Homeಮುಖಪುಟರಾಜಸ್ಥಾನ | ತನ್ನ ಸಚಿವನ ಫೋನನ್ನೇ ಕದ್ದಾಲಿಕೆ ಮಾಡಿದ ಬಿಜೆಪಿ ಸರ್ಕಾರ!

ರಾಜಸ್ಥಾನ | ತನ್ನ ಸಚಿವನ ಫೋನನ್ನೇ ಕದ್ದಾಲಿಕೆ ಮಾಡಿದ ಬಿಜೆಪಿ ಸರ್ಕಾರ!

- Advertisement -
- Advertisement -

ರಾಜಸ್ಥಾನದಲ್ಲಿ ತನ್ನದೇ ಪಕ್ಷದ ಸರ್ಕಾರ ತನ್ನ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಹೇಳುವ ಮೂಲಕ ಸಂಪುಟ ಸಚಿವ ಡಾ. ಕಿರೋರಿ ಲಾಲ್ ಮೀನಾ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಭಾರಿ ವಿವಾದ ಸೃಷ್ಟಿಸಿದ್ದ ಎಸ್‌ಐ (ಸಬ್-ಇನ್‌ಸ್ಪೆಕ್ಟರ್) ಪರೀಕ್ಷೆಯ ಭ್ರಷ್ಟಾಚಾರದ ಬಗ್ಗೆ ಆತಂಕ ವ್ಯಕ್ತಪಡಿಸಿದಾಗಿನಿಂದ ಸರ್ಕಾರ ತನ್ನ ಮೇಲೆ ನಿಗಾ ಇಟ್ಟಿದೆ ಎಂದು ಅವರು ಆರೋಪಿಸಿದ್ದಾರೆ. ರಾಜಸ್ಥಾನ | ಸಚಿವನ

ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಾ. ಮೀನಾ, “ನಾನು ಎಸ್‌ಐ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದಾಗ, ಸರ್ಕಾರ ನನ್ನನ್ನು ನಿರ್ಲಕ್ಷಿಸಿದೆ. ಬದಲಾಗಿ, ಈ ಹಿಂದಿನ ಸರ್ಕಾರದಂತೆಯೆ ನನ್ನನ್ನು ನಡೆಸಿಕೊಳ್ಳಲಾಗುತ್ತಿದೆ. ಸಿಐಡಿ ಪ್ರತಿ ಹಂತದಲ್ಲೂ ನನ್ನನ್ನು ಹಿಂಬಾಲಿಸುತ್ತಿದ್ದು, ನನ್ನ ಫೋನ್ ಸಂಭಾಷಣೆಗಳನ್ನು ರೆಕಾರ್ಡ್ ಮಾಡಲಾಗುತ್ತಿದೆ. ಆದರೆ ಇದು ನನ್ನ ಮೇಲೆ ಯಾವುದೆ ಪರಿಣಾಮ ಬೀರುವುದಿಲ್ಲ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೆಲವು ದಿನಗಳ ಹಿಂದೆ ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಡಾ. ಮೀನಾ, “ಇದು ವಂಚನೆಯ ಯುಗ. ಅವ್ಯವಸ್ಥೆಯನ್ನು ನಾವು ಒಪ್ಪಿದರೆ ಸಂಬಂಧಗಳು ಹಾಗೆಯೇ ಇರುತ್ತವೆ. ಆದರೆ ‘ಹೌದಪ್ಪ’ದ ಜಗತ್ತಿನಲ್ಲಿ ಯಾರಾದರೂ ‘ಇಲ್ಲ’ ಎಂದು ಹೇಳುವ ಧೈರ್ಯ ತೋರಿದರೆ, ಅವರು ನಾಶವಾಗುತ್ತಾರೆ. ಆದರೆ, ನಾನು ಕುರುಡಾಗಿ ಒಪ್ಪುವುದನ್ನು ನಂಬುವುದಿಲ್ಲ; ನಾನು ಸತ್ಯವನ್ನು ಮಾತನಾಡುತ್ತೇನೆ, ಅದು ನನಗೆ ನೋವುಂಟುಮಾಡಿದರೂ ಸಹ ನಾನು ಸತ್ಯ ಮಾತನಾಡುತ್ತೇನೆ.” ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದ ಭಜನ್ ಲಾಲ್ ಸರ್ಕಾರ ರಚನೆಯಾದಾಗಿನಿಂದ ಡಾ. ಕಿರೋರಿ ಲಾಲ್ ಮೀನಾ ಅವರ ಅತೃಪ್ತಿ ವ್ಯಕ್ತಪಡಿಸುತ್ತಲೆ ಇದ್ದಾರೆ. ರಾಜ್ಯದ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆಯುತ್ತಿದೆ ಎಂದು ಅವರು ಪದೇ ಪದೇ ಆರೋಪಿಸುತ್ತಲೆ ಇದ್ದಾರೆ. ರಾಜಸ್ಥಾನ | ಸಚಿವನ

ಒಂದು ಹಂತದಲ್ಲಿ, ತಾನು ಸಂಪುಟಕ್ಕೆ ರಾಜೀನಾಮೆ ನೀಡುವ ಸುಳಿವು ಕೂಡಾ ನೀಡಿದ್ದರು. ಅದಾಗ್ಯೂ, ವೈದ್ಯಕೀಯ ಇಲಾಖೆಯಂತಹ ನಿರ್ಣಾಯಕ ಖಾತೆಯನ್ನು ನೀಡದ ಕಾರಣ ಅವರು ನಿರಾಶರಾಗಿದ್ದು, ಇದೇ ಕಾರಣಕ್ಕೆ ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಮೂಲಗಳು ಸೂಚಿಸಿವೆ.

ಅದಾಗ್ಯೂ, ಬಿಜೆಪಿಯು ಅವರ ಸಹೋದರನನ್ನು ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಿ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿತ್ತು. ಆದರೆ ಮೀನಾ ಅವರ ಭದ್ರಕೋಟೆಯಲ್ಲೆ ಅವರು ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದು, ಇದು ಪಕ್ಷ ಮತ್ತು ಅವರ ನಡುವಿನ ಬಿರುಕನ್ನು ಇನ್ನಷ್ಟು ಹೆಚ್ಚಿಸಿತು.

ಸಚಿವ ಡಾ. ಮೀನಾ ಅವರ ಆರೋಪಗಳ ನಂತರ, ರಾಜಸ್ಥಾನ ವಿಧಾನಸಭೆಯಲ್ಲಿ ಭಾರಿ ರಾಜಕೀಯ ಹಣಾಹಣಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷವು ಫೋನ್ ಟ್ಯಾಪಿಂಗ್ ವಿಷಯವನ್ನು ಆಕ್ರಮಣಕಾರಿಯಾಗಿ ದಾಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಶೂನ್ಯ ವೇಳೆಯಿಂದ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯವರೆಗೆ, ವಿರೋಧ ಪಕ್ಷದ ಶಾಸಕರು ಸದನದಲ್ಲಿ ಸರ್ಕಾರದ ಮೇಲೆ ದಾಳಿ ಮಾಡಲು ಯೋಜಿಸಿದ್ದಾರೆ ಎಂದು ಅದು ಹೇಳಿದೆ.

ಈ ಮಧ್ಯೆ, ಹಿಂದಿನ ಸರ್ಕಾರದ ವಿರುದ್ಧ ಫೋನ್ ಟ್ಯಾಪಿಂಗ್‌ನ ಇದೇ ರೀತಿಯ ಆರೋಪಗಳನ್ನು ಎತ್ತಿ ತೋರಿಸುವ ಮೂಲಕ ಬಿಜೆಪಿ ಕಾಂಗ್ರೆಸ್ ಅನ್ನು ಎದುರಿಸುವ ಸಾಧ್ಯತೆಯಿದೆ. ಆದಾಗ್ಯೂ, ಈ ಪ್ರಕರಣದ ವಿಶೇಷವೇನೆಂದರೆ, ಹಾಲಿ ಸಚಿವರೊಬ್ಬರು ತಮ್ಮದೇ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಹಾಗಾಗಿ ಆಡಳಿತರೂಢ ಪಕ್ಷವನ್ನು ಇದು ಇಕ್ಕಟ್ಟಿನಲ್ಲಿ ಸಿಲುಕಿಸಲಿದೆ.

ಇದನ್ನೂಓದಿ:  ಸರ್ಕಾರದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ಸರ್ಕಾರದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....