Homeಮುಖಪುಟಪತಂಜಲಿ ಕೊರೊನಾ ಔಷಧಿ ಮಾರಿದರೆ ಕ್ರಮ: ರಾಜಸ್ಥಾನ ಸಚಿವರ ಎಚ್ಚರಿಕೆ

ಪತಂಜಲಿ ಕೊರೊನಾ ಔಷಧಿ ಮಾರಿದರೆ ಕ್ರಮ: ರಾಜಸ್ಥಾನ ಸಚಿವರ ಎಚ್ಚರಿಕೆ

- Advertisement -
- Advertisement -

ಕೊರೊನಾ ವೈರಸ್ ರೋಗವನ್ನು ಗುಣಪಡಿಸುವುದಾಗಿ ಹೇಳಿಕೊಳ್ಳುವ ಪತಂಜಲಿ  ಕಂಪನಿಯ ಔಷಧಿಯನ್ನು ಯಾರಾದರೂ ಮಾರಿದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾ ಹೇಳಿದ್ದಾರೆ.

ಅಲ್ಲದೆ ಕೊರೊನಾ ವೈರಸ್ ರೋಗವನ್ನು ಗುಣಪಡಿಸುವುದಾಗಿ ಹೇಳಿಕೊಳ್ಳುವ ಪತಂಜಲಿ ಔಷಧಿಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲು ಬಾಬಾ ರಾಮದೇವ್‌ ರಾಜ್ಯ ಸರ್ಕಾರದಿಂದ ಅನುಮತಿ ಪಡೆದಿಲ್ಲ ಎಂದು ತಿಳಿಸಿದ್ದಾರೆ.

ಔಷಧದ ಪ್ರಾಯೋಗಿಕ ಪರೀಕ್ಷೆಗಳಿಗೆ ರಾಜ್ಯ ಸರ್ಕಾರವು ಯಾವುದೇ ಪ್ರಸ್ತಾಪವನ್ನು ಸ್ವೀಕರಿಸಿಲ್ಲ ಮತ್ತು ಅವರು ಈ ವಿಷಯದಲ್ಲಿ ಯಾರಿಗೂ ಯಾವುದೇ ಅನುಮತಿ ನೀಡಿಲ್ಲ ಎಂದು ಶರ್ಮಾ ಹೇಳಿದ್ದಾರೆ.

“ರಾಜ್ಯ ಸರ್ಕಾರದ ಅನುಮತಿಯಿಲ್ಲದೆ ಮಾನವ ಪ್ರಯೋಗಗಳನ್ನು ನಡೆಸಲು ಸಾಧ್ಯವಿಲ್ಲ. ಸರ್ಕಾರದ ಅನುಮತಿಯಿಲ್ಲದೆ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸುವವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ”ಎಂದು ಅವರು ಎಚ್ಚರಿಸಿದ್ದಾರೆ.

ಈ ನಡುವೆ ಪತಂಜಲಿ ಆಯುರ್ವೇದದ ತಮ್ಮ ಸಂಶೋಧಕರ ತಂಡವು ಕೋವಿಡ್ -19 ಅನ್ನು ಗುಣಪಡಿಸಲು ಔಷಧಿಯನ್ನು ಕಂಡುಹಿಡಿದಿದೆ ಎಂದು ಬಾಬಾ ರಾಮದೇವ್ ಮಂಗಳವಾರ ಹೇಳಿದ್ದಾರೆ. ಜೈಪುರದ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ನಿಮ್ಸ್) ವಿಶ್ವವಿದ್ಯಾಲಯದ ಜೊತೆಗೆ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲಾಗಿದೆ ಎಂದು ರಾಮದೇವ್ ತಿಳಿಸಿದ್ದಾರೆ.

ಕ್ಲಿನಿಕಲ್ ಪ್ರಯೋಗಗಳಿಗೆ ಅಗತ್ಯವಾದ ಎಲ್ಲ ಅನುಮೋದನೆಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಪ್ರಯೋಗಗಳನ್ನು ನಡೆಸುವ ಮೊದಲು ಸಿಟಿಆರ್‌ಐನಿಂದ ಅನುಮತಿ ಪಡೆಯಲಾಗಿದೆ ಎಂದು ನಿಮ್ಸ್ ನಿರ್ದೇಶಕ ಡಾ.ಅನುರಾಗ್ ತೋಮರ್ ಹೇಳಿದರು.

ಆಯುಷ್ ಸಚಿವಾಲಯವು ಬಾಬಾ ರಾಮದೇವ್ ಅವರಿಗೆ ಔಷಧದ ಬಗ್ಗೆ ವಿವರಗಳನ್ನು ನೀಡುವಂತೆ ಮತ್ತು ಉತ್ಪನ್ನಗಳ ಜಾಹೀರಾತನ್ನು ನಿಲ್ಲಿಸುವಂತೆ ಕೇಳಿದೆ.

ಕೋವಿಡ್ -19 ಅನ್ನು ಗುಣಪಡಿಸಲು ಬಾಬಾ ರಾಮ್‌ದೇವ್ ಹೇಳಿಕೊಂಡ ಔಷಧಿಯನ್ನು ಯಾರಾದರೂ ಮಾರಾಟ ಮಾಡುತ್ತಿರುವುದು ಕಂಡುಬಂದರೆ, ಆ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶರ್ಮಾ ಎಚ್ಚರಿಸಿದ್ದಾರೆ.

ಔಷಧ ಮತ್ತು ಸೌಂದರ್ಯವರ್ಧಕ ಕಾಯ್ದೆ 1940 ಮತ್ತು 1945 ರ ಅಡಿಯಲ್ಲಿ ಕೇಂದ್ರವು 2020 ರ ಜೂನ್ 21 ರಂದು ಹೊರಡಿಸಿದ ಗೆಜೆಟ್ ಅಧಿಸೂಚನೆಯಲ್ಲಿ ಆಯುಷ್ ಸಚಿವಾಲಯದ ಅನುಮತಿಯಿಲ್ಲದೆ ಕೋವಿಡ್ -19ಗೆ ಯಾರೂ ಆಯುರ್ವೇದ ಔಷಧವನ್ನು ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ.

ಕೋವಿಡ್ -19 ರೋಗಿಗಳ ಚಿಕಿತ್ಸೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ, ಆಯುಷ್ ಸಚಿವಾಲಯ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾರ್ಗಸೂಚಿಗಳನ್ನು ರಾಜಸ್ಥಾನ ಸರ್ಕಾರ ಪಾಲಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಕೋವಿಡ್-19ಗೆ ಚಿಕಿತ್ಸೆ ಕಂಡುಹಿಡಿದಿರುವುದಾಗಿ ಪ್ರಚಾರ ನೀಡದಂತೆ ಪತಂಜಲಿಗೆ, ಆಯುಶ್ ಸಚಿವಾಲಯ ಬುಧವಾರ ಆಗ್ರಹಿಸಿದ ನಂತರ ಕೊರೊನ ಕಿಟ್ ಗೆ ಯಾವುದೇ ಪರವಾನಗಿ ನೀಡಿಲ್ಲ ಎಂದು ಉತ್ತರಾಖಂಡ ಸರ್ಕಾರ ಹೇಳಿರುವುದಾಗಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಹಾಗೆಯೇ ಈ ಸಂಬಂಧವಾಗಿ ಪತಂಜಲಿ ಅಧ್ಯಯನ ನಡೆಸಿದ್ದಾಗಿ ಹೇಳಿಕೊಂಡಿದ್ದ, ಜೈಪುರದ ಖಾಸಗಿ ಆಸ್ಪತ್ರೆ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ (ಎನ್ ಐ ಎಮ್ ಎಸ್) ನಲ್ಲಿ, ಈ ಕಾರಣಕ್ಕಾಗಿ ಯಾವುದೇ ಕ್ಲಿನಿಕಲ್ ಪರೀಕ್ಷೆ ನಡೆದಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ರಾಜಸ್ಥಾನ ಸರ್ಕಾರ ಹೇಳಿರುವುದಾಗಿಯೂ ಪತ್ರಿಕೆ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...