Homeಮುಖಪುಟರಾಜಸ್ಥಾನ | ತನ್ನ ಸಚಿವನ ಫೋನನ್ನೇ ಕದ್ದಾಲಿಕೆ ಮಾಡಿದ ಬಿಜೆಪಿ ಸರ್ಕಾರ!

ರಾಜಸ್ಥಾನ | ತನ್ನ ಸಚಿವನ ಫೋನನ್ನೇ ಕದ್ದಾಲಿಕೆ ಮಾಡಿದ ಬಿಜೆಪಿ ಸರ್ಕಾರ!

- Advertisement -
- Advertisement -

ರಾಜಸ್ಥಾನದಲ್ಲಿ ತನ್ನದೇ ಪಕ್ಷದ ಸರ್ಕಾರ ತನ್ನ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಹೇಳುವ ಮೂಲಕ ಸಂಪುಟ ಸಚಿವ ಡಾ. ಕಿರೋರಿ ಲಾಲ್ ಮೀನಾ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಭಾರಿ ವಿವಾದ ಸೃಷ್ಟಿಸಿದ್ದ ಎಸ್‌ಐ (ಸಬ್-ಇನ್‌ಸ್ಪೆಕ್ಟರ್) ಪರೀಕ್ಷೆಯ ಭ್ರಷ್ಟಾಚಾರದ ಬಗ್ಗೆ ಆತಂಕ ವ್ಯಕ್ತಪಡಿಸಿದಾಗಿನಿಂದ ಸರ್ಕಾರ ತನ್ನ ಮೇಲೆ ನಿಗಾ ಇಟ್ಟಿದೆ ಎಂದು ಅವರು ಆರೋಪಿಸಿದ್ದಾರೆ. ರಾಜಸ್ಥಾನ | ಸಚಿವನ

ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಾ. ಮೀನಾ, “ನಾನು ಎಸ್‌ಐ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದಾಗ, ಸರ್ಕಾರ ನನ್ನನ್ನು ನಿರ್ಲಕ್ಷಿಸಿದೆ. ಬದಲಾಗಿ, ಈ ಹಿಂದಿನ ಸರ್ಕಾರದಂತೆಯೆ ನನ್ನನ್ನು ನಡೆಸಿಕೊಳ್ಳಲಾಗುತ್ತಿದೆ. ಸಿಐಡಿ ಪ್ರತಿ ಹಂತದಲ್ಲೂ ನನ್ನನ್ನು ಹಿಂಬಾಲಿಸುತ್ತಿದ್ದು, ನನ್ನ ಫೋನ್ ಸಂಭಾಷಣೆಗಳನ್ನು ರೆಕಾರ್ಡ್ ಮಾಡಲಾಗುತ್ತಿದೆ. ಆದರೆ ಇದು ನನ್ನ ಮೇಲೆ ಯಾವುದೆ ಪರಿಣಾಮ ಬೀರುವುದಿಲ್ಲ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೆಲವು ದಿನಗಳ ಹಿಂದೆ ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಡಾ. ಮೀನಾ, “ಇದು ವಂಚನೆಯ ಯುಗ. ಅವ್ಯವಸ್ಥೆಯನ್ನು ನಾವು ಒಪ್ಪಿದರೆ ಸಂಬಂಧಗಳು ಹಾಗೆಯೇ ಇರುತ್ತವೆ. ಆದರೆ ‘ಹೌದಪ್ಪ’ದ ಜಗತ್ತಿನಲ್ಲಿ ಯಾರಾದರೂ ‘ಇಲ್ಲ’ ಎಂದು ಹೇಳುವ ಧೈರ್ಯ ತೋರಿದರೆ, ಅವರು ನಾಶವಾಗುತ್ತಾರೆ. ಆದರೆ, ನಾನು ಕುರುಡಾಗಿ ಒಪ್ಪುವುದನ್ನು ನಂಬುವುದಿಲ್ಲ; ನಾನು ಸತ್ಯವನ್ನು ಮಾತನಾಡುತ್ತೇನೆ, ಅದು ನನಗೆ ನೋವುಂಟುಮಾಡಿದರೂ ಸಹ ನಾನು ಸತ್ಯ ಮಾತನಾಡುತ್ತೇನೆ.” ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದ ಭಜನ್ ಲಾಲ್ ಸರ್ಕಾರ ರಚನೆಯಾದಾಗಿನಿಂದ ಡಾ. ಕಿರೋರಿ ಲಾಲ್ ಮೀನಾ ಅವರ ಅತೃಪ್ತಿ ವ್ಯಕ್ತಪಡಿಸುತ್ತಲೆ ಇದ್ದಾರೆ. ರಾಜ್ಯದ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆಯುತ್ತಿದೆ ಎಂದು ಅವರು ಪದೇ ಪದೇ ಆರೋಪಿಸುತ್ತಲೆ ಇದ್ದಾರೆ. ರಾಜಸ್ಥಾನ | ಸಚಿವನ

ಒಂದು ಹಂತದಲ್ಲಿ, ತಾನು ಸಂಪುಟಕ್ಕೆ ರಾಜೀನಾಮೆ ನೀಡುವ ಸುಳಿವು ಕೂಡಾ ನೀಡಿದ್ದರು. ಅದಾಗ್ಯೂ, ವೈದ್ಯಕೀಯ ಇಲಾಖೆಯಂತಹ ನಿರ್ಣಾಯಕ ಖಾತೆಯನ್ನು ನೀಡದ ಕಾರಣ ಅವರು ನಿರಾಶರಾಗಿದ್ದು, ಇದೇ ಕಾರಣಕ್ಕೆ ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಮೂಲಗಳು ಸೂಚಿಸಿವೆ.

ಅದಾಗ್ಯೂ, ಬಿಜೆಪಿಯು ಅವರ ಸಹೋದರನನ್ನು ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಿ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿತ್ತು. ಆದರೆ ಮೀನಾ ಅವರ ಭದ್ರಕೋಟೆಯಲ್ಲೆ ಅವರು ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದು, ಇದು ಪಕ್ಷ ಮತ್ತು ಅವರ ನಡುವಿನ ಬಿರುಕನ್ನು ಇನ್ನಷ್ಟು ಹೆಚ್ಚಿಸಿತು.

ಸಚಿವ ಡಾ. ಮೀನಾ ಅವರ ಆರೋಪಗಳ ನಂತರ, ರಾಜಸ್ಥಾನ ವಿಧಾನಸಭೆಯಲ್ಲಿ ಭಾರಿ ರಾಜಕೀಯ ಹಣಾಹಣಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷವು ಫೋನ್ ಟ್ಯಾಪಿಂಗ್ ವಿಷಯವನ್ನು ಆಕ್ರಮಣಕಾರಿಯಾಗಿ ದಾಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಶೂನ್ಯ ವೇಳೆಯಿಂದ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯವರೆಗೆ, ವಿರೋಧ ಪಕ್ಷದ ಶಾಸಕರು ಸದನದಲ್ಲಿ ಸರ್ಕಾರದ ಮೇಲೆ ದಾಳಿ ಮಾಡಲು ಯೋಜಿಸಿದ್ದಾರೆ ಎಂದು ಅದು ಹೇಳಿದೆ.

ಈ ಮಧ್ಯೆ, ಹಿಂದಿನ ಸರ್ಕಾರದ ವಿರುದ್ಧ ಫೋನ್ ಟ್ಯಾಪಿಂಗ್‌ನ ಇದೇ ರೀತಿಯ ಆರೋಪಗಳನ್ನು ಎತ್ತಿ ತೋರಿಸುವ ಮೂಲಕ ಬಿಜೆಪಿ ಕಾಂಗ್ರೆಸ್ ಅನ್ನು ಎದುರಿಸುವ ಸಾಧ್ಯತೆಯಿದೆ. ಆದಾಗ್ಯೂ, ಈ ಪ್ರಕರಣದ ವಿಶೇಷವೇನೆಂದರೆ, ಹಾಲಿ ಸಚಿವರೊಬ್ಬರು ತಮ್ಮದೇ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಹಾಗಾಗಿ ಆಡಳಿತರೂಢ ಪಕ್ಷವನ್ನು ಇದು ಇಕ್ಕಟ್ಟಿನಲ್ಲಿ ಸಿಲುಕಿಸಲಿದೆ.

ಇದನ್ನೂಓದಿ:  ಸರ್ಕಾರದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ಸರ್ಕಾರದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...