Homeಮುಖಪುಟರಾಜಸ್ಥಾನ | ತನ್ನ ಸಚಿವನ ಫೋನನ್ನೇ ಕದ್ದಾಲಿಕೆ ಮಾಡಿದ ಬಿಜೆಪಿ ಸರ್ಕಾರ!

ರಾಜಸ್ಥಾನ | ತನ್ನ ಸಚಿವನ ಫೋನನ್ನೇ ಕದ್ದಾಲಿಕೆ ಮಾಡಿದ ಬಿಜೆಪಿ ಸರ್ಕಾರ!

- Advertisement -
- Advertisement -

ರಾಜಸ್ಥಾನದಲ್ಲಿ ತನ್ನದೇ ಪಕ್ಷದ ಸರ್ಕಾರ ತನ್ನ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಹೇಳುವ ಮೂಲಕ ಸಂಪುಟ ಸಚಿವ ಡಾ. ಕಿರೋರಿ ಲಾಲ್ ಮೀನಾ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಭಾರಿ ವಿವಾದ ಸೃಷ್ಟಿಸಿದ್ದ ಎಸ್‌ಐ (ಸಬ್-ಇನ್‌ಸ್ಪೆಕ್ಟರ್) ಪರೀಕ್ಷೆಯ ಭ್ರಷ್ಟಾಚಾರದ ಬಗ್ಗೆ ಆತಂಕ ವ್ಯಕ್ತಪಡಿಸಿದಾಗಿನಿಂದ ಸರ್ಕಾರ ತನ್ನ ಮೇಲೆ ನಿಗಾ ಇಟ್ಟಿದೆ ಎಂದು ಅವರು ಆರೋಪಿಸಿದ್ದಾರೆ. ರಾಜಸ್ಥಾನ | ಸಚಿವನ

ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಾ. ಮೀನಾ, “ನಾನು ಎಸ್‌ಐ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದಾಗ, ಸರ್ಕಾರ ನನ್ನನ್ನು ನಿರ್ಲಕ್ಷಿಸಿದೆ. ಬದಲಾಗಿ, ಈ ಹಿಂದಿನ ಸರ್ಕಾರದಂತೆಯೆ ನನ್ನನ್ನು ನಡೆಸಿಕೊಳ್ಳಲಾಗುತ್ತಿದೆ. ಸಿಐಡಿ ಪ್ರತಿ ಹಂತದಲ್ಲೂ ನನ್ನನ್ನು ಹಿಂಬಾಲಿಸುತ್ತಿದ್ದು, ನನ್ನ ಫೋನ್ ಸಂಭಾಷಣೆಗಳನ್ನು ರೆಕಾರ್ಡ್ ಮಾಡಲಾಗುತ್ತಿದೆ. ಆದರೆ ಇದು ನನ್ನ ಮೇಲೆ ಯಾವುದೆ ಪರಿಣಾಮ ಬೀರುವುದಿಲ್ಲ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೆಲವು ದಿನಗಳ ಹಿಂದೆ ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಡಾ. ಮೀನಾ, “ಇದು ವಂಚನೆಯ ಯುಗ. ಅವ್ಯವಸ್ಥೆಯನ್ನು ನಾವು ಒಪ್ಪಿದರೆ ಸಂಬಂಧಗಳು ಹಾಗೆಯೇ ಇರುತ್ತವೆ. ಆದರೆ ‘ಹೌದಪ್ಪ’ದ ಜಗತ್ತಿನಲ್ಲಿ ಯಾರಾದರೂ ‘ಇಲ್ಲ’ ಎಂದು ಹೇಳುವ ಧೈರ್ಯ ತೋರಿದರೆ, ಅವರು ನಾಶವಾಗುತ್ತಾರೆ. ಆದರೆ, ನಾನು ಕುರುಡಾಗಿ ಒಪ್ಪುವುದನ್ನು ನಂಬುವುದಿಲ್ಲ; ನಾನು ಸತ್ಯವನ್ನು ಮಾತನಾಡುತ್ತೇನೆ, ಅದು ನನಗೆ ನೋವುಂಟುಮಾಡಿದರೂ ಸಹ ನಾನು ಸತ್ಯ ಮಾತನಾಡುತ್ತೇನೆ.” ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದ ಭಜನ್ ಲಾಲ್ ಸರ್ಕಾರ ರಚನೆಯಾದಾಗಿನಿಂದ ಡಾ. ಕಿರೋರಿ ಲಾಲ್ ಮೀನಾ ಅವರ ಅತೃಪ್ತಿ ವ್ಯಕ್ತಪಡಿಸುತ್ತಲೆ ಇದ್ದಾರೆ. ರಾಜ್ಯದ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆಯುತ್ತಿದೆ ಎಂದು ಅವರು ಪದೇ ಪದೇ ಆರೋಪಿಸುತ್ತಲೆ ಇದ್ದಾರೆ. ರಾಜಸ್ಥಾನ | ಸಚಿವನ

ಒಂದು ಹಂತದಲ್ಲಿ, ತಾನು ಸಂಪುಟಕ್ಕೆ ರಾಜೀನಾಮೆ ನೀಡುವ ಸುಳಿವು ಕೂಡಾ ನೀಡಿದ್ದರು. ಅದಾಗ್ಯೂ, ವೈದ್ಯಕೀಯ ಇಲಾಖೆಯಂತಹ ನಿರ್ಣಾಯಕ ಖಾತೆಯನ್ನು ನೀಡದ ಕಾರಣ ಅವರು ನಿರಾಶರಾಗಿದ್ದು, ಇದೇ ಕಾರಣಕ್ಕೆ ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಮೂಲಗಳು ಸೂಚಿಸಿವೆ.

ಅದಾಗ್ಯೂ, ಬಿಜೆಪಿಯು ಅವರ ಸಹೋದರನನ್ನು ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಿ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿತ್ತು. ಆದರೆ ಮೀನಾ ಅವರ ಭದ್ರಕೋಟೆಯಲ್ಲೆ ಅವರು ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದು, ಇದು ಪಕ್ಷ ಮತ್ತು ಅವರ ನಡುವಿನ ಬಿರುಕನ್ನು ಇನ್ನಷ್ಟು ಹೆಚ್ಚಿಸಿತು.

ಸಚಿವ ಡಾ. ಮೀನಾ ಅವರ ಆರೋಪಗಳ ನಂತರ, ರಾಜಸ್ಥಾನ ವಿಧಾನಸಭೆಯಲ್ಲಿ ಭಾರಿ ರಾಜಕೀಯ ಹಣಾಹಣಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷವು ಫೋನ್ ಟ್ಯಾಪಿಂಗ್ ವಿಷಯವನ್ನು ಆಕ್ರಮಣಕಾರಿಯಾಗಿ ದಾಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಶೂನ್ಯ ವೇಳೆಯಿಂದ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯವರೆಗೆ, ವಿರೋಧ ಪಕ್ಷದ ಶಾಸಕರು ಸದನದಲ್ಲಿ ಸರ್ಕಾರದ ಮೇಲೆ ದಾಳಿ ಮಾಡಲು ಯೋಜಿಸಿದ್ದಾರೆ ಎಂದು ಅದು ಹೇಳಿದೆ.

ಈ ಮಧ್ಯೆ, ಹಿಂದಿನ ಸರ್ಕಾರದ ವಿರುದ್ಧ ಫೋನ್ ಟ್ಯಾಪಿಂಗ್‌ನ ಇದೇ ರೀತಿಯ ಆರೋಪಗಳನ್ನು ಎತ್ತಿ ತೋರಿಸುವ ಮೂಲಕ ಬಿಜೆಪಿ ಕಾಂಗ್ರೆಸ್ ಅನ್ನು ಎದುರಿಸುವ ಸಾಧ್ಯತೆಯಿದೆ. ಆದಾಗ್ಯೂ, ಈ ಪ್ರಕರಣದ ವಿಶೇಷವೇನೆಂದರೆ, ಹಾಲಿ ಸಚಿವರೊಬ್ಬರು ತಮ್ಮದೇ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಹಾಗಾಗಿ ಆಡಳಿತರೂಢ ಪಕ್ಷವನ್ನು ಇದು ಇಕ್ಕಟ್ಟಿನಲ್ಲಿ ಸಿಲುಕಿಸಲಿದೆ.

ಇದನ್ನೂಓದಿ:  ಸರ್ಕಾರದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ಸರ್ಕಾರದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...