Homeಮುಖಪುಟರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

- Advertisement -
- Advertisement -

ರಾಜಸ್ಥಾನದ ವಾಲ್ಡ್ ಸಿಟಿಯಲ್ಲಿರುವ ಜುಮಾ ಮಸೀದಿಯ ಹೊರಗೆ ಬಿಜೆಪಿಯ ಶಾಸಕನೊಬ್ಬ ಗುಂಪುಕಟ್ಟಿ ಘೋಷಣೆ ಕೂಗಿರುವ ಘಟನೆ ಶುಕ್ರವಾರ ನಡೆದಿದೆ. ದುಷ್ಕರ್ಮಿ ಗುಂಪಿನ ನೇತೃತ್ವ ವಹಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೈಪುರದ ಪೊಲೀಸರು ಶಾಸಕನ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ರಾಜಸ್ಥಾನ

ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ. ಅದಾಗ್ಯೂ, ನಂತರ ಶಾಸಕ ಆಚಾರ್ಯ ಅವರು ಘಟನೆಗೆ ವಿಷಾದ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಮಸೀದಿಗಳಿಗೆ ಪ್ರವೇಶಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಆಚಾರ್ಯ, ಬಿಜೆಪಿ ನಾಯಕರು ಮತ್ತು ಕಾರ್ಯಕರ್ತ ದುಷ್ಕರ್ಮಿಗಳೊಂದಿಗೆ ಆಕ್ರಮಣಕಾರಿ ಘೋಷಣೆಗಳನ್ನು ಕೂಗಿದ್ದು, ಕೇಸರಿ ಧ್ವಜಗಳು ಮತ್ತು ಟಾರ್ಚ್‌ಗಳನ್ನು ಹಿಡಿದು ಮಸೀದಿ ಆವರಣದಲ್ಲಿ ಪೋಸ್ಟರ್‌ಗಳನ್ನು ಹಾಕಿದ್ದರು ಎಂದು ಆರೋಪಿಸಲಾಗಿದೆ.

ಜುಮಾ ಮಸೀದಿ ಸಮಿತಿಯ ಸದಸ್ಯ ಹಫೀಜ್ ಮನ್ಸೂರ್ ಅಲಿ ಖಾನ್, ಆಚಾರ್ಯ ರಾತ್ರಿ 8:30 ರ ಸುಮಾರಿಗೆ ಆವರಣಕ್ಕೆ ಪ್ರವೇಶಿಸಿ, ಗೇಟ್‌ನಲ್ಲಿ “ಪಾಕಿಸ್ತಾನ ಮುರ್ದಾಬಾದ್” ಪೋಸ್ಟರ್ ಅನ್ನು ಇರಿಸಿ “ಜೈ ಶ್ರೀ ರಾಮ್” ಎಂದು ಕೂಗಿದರು ಎಂದು ಹೇಳಿದ್ದಾರೆ. ಘಟನೆ ಭದ್ರತಾ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಇದರಿಂದಾಗಿ ಮಸೀದಿ ಪಕ್ಕದ ಬಾಡಿ ಚೌಪರ್ ಪ್ರದೇಶದ ಉದ್ವಿಗ್ನಗೊಂಡಿದೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಶಾಸಕರಾದ ರಫೀಕ್ ಖಾನ್ ಮತ್ತು ಅಮೀನ್ ಕಾಗ್ಜಿ, ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಅವರೊಂದಿಗೆ ಮಧ್ಯಪ್ರವೇಶಿಸಿ ಪರಿಸ್ಥಿತಿ ಉಲ್ಬಣಗೊಳ್ಳದಂತೆ ತಡೆಯುವ ಪ್ರಯತ್ನ ನಡೆಸಿದ್ದಾರೆ ಎಂದು ವರದಿಯಾಗಿದೆ.

ಜುಮಾ ಮಸೀದಿ ಸಮಿತಿಯ ದೂರಿನ ಮೇರೆಗೆ ಪೊಲೀಸರು ಬಿಜೆಪಿ ಶಾಸಕ ಆಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 298 (ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವುದು), 300 (ಧಾರ್ಮಿಕ ಸಭೆಗೆ ತೊಂದರೆ ನೀಡುವುದು), 302 (ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶದಿಂದ ಪದಗಳನ್ನು ಉಚ್ಚರಿಸುವುದು) ಮತ್ತು 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

“ಶುಕ್ರವಾರ ರಾತ್ರಿಯ ಪರಿಸ್ಥಿತಿ ಅತ್ಯಂತ ಉದ್ವಿಗ್ನವಾಗಿತ್ತು. ನಾವು ಸಾಕಷ್ಟು ಕಷ್ಟಪಟ್ಟು ಜನಸಮೂಹವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೇವೆ.” ಎಂದು ಮನಕ್ ಚೌಕ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಗುರು ಭೂಪೇಂದ್ರ ಸಿಂಗ್ ಹೇಳಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕರಾದ ಕಾಗ್ಜಿ ಮತ್ತು ಖಾನ್ ಅವರು ಬಿಜೆಪಿ ಶಾಸಕ ಆಚಾರ್ಯ ಅವರ ನಡೆಗಳು ಮುಸ್ಲಿಮರನ್ನು ತೀವ್ರವಾಗಿ ನೋಯಿಸಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅದಾಗ್ಯೂ, ಬಿಜೆಪಿ ತನ್ನ ಶಾಸಕನ ನಡೆಯಿಂದ ಅಂತರ ಕಾಪಾಡಿಕೊಂಡಿದೆ. ಪಕ್ಷದ ರಾಜ್ಯ ಅಧ್ಯಕ್ಷ ಮದನ್ ರಾಥೋಡ್ ಪ್ರತಿಕ್ರಿಯಿಸಿ, “ನಾನು ಬಲ್ಮುಕುಂದ್ ಆಚಾರ್ಯ ಅವರೊಂದಿಗೆ ಮಾತನಾಡಿದೆ. ಅವರು ಪಹಲ್ಗಾಮ್ ಘಟನೆಯ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವುದಾಗಿ ಹೇಳಿದರು. ಮಸೀದಿಗೆ ತಲುಪಿದ ಜನಸಮೂಹವನ್ನು ಶಾಂತಗೊಳಿಸಲು ತಾನು ಪ್ರಯತ್ನಿಸುತ್ತಿರುವುದಾಗಿ ಅವರು ಹೇಳಿಕೊಂಡರು” ಎಂದು ಹೇಳಿದ್ದಾರೆ.

“ಆದಾಗ್ಯೂ, ಯಾರೂ ಮಸೀದಿಗೆ ಪ್ರವೇಶಿಸಬಾರದು ಎಂದು ನಾನು ಅವರಿಗೆ ದೃಢವಾಗಿ ಹೇಳಿದೆ. ಅಂತಹ ಕ್ರಮಗಳು ಕೋಮು ವಿಭಜನೆಗಳನ್ನು ಸೃಷ್ಟಿಸುತ್ತವೆ. ನಾವು ರಾಷ್ಟ್ರವಿರೋಧಿ ಶಕ್ತಿಗಳ ವಿರುದ್ಧ ಒಗ್ಗಟ್ಟಿನಿಂದ ಇರಬೇಕು, ಮುಗ್ಧ ನಾಗರಿಕರನ್ನು ಗುರಿಯಾಗಿಸಬಾರದು. ನಾವು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇವೆ.” ಎಂದು ಹೇಳಿದ್ದಾರೆ.

ಹವಾ ಮಹಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಆಚಾರ್ಯ ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಅವರು ಈ ಹಿಂದೆ ಮಾಂಸ ಸೇವನೆ, ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆ, ಶಾಲೆಗೆ ಹಿಜಾಬ್ ಧರಿಸಿದ ಹುಡುಗಿಯರು ವಿರುದ್ಧ ಪ್ರೊಪಗಾಂಡ ಹರಡಿದ್ದರು. ಅಲ್ಲದೆ, ಜೈಪುರದಿಂದ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನಿರಾಶ್ರಿತರನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ್ದರು. ಅವರು ಹಥೋಜ್ ಧಾಮ್ ದೇವಾಲಯದ ಮುಖ್ಯ ಅರ್ಚಕ ಕೂಡಾ ಆಗಿದ್ದಾರೆ. ರಾಜಸ್ಥಾನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. CM has correctly told. Sangha Parivar has not supported Independence Movement.In fact they have supported Britishers. Now they are making false propaganda.

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...