Homeಮುಖಪುಟಬುಡಕಟ್ಟು ನಾಯಕನ ಡಿಎನ್‌ಎ ಪರೀಕ್ಷೆ ಮಾಡಿಸುವ ಹೇಳಿಕೆ: ರಾಜಸ್ಥಾನದ ಶಿಕ್ಷಣ ಸಚಿವರ ವಿರುದ್ಧ ಆಕ್ರೋಶ

ಬುಡಕಟ್ಟು ನಾಯಕನ ಡಿಎನ್‌ಎ ಪರೀಕ್ಷೆ ಮಾಡಿಸುವ ಹೇಳಿಕೆ: ರಾಜಸ್ಥಾನದ ಶಿಕ್ಷಣ ಸಚಿವರ ವಿರುದ್ಧ ಆಕ್ರೋಶ

- Advertisement -
- Advertisement -

ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾಗಿರುವ ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ಅವರು, ಬುಡಕಟ್ಟು ಮುಖಂಡ ಮತ್ತು ಸಂಸದ ರಾಜ್‌ಕುಮಾರ್ ರೋಟ್ ಹಿಂದುವೋ ಅಲ್ಲವೋ ಎಂಬುವುದನ್ನು ಪರಿಶೀಲಿಸಲು ಡಿಎನ್‌ಎ ಪರೀಕ್ಷೆ ನಡೆಸಬೇಕು ಎನ್ನುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟು ಹಾಕಿದ್ದಾರೆ.

ಭಾರತೀಯ ಆದಿವಾಸಿ ಪಕ್ಷದ (ಬಿಎಪಿ) ಸಂಸದ ರಾಜ್‌ಕುಮಾರ್ ರೋಟ್ ಅವರು ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಹಿಂದೂ ಎಂದು ಗುರುತಿಸಿಕೊಳ್ಳಲು ನಿರಾಕರಿಸಿ ಹೇಳಿಕೆ ನೀಡಿದ್ದರು. ಅದಕ್ಕೆ ತಿರುಗೇಟು ನೀಡುವಾಗ ದಿಲಾವರ್ ಎಡವಟ್ಟು ಮಾಡಿಕೊಂಡಿದ್ದಾರೆ.

“ರಾಜ್‌ಕುಮಾರ್ ರೋಟ್ ಅವರು ತನ್ನನ್ನು ತಾನು ಹಿಂದೂ ಎಂದು ಗುರುತಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಹಾಗಾಗಿ, ಅವರನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಬೇಕು. ಅವರ ಪೂರ್ವಜರಲ್ಲಿ ಕೆಲವರು ತಮ್ಮ ವಂಶಾವಳಿಯ ಕುರಿತು ಬರೆಯುವವರಿದ್ದಾರೆ. ಅವರನ್ನೂ ಕೇಳಬಹುದು. ದೇಶ ಮತ್ತು ಸಮಾಜವನ್ನು ಒಡೆಯಲು ಪ್ರಯತ್ನಿಸುತ್ತಿರುವವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಸಚಿವ ಮದನ್ ದಿಲ್ವಾರ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಂಸದ ರಾಜಕುಮಾರ್ ರೋಟ್, “ಮದನ್ ದಿಲಾವರ್ ಅವರ ಮನಸ್ಥಿತಿಯನ್ನು ಪರಿಶೀಲಿಸಬೇಕು. ಜವಾಬ್ದಾರಿಯುತ ಹುದ್ದೆಯಲ್ಲಿರುವ ರಾಜಸ್ಥಾನದ ಶಿಕ್ಷಣ ಸಚಿವರಿಗೆ ಇಂತಹ ಭಾಷೆ ಹಿಡಿಸುವುದಿಲ್ಲ. ದಿಲಾವರ್ ಅವರೇ, ಶಿಕ್ಷಣ ಸಚಿವರಾಗಿ ಕಳೆದ ಆರು ತಿಂಗಳಲ್ಲಿ ಬುಡಕಟ್ಟು ಪ್ರದೇಶಗಳಲ್ಲಿನ ಶಿಕ್ಷಣಕ್ಕಾಗಿ ನೀವು ಏನು ಮಾಡಿದ್ದೀರಿ ಎಂಬುವುದನ್ನು ದಯವಿಟ್ಟು ತಿಳಿಸಿ. ನೀವು ಏನನ್ನೂ ಮಾಡಿಲ್ಲ. ಇದಕ್ಕೆ ಮುಂದಿನ ದಿನಗಳಲ್ಲಿ ಆದಿವಾಸಿಗಳು ನಿಮಗೆ ತಕ್ಕ ಉತ್ತರ ನೀಡಲಿದ್ದಾರೆ” ಎಂದಿದ್ದಾರೆ.

ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋಟಸಾರಾ ಕೂಡ ಸಚಿವರ ಹೇಳಿಕೆಯನ್ನು ಖಂಡಿಸಿದ್ದು. “ಶಿಕ್ಷಣ ಸಚಿವರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಅವರ ಹೇಳಿಕೆಯು ಬೌದ್ಧಿಕ ಅಸಾಮರ್ಥ್ಯವನ್ನು ತೋರಿಸುತ್ತದೆ” ಎಂದು ಹೇಳಿದ್ದಾರೆ.

ರಾಜ್‌ಕುಮಾರ್ ರೋಟ್ ಅವರು ಬುಡಕಟ್ಟು ಪ್ರಾಬಲ್ಯದ ಬನ್ಸ್ವಾರಾದಿಂದ ಬಿಎಪಿಯ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆದ್ದು, ಸಂಸದರಾಗಿದ್ದಾರೆ. ಬುಡಕಟ್ಟು ಜನಾಂಗದವ ನಂಬಿಕೆ ಮತ್ತು ಹಿಂದೂ ಧರ್ಮಗಳು ಭಿನ್ನವಾಗಿವೆ. ಬುಡಕಟ್ಟು ಸಮುದಾಯದವರು ಹಿಂದೂಗಳಲ್ಲ ಎಂದು ರೋಟ್ ಪ್ರತಿಪಾದಿಸುತ್ತಾರೆ.

ಇದನ್ನೂ ಓದಿ : 18ನೇ ಲೋಕಸಭೆ| ಇಂದಿನಿಂದ ಮೊದಲ ಅಧಿವೇಶನ: ಜೂ.26ರಂದು ಸ್ಪೀಕರ್ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...