Homeಮುಖಪುಟರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

- Advertisement -
- Advertisement -

ರಾಜಸ್ಥಾನದ ವಾಲ್ಡ್ ಸಿಟಿಯಲ್ಲಿರುವ ಜುಮಾ ಮಸೀದಿಯ ಹೊರಗೆ ಬಿಜೆಪಿಯ ಶಾಸಕನೊಬ್ಬ ಗುಂಪುಕಟ್ಟಿ ಘೋಷಣೆ ಕೂಗಿರುವ ಘಟನೆ ಶುಕ್ರವಾರ ನಡೆದಿದೆ. ದುಷ್ಕರ್ಮಿ ಗುಂಪಿನ ನೇತೃತ್ವ ವಹಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೈಪುರದ ಪೊಲೀಸರು ಶಾಸಕನ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ರಾಜಸ್ಥಾನ

ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ. ಅದಾಗ್ಯೂ, ನಂತರ ಶಾಸಕ ಆಚಾರ್ಯ ಅವರು ಘಟನೆಗೆ ವಿಷಾದ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಮಸೀದಿಗಳಿಗೆ ಪ್ರವೇಶಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಆಚಾರ್ಯ, ಬಿಜೆಪಿ ನಾಯಕರು ಮತ್ತು ಕಾರ್ಯಕರ್ತ ದುಷ್ಕರ್ಮಿಗಳೊಂದಿಗೆ ಆಕ್ರಮಣಕಾರಿ ಘೋಷಣೆಗಳನ್ನು ಕೂಗಿದ್ದು, ಕೇಸರಿ ಧ್ವಜಗಳು ಮತ್ತು ಟಾರ್ಚ್‌ಗಳನ್ನು ಹಿಡಿದು ಮಸೀದಿ ಆವರಣದಲ್ಲಿ ಪೋಸ್ಟರ್‌ಗಳನ್ನು ಹಾಕಿದ್ದರು ಎಂದು ಆರೋಪಿಸಲಾಗಿದೆ.

ಜುಮಾ ಮಸೀದಿ ಸಮಿತಿಯ ಸದಸ್ಯ ಹಫೀಜ್ ಮನ್ಸೂರ್ ಅಲಿ ಖಾನ್, ಆಚಾರ್ಯ ರಾತ್ರಿ 8:30 ರ ಸುಮಾರಿಗೆ ಆವರಣಕ್ಕೆ ಪ್ರವೇಶಿಸಿ, ಗೇಟ್‌ನಲ್ಲಿ “ಪಾಕಿಸ್ತಾನ ಮುರ್ದಾಬಾದ್” ಪೋಸ್ಟರ್ ಅನ್ನು ಇರಿಸಿ “ಜೈ ಶ್ರೀ ರಾಮ್” ಎಂದು ಕೂಗಿದರು ಎಂದು ಹೇಳಿದ್ದಾರೆ. ಘಟನೆ ಭದ್ರತಾ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಇದರಿಂದಾಗಿ ಮಸೀದಿ ಪಕ್ಕದ ಬಾಡಿ ಚೌಪರ್ ಪ್ರದೇಶದ ಉದ್ವಿಗ್ನಗೊಂಡಿದೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಶಾಸಕರಾದ ರಫೀಕ್ ಖಾನ್ ಮತ್ತು ಅಮೀನ್ ಕಾಗ್ಜಿ, ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಅವರೊಂದಿಗೆ ಮಧ್ಯಪ್ರವೇಶಿಸಿ ಪರಿಸ್ಥಿತಿ ಉಲ್ಬಣಗೊಳ್ಳದಂತೆ ತಡೆಯುವ ಪ್ರಯತ್ನ ನಡೆಸಿದ್ದಾರೆ ಎಂದು ವರದಿಯಾಗಿದೆ.

ಜುಮಾ ಮಸೀದಿ ಸಮಿತಿಯ ದೂರಿನ ಮೇರೆಗೆ ಪೊಲೀಸರು ಬಿಜೆಪಿ ಶಾಸಕ ಆಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 298 (ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವುದು), 300 (ಧಾರ್ಮಿಕ ಸಭೆಗೆ ತೊಂದರೆ ನೀಡುವುದು), 302 (ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶದಿಂದ ಪದಗಳನ್ನು ಉಚ್ಚರಿಸುವುದು) ಮತ್ತು 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

“ಶುಕ್ರವಾರ ರಾತ್ರಿಯ ಪರಿಸ್ಥಿತಿ ಅತ್ಯಂತ ಉದ್ವಿಗ್ನವಾಗಿತ್ತು. ನಾವು ಸಾಕಷ್ಟು ಕಷ್ಟಪಟ್ಟು ಜನಸಮೂಹವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೇವೆ.” ಎಂದು ಮನಕ್ ಚೌಕ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಗುರು ಭೂಪೇಂದ್ರ ಸಿಂಗ್ ಹೇಳಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕರಾದ ಕಾಗ್ಜಿ ಮತ್ತು ಖಾನ್ ಅವರು ಬಿಜೆಪಿ ಶಾಸಕ ಆಚಾರ್ಯ ಅವರ ನಡೆಗಳು ಮುಸ್ಲಿಮರನ್ನು ತೀವ್ರವಾಗಿ ನೋಯಿಸಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅದಾಗ್ಯೂ, ಬಿಜೆಪಿ ತನ್ನ ಶಾಸಕನ ನಡೆಯಿಂದ ಅಂತರ ಕಾಪಾಡಿಕೊಂಡಿದೆ. ಪಕ್ಷದ ರಾಜ್ಯ ಅಧ್ಯಕ್ಷ ಮದನ್ ರಾಥೋಡ್ ಪ್ರತಿಕ್ರಿಯಿಸಿ, “ನಾನು ಬಲ್ಮುಕುಂದ್ ಆಚಾರ್ಯ ಅವರೊಂದಿಗೆ ಮಾತನಾಡಿದೆ. ಅವರು ಪಹಲ್ಗಾಮ್ ಘಟನೆಯ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವುದಾಗಿ ಹೇಳಿದರು. ಮಸೀದಿಗೆ ತಲುಪಿದ ಜನಸಮೂಹವನ್ನು ಶಾಂತಗೊಳಿಸಲು ತಾನು ಪ್ರಯತ್ನಿಸುತ್ತಿರುವುದಾಗಿ ಅವರು ಹೇಳಿಕೊಂಡರು” ಎಂದು ಹೇಳಿದ್ದಾರೆ.

“ಆದಾಗ್ಯೂ, ಯಾರೂ ಮಸೀದಿಗೆ ಪ್ರವೇಶಿಸಬಾರದು ಎಂದು ನಾನು ಅವರಿಗೆ ದೃಢವಾಗಿ ಹೇಳಿದೆ. ಅಂತಹ ಕ್ರಮಗಳು ಕೋಮು ವಿಭಜನೆಗಳನ್ನು ಸೃಷ್ಟಿಸುತ್ತವೆ. ನಾವು ರಾಷ್ಟ್ರವಿರೋಧಿ ಶಕ್ತಿಗಳ ವಿರುದ್ಧ ಒಗ್ಗಟ್ಟಿನಿಂದ ಇರಬೇಕು, ಮುಗ್ಧ ನಾಗರಿಕರನ್ನು ಗುರಿಯಾಗಿಸಬಾರದು. ನಾವು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇವೆ.” ಎಂದು ಹೇಳಿದ್ದಾರೆ.

ಹವಾ ಮಹಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಆಚಾರ್ಯ ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಅವರು ಈ ಹಿಂದೆ ಮಾಂಸ ಸೇವನೆ, ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆ, ಶಾಲೆಗೆ ಹಿಜಾಬ್ ಧರಿಸಿದ ಹುಡುಗಿಯರು ವಿರುದ್ಧ ಪ್ರೊಪಗಾಂಡ ಹರಡಿದ್ದರು. ಅಲ್ಲದೆ, ಜೈಪುರದಿಂದ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನಿರಾಶ್ರಿತರನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ್ದರು. ಅವರು ಹಥೋಜ್ ಧಾಮ್ ದೇವಾಲಯದ ಮುಖ್ಯ ಅರ್ಚಕ ಕೂಡಾ ಆಗಿದ್ದಾರೆ. ರಾಜಸ್ಥಾನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. CM has correctly told. Sangha Parivar has not supported Independence Movement.In fact they have supported Britishers. Now they are making false propaganda.

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...