಬಣಗಳನ್ನು ಎದುರಿಸುವ ಪರಿಸ್ಥಿತಿ ಎದುರಾಗಬಹುದು ಎಂದು ಹೇಳಲಾಗಿದೆ.

ಇದನ್ನು ಓದಿ: ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...