Homeಮುಖಪುಟರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ

- Advertisement -
- Advertisement -

ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಭಜನ್ ಲಾಲ್ ಶರ್ಮಾ ನೇತೃತ್ವದ ಬಿಜೆಪಿ ಸರಕಾರ ರಾಜಸ್ಥಾನದಲ್ಲಿ ಅಧಿಕಾರದಲ್ಲಿದೆ.

ಹಿರಿಯ ನ್ಯಾಯಾಧೀಶರು ಮತ್ತು ಐಎಎಸ್ ಅಧಿಕಾರಿಗಳ ನಿವಾಸಗಳಿಗೆ ಜೈಪುರದ ಗಾಂಧಿನಗರದಲ್ಲಿ ವಸತಿ ಸಂಕೀರ್ಣ ಯೋಜನೆಯಿಂದ ರಾಜ್ಯ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ನಷ್ಟವುಂಟಾಗಲಿದೆಯೆಂದು ಹಿರಿಯ ಬಿಜೆಪಿ ನಾಯಕ ಹಾಗೂ ಕೃಷಿ ಸಚಿವ ಕಿರೋಡಿ ಲಾಲ್ ಮೀನಾ ಆಪಾದಿಸಿದ್ದಾರೆ. ಮುಖ್ಯಮಂತ್ರಿಯವರ ಅಧೀನದಲ್ಲಿರುವ ಸಾಮಾನ್ಯ ಆಡಳಿತ ಇಲಾಖೆ (ಜಿಎಡಿ) ಕ್ಯಾಬಿನೆಟ್ ಅನುಮತಿಯಿಲ್ಲದೆ ಯೋಜನೆಯನ್ನು ಮುಂದುವರಿಸುತ್ತಿದೆ ಎಂದು ಮೀನಾ ಹೇಳಿದ್ದು, ಯೋಜನೆಗೆ ತಡೆ ನೀಡಬೇಕು ಮತ್ತು ಈ ಕುರಿತ ಫೈಲ್‌ನ್ನು ವಾಪಾಸ್ಸು ತರಿಸುವಂತೆ ಸಿಎಂಗೆ ಆಗ್ರಹಿಸಿದ್ದಾರೆ.

ಸಾಮಾನ್ಯ ಆಡಳಿತ ಇಲಾಖೆ ಗಾಂಧಿನಗರದಲ್ಲಿರುವ ಹಳೆಯ ಎಂಆರ್‌ಇಸಿ ಕ್ಯಾಂಪಸ್ ಕಟ್ಟಡಗಳನ್ನು ನಾಶಪಡಿಸಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವ ಯೋಜನೆಯನ್ನು ಹೊಂದಿದೆ. ಐದು ವರ್ಷಗಳ ಹಿಂದೆ ಈ ನಿವೇಶನದ ಮೌಲ್ಯವು ರೂ.277 ಕೋಟಿಗಳಾಗಿದ್ದರೂ, ಈಗ ಅದರ ಮೌಲ್ಯವನ್ನು ಕಡಿಮೆಗೊಳಿಸಿ 218 ಕೋಟಿ ರೂ. ಎಂದು ಹೇಳಲಾಗಿದೆ. ಜಮೀನಿನ ಮೀಸಲು ಬೆಲೆಯು ಪ್ರಸಕ್ತ 25 ಸಾವಿರ ರೂ.ಗಳಾಗಿದ್ದರೂ, ಅದನ್ನು 8 ಸಾವಿರ ಚದರ ಅಡಿಗೆ ನೀಡಲಾಗಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಪ್ರತಿ ಚದರ ಅಡಿಗೆ 17 ಸಾವಿರ ರೂ.ನಷ್ಟವಾಗಲಿದೆ. ಈ ವಸತಿ ಸಂಕೀರ್ಣ ಯೋಜನೆಯಡಿ ರಾಜ್ಯ ಸರಕಾರವು ಮೂರನೇ ಒಂದರಷ್ಟು ಫ್ಲ್ಯಾಟ್‌ಗಳನ್ನು ಸಾರ್ವಜನಿಕ-ಖಾಸಗಿ ಪಾಲುದಾರಿಕೆಯಡಿ ಖಾಸಗಿಯವರಿಗೆ ನೀಡಲಿದೆ ಎಂದು ಮೀನಾ ತಿಳಿಸಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವುಂಟಾಗಲಿದೆ ಎಂದು ಮೀನಾ ಹೇಳಿದ್ದಾರೆ. ಯೋಜನೆಯ ಕಡತವನ್ನು ಕ್ಯಾಬಿನೆಟ್ ಅಥವಾ ಹಣಕಾಸು ಸಚಿವಾಲಯ ಪಾಸ್ ಮಾಡಿಲ್ಲ  ಎಂದು ಹೇಳಿರುವ ಸಚಿವರು, ಅದನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರನ್ನು ಒತ್ತಾಯಿಸಿದ್ದಾರೆ.

ಹಿರಿಯ ಸಚಿವರಾಗಿರುವ ಕಿರೋಡಿ ಲಾಲ್ ಮೀನಾ ತಮ್ಮದೇ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳನ್ನು ವಿರೋಧಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು, ಅವರು ಪೂರ್ವ ರಾಜಸ್ಥಾನ ಕಾಲುವೆ ಯೋಜನೆಯಡಿಯಲ್ಲಿ ಭೂಮಿಯನ್ನು ಮಾರಾಟ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಭ್ರಷ್ಟಾಚಾರದ ಸುಳಿವು ನೀಡಿದ್ದರು.

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಮೊದಲು ಕಿರೋಡಿ ಲಾಲ್ ಮೀನಾ ಮೀನಾ ರಾಜ್ಯಸಭಾ ಸದಸ್ಯರಾಗಿದ್ದರು ಮತ್ತು ಚುನಾವಣಾ ಪ್ರಚಾರದಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದರು. ಕಳೆದ ವರ್ಷ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪತನದ ಬಳಿಕ ಬಿಜೆಪಿಯು ಶಾಸಕ ಭಜನ್ ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಅಚ್ಚರಿಯ ನಿರ್ಧಾರವನ್ನು ಪ್ರಕಟಿಸಿತ್ತು.

ಮೀನಾ ಅವರು ತಮಗೆ ನೀಡಲಾದ ಖಾತೆಗಳ ಬಗ್ಗೆ ಅತೃಪ್ತರಾಗಿದ್ದಾರೆ ಮತ್ತು ದೌಸಾ ಲೋಕಸಭಾ ಕ್ಷೇತ್ರದಿಂದ ತಮ್ಮ ಸಹೋದರನಿಗೆ ಟಿಕೆಟ್ ನೀಡಲು ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ 25ರಲ್ಲಿ 24 ಸ್ಥಾನಗಳನ್ನು ಗೆದ್ದಿತ್ತು. ಇದು 2014ರಲ್ಲಿ ಎಲ್ಲಾ 25 ಸ್ಥಾನಗಳನ್ನು ಗೆದ್ದಿತ್ತು. ಈ ಎರಡೂ ಚುನಾವಣೆಗಳು ವಸುಂಧರಾ ರಾಜೆ ನೇತೃತ್ವದಲ್ಲಿ ನಡೆದಿದ್ದವು. ಈ ವರ್ಷದ ಲೋಕಸಭೆ ಚುನಾವಣೆಯನ್ನು ಹೊಸ ಆಡಳಿತಕ್ಕೆ ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ ಮತ್ತು ಬಿಜೆಪಿಯ ಸ್ಥಾನಗಳು  ಕಡಿಮೆಯಾದರೆ, ಶರ್ಮಾ ಅವರು ತಮ್ಮ ಸರ್ಕಾರ ಮತ್ತು ಪಕ್ಷದೊಳಗಿನ ಬಣಗಳನ್ನು ಎದುರಿಸುವ ಪರಿಸ್ಥಿತಿ ಎದುರಾಗಬಹುದು ಎಂದು ಹೇಳಲಾಗಿದೆ.

ಇದನ್ನು ಓದಿ: ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...