Homeಮುಖಪುಟರಾಜಸ್ಥಾನ | ತನ್ನ ಸಚಿವನ ಫೋನನ್ನೇ ಕದ್ದಾಲಿಕೆ ಮಾಡಿದ ಬಿಜೆಪಿ ಸರ್ಕಾರ!

ರಾಜಸ್ಥಾನ | ತನ್ನ ಸಚಿವನ ಫೋನನ್ನೇ ಕದ್ದಾಲಿಕೆ ಮಾಡಿದ ಬಿಜೆಪಿ ಸರ್ಕಾರ!

- Advertisement -
- Advertisement -

ರಾಜಸ್ಥಾನದಲ್ಲಿ ತನ್ನದೇ ಪಕ್ಷದ ಸರ್ಕಾರ ತನ್ನ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಹೇಳುವ ಮೂಲಕ ಸಂಪುಟ ಸಚಿವ ಡಾ. ಕಿರೋರಿ ಲಾಲ್ ಮೀನಾ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಭಾರಿ ವಿವಾದ ಸೃಷ್ಟಿಸಿದ್ದ ಎಸ್‌ಐ (ಸಬ್-ಇನ್‌ಸ್ಪೆಕ್ಟರ್) ಪರೀಕ್ಷೆಯ ಭ್ರಷ್ಟಾಚಾರದ ಬಗ್ಗೆ ಆತಂಕ ವ್ಯಕ್ತಪಡಿಸಿದಾಗಿನಿಂದ ಸರ್ಕಾರ ತನ್ನ ಮೇಲೆ ನಿಗಾ ಇಟ್ಟಿದೆ ಎಂದು ಅವರು ಆರೋಪಿಸಿದ್ದಾರೆ. ರಾಜಸ್ಥಾನ | ಸಚಿವನ

ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಾ. ಮೀನಾ, “ನಾನು ಎಸ್‌ಐ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದಾಗ, ಸರ್ಕಾರ ನನ್ನನ್ನು ನಿರ್ಲಕ್ಷಿಸಿದೆ. ಬದಲಾಗಿ, ಈ ಹಿಂದಿನ ಸರ್ಕಾರದಂತೆಯೆ ನನ್ನನ್ನು ನಡೆಸಿಕೊಳ್ಳಲಾಗುತ್ತಿದೆ. ಸಿಐಡಿ ಪ್ರತಿ ಹಂತದಲ್ಲೂ ನನ್ನನ್ನು ಹಿಂಬಾಲಿಸುತ್ತಿದ್ದು, ನನ್ನ ಫೋನ್ ಸಂಭಾಷಣೆಗಳನ್ನು ರೆಕಾರ್ಡ್ ಮಾಡಲಾಗುತ್ತಿದೆ. ಆದರೆ ಇದು ನನ್ನ ಮೇಲೆ ಯಾವುದೆ ಪರಿಣಾಮ ಬೀರುವುದಿಲ್ಲ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೆಲವು ದಿನಗಳ ಹಿಂದೆ ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಡಾ. ಮೀನಾ, “ಇದು ವಂಚನೆಯ ಯುಗ. ಅವ್ಯವಸ್ಥೆಯನ್ನು ನಾವು ಒಪ್ಪಿದರೆ ಸಂಬಂಧಗಳು ಹಾಗೆಯೇ ಇರುತ್ತವೆ. ಆದರೆ ‘ಹೌದಪ್ಪ’ದ ಜಗತ್ತಿನಲ್ಲಿ ಯಾರಾದರೂ ‘ಇಲ್ಲ’ ಎಂದು ಹೇಳುವ ಧೈರ್ಯ ತೋರಿದರೆ, ಅವರು ನಾಶವಾಗುತ್ತಾರೆ. ಆದರೆ, ನಾನು ಕುರುಡಾಗಿ ಒಪ್ಪುವುದನ್ನು ನಂಬುವುದಿಲ್ಲ; ನಾನು ಸತ್ಯವನ್ನು ಮಾತನಾಡುತ್ತೇನೆ, ಅದು ನನಗೆ ನೋವುಂಟುಮಾಡಿದರೂ ಸಹ ನಾನು ಸತ್ಯ ಮಾತನಾಡುತ್ತೇನೆ.” ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದ ಭಜನ್ ಲಾಲ್ ಸರ್ಕಾರ ರಚನೆಯಾದಾಗಿನಿಂದ ಡಾ. ಕಿರೋರಿ ಲಾಲ್ ಮೀನಾ ಅವರ ಅತೃಪ್ತಿ ವ್ಯಕ್ತಪಡಿಸುತ್ತಲೆ ಇದ್ದಾರೆ. ರಾಜ್ಯದ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆಯುತ್ತಿದೆ ಎಂದು ಅವರು ಪದೇ ಪದೇ ಆರೋಪಿಸುತ್ತಲೆ ಇದ್ದಾರೆ. ರಾಜಸ್ಥಾನ | ಸಚಿವನ

ಒಂದು ಹಂತದಲ್ಲಿ, ತಾನು ಸಂಪುಟಕ್ಕೆ ರಾಜೀನಾಮೆ ನೀಡುವ ಸುಳಿವು ಕೂಡಾ ನೀಡಿದ್ದರು. ಅದಾಗ್ಯೂ, ವೈದ್ಯಕೀಯ ಇಲಾಖೆಯಂತಹ ನಿರ್ಣಾಯಕ ಖಾತೆಯನ್ನು ನೀಡದ ಕಾರಣ ಅವರು ನಿರಾಶರಾಗಿದ್ದು, ಇದೇ ಕಾರಣಕ್ಕೆ ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಮೂಲಗಳು ಸೂಚಿಸಿವೆ.

ಅದಾಗ್ಯೂ, ಬಿಜೆಪಿಯು ಅವರ ಸಹೋದರನನ್ನು ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಿ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿತ್ತು. ಆದರೆ ಮೀನಾ ಅವರ ಭದ್ರಕೋಟೆಯಲ್ಲೆ ಅವರು ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದು, ಇದು ಪಕ್ಷ ಮತ್ತು ಅವರ ನಡುವಿನ ಬಿರುಕನ್ನು ಇನ್ನಷ್ಟು ಹೆಚ್ಚಿಸಿತು.

ಸಚಿವ ಡಾ. ಮೀನಾ ಅವರ ಆರೋಪಗಳ ನಂತರ, ರಾಜಸ್ಥಾನ ವಿಧಾನಸಭೆಯಲ್ಲಿ ಭಾರಿ ರಾಜಕೀಯ ಹಣಾಹಣಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷವು ಫೋನ್ ಟ್ಯಾಪಿಂಗ್ ವಿಷಯವನ್ನು ಆಕ್ರಮಣಕಾರಿಯಾಗಿ ದಾಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಶೂನ್ಯ ವೇಳೆಯಿಂದ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯವರೆಗೆ, ವಿರೋಧ ಪಕ್ಷದ ಶಾಸಕರು ಸದನದಲ್ಲಿ ಸರ್ಕಾರದ ಮೇಲೆ ದಾಳಿ ಮಾಡಲು ಯೋಜಿಸಿದ್ದಾರೆ ಎಂದು ಅದು ಹೇಳಿದೆ.

ಈ ಮಧ್ಯೆ, ಹಿಂದಿನ ಸರ್ಕಾರದ ವಿರುದ್ಧ ಫೋನ್ ಟ್ಯಾಪಿಂಗ್‌ನ ಇದೇ ರೀತಿಯ ಆರೋಪಗಳನ್ನು ಎತ್ತಿ ತೋರಿಸುವ ಮೂಲಕ ಬಿಜೆಪಿ ಕಾಂಗ್ರೆಸ್ ಅನ್ನು ಎದುರಿಸುವ ಸಾಧ್ಯತೆಯಿದೆ. ಆದಾಗ್ಯೂ, ಈ ಪ್ರಕರಣದ ವಿಶೇಷವೇನೆಂದರೆ, ಹಾಲಿ ಸಚಿವರೊಬ್ಬರು ತಮ್ಮದೇ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಹಾಗಾಗಿ ಆಡಳಿತರೂಢ ಪಕ್ಷವನ್ನು ಇದು ಇಕ್ಕಟ್ಟಿನಲ್ಲಿ ಸಿಲುಕಿಸಲಿದೆ.

ಇದನ್ನೂಓದಿ:  ಸರ್ಕಾರದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ಸರ್ಕಾರದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...