Homeಮುಖಪುಟರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ

- Advertisement -
- Advertisement -

ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಭಜನ್ ಲಾಲ್ ಶರ್ಮಾ ನೇತೃತ್ವದ ಬಿಜೆಪಿ ಸರಕಾರ ರಾಜಸ್ಥಾನದಲ್ಲಿ ಅಧಿಕಾರದಲ್ಲಿದೆ.

ಹಿರಿಯ ನ್ಯಾಯಾಧೀಶರು ಮತ್ತು ಐಎಎಸ್ ಅಧಿಕಾರಿಗಳ ನಿವಾಸಗಳಿಗೆ ಜೈಪುರದ ಗಾಂಧಿನಗರದಲ್ಲಿ ವಸತಿ ಸಂಕೀರ್ಣ ಯೋಜನೆಯಿಂದ ರಾಜ್ಯ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ನಷ್ಟವುಂಟಾಗಲಿದೆಯೆಂದು ಹಿರಿಯ ಬಿಜೆಪಿ ನಾಯಕ ಹಾಗೂ ಕೃಷಿ ಸಚಿವ ಕಿರೋಡಿ ಲಾಲ್ ಮೀನಾ ಆಪಾದಿಸಿದ್ದಾರೆ. ಮುಖ್ಯಮಂತ್ರಿಯವರ ಅಧೀನದಲ್ಲಿರುವ ಸಾಮಾನ್ಯ ಆಡಳಿತ ಇಲಾಖೆ (ಜಿಎಡಿ) ಕ್ಯಾಬಿನೆಟ್ ಅನುಮತಿಯಿಲ್ಲದೆ ಯೋಜನೆಯನ್ನು ಮುಂದುವರಿಸುತ್ತಿದೆ ಎಂದು ಮೀನಾ ಹೇಳಿದ್ದು, ಯೋಜನೆಗೆ ತಡೆ ನೀಡಬೇಕು ಮತ್ತು ಈ ಕುರಿತ ಫೈಲ್‌ನ್ನು ವಾಪಾಸ್ಸು ತರಿಸುವಂತೆ ಸಿಎಂಗೆ ಆಗ್ರಹಿಸಿದ್ದಾರೆ.

ಸಾಮಾನ್ಯ ಆಡಳಿತ ಇಲಾಖೆ ಗಾಂಧಿನಗರದಲ್ಲಿರುವ ಹಳೆಯ ಎಂಆರ್‌ಇಸಿ ಕ್ಯಾಂಪಸ್ ಕಟ್ಟಡಗಳನ್ನು ನಾಶಪಡಿಸಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವ ಯೋಜನೆಯನ್ನು ಹೊಂದಿದೆ. ಐದು ವರ್ಷಗಳ ಹಿಂದೆ ಈ ನಿವೇಶನದ ಮೌಲ್ಯವು ರೂ.277 ಕೋಟಿಗಳಾಗಿದ್ದರೂ, ಈಗ ಅದರ ಮೌಲ್ಯವನ್ನು ಕಡಿಮೆಗೊಳಿಸಿ 218 ಕೋಟಿ ರೂ. ಎಂದು ಹೇಳಲಾಗಿದೆ. ಜಮೀನಿನ ಮೀಸಲು ಬೆಲೆಯು ಪ್ರಸಕ್ತ 25 ಸಾವಿರ ರೂ.ಗಳಾಗಿದ್ದರೂ, ಅದನ್ನು 8 ಸಾವಿರ ಚದರ ಅಡಿಗೆ ನೀಡಲಾಗಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಪ್ರತಿ ಚದರ ಅಡಿಗೆ 17 ಸಾವಿರ ರೂ.ನಷ್ಟವಾಗಲಿದೆ. ಈ ವಸತಿ ಸಂಕೀರ್ಣ ಯೋಜನೆಯಡಿ ರಾಜ್ಯ ಸರಕಾರವು ಮೂರನೇ ಒಂದರಷ್ಟು ಫ್ಲ್ಯಾಟ್‌ಗಳನ್ನು ಸಾರ್ವಜನಿಕ-ಖಾಸಗಿ ಪಾಲುದಾರಿಕೆಯಡಿ ಖಾಸಗಿಯವರಿಗೆ ನೀಡಲಿದೆ ಎಂದು ಮೀನಾ ತಿಳಿಸಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವುಂಟಾಗಲಿದೆ ಎಂದು ಮೀನಾ ಹೇಳಿದ್ದಾರೆ. ಯೋಜನೆಯ ಕಡತವನ್ನು ಕ್ಯಾಬಿನೆಟ್ ಅಥವಾ ಹಣಕಾಸು ಸಚಿವಾಲಯ ಪಾಸ್ ಮಾಡಿಲ್ಲ  ಎಂದು ಹೇಳಿರುವ ಸಚಿವರು, ಅದನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರನ್ನು ಒತ್ತಾಯಿಸಿದ್ದಾರೆ.

ಹಿರಿಯ ಸಚಿವರಾಗಿರುವ ಕಿರೋಡಿ ಲಾಲ್ ಮೀನಾ ತಮ್ಮದೇ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳನ್ನು ವಿರೋಧಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು, ಅವರು ಪೂರ್ವ ರಾಜಸ್ಥಾನ ಕಾಲುವೆ ಯೋಜನೆಯಡಿಯಲ್ಲಿ ಭೂಮಿಯನ್ನು ಮಾರಾಟ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಭ್ರಷ್ಟಾಚಾರದ ಸುಳಿವು ನೀಡಿದ್ದರು.

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಮೊದಲು ಕಿರೋಡಿ ಲಾಲ್ ಮೀನಾ ಮೀನಾ ರಾಜ್ಯಸಭಾ ಸದಸ್ಯರಾಗಿದ್ದರು ಮತ್ತು ಚುನಾವಣಾ ಪ್ರಚಾರದಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದರು. ಕಳೆದ ವರ್ಷ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪತನದ ಬಳಿಕ ಬಿಜೆಪಿಯು ಶಾಸಕ ಭಜನ್ ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಅಚ್ಚರಿಯ ನಿರ್ಧಾರವನ್ನು ಪ್ರಕಟಿಸಿತ್ತು.

ಮೀನಾ ಅವರು ತಮಗೆ ನೀಡಲಾದ ಖಾತೆಗಳ ಬಗ್ಗೆ ಅತೃಪ್ತರಾಗಿದ್ದಾರೆ ಮತ್ತು ದೌಸಾ ಲೋಕಸಭಾ ಕ್ಷೇತ್ರದಿಂದ ತಮ್ಮ ಸಹೋದರನಿಗೆ ಟಿಕೆಟ್ ನೀಡಲು ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ 25ರಲ್ಲಿ 24 ಸ್ಥಾನಗಳನ್ನು ಗೆದ್ದಿತ್ತು. ಇದು 2014ರಲ್ಲಿ ಎಲ್ಲಾ 25 ಸ್ಥಾನಗಳನ್ನು ಗೆದ್ದಿತ್ತು. ಈ ಎರಡೂ ಚುನಾವಣೆಗಳು ವಸುಂಧರಾ ರಾಜೆ ನೇತೃತ್ವದಲ್ಲಿ ನಡೆದಿದ್ದವು. ಈ ವರ್ಷದ ಲೋಕಸಭೆ ಚುನಾವಣೆಯನ್ನು ಹೊಸ ಆಡಳಿತಕ್ಕೆ ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ ಮತ್ತು ಬಿಜೆಪಿಯ ಸ್ಥಾನಗಳು  ಕಡಿಮೆಯಾದರೆ, ಶರ್ಮಾ ಅವರು ತಮ್ಮ ಸರ್ಕಾರ ಮತ್ತು ಪಕ್ಷದೊಳಗಿನ ಬಣಗಳನ್ನು ಎದುರಿಸುವ ಪರಿಸ್ಥಿತಿ ಎದುರಾಗಬಹುದು ಎಂದು ಹೇಳಲಾಗಿದೆ.

ಇದನ್ನು ಓದಿ: ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...