Homeಮುಖಪುಟರಾಜಸ್ಥಾನ | ನಿರ್ಗಮಿತ ಸರಪಂಚ್‌ಗಳನ್ನೆ ಪಂಚಾಯಿತಿ ಆಡಳಿತಾಧಿಕಾರಿಯಾಗಿ ನೇಮಕಕ್ಕೆ ಬಿಜೆಪಿ ಸರ್ಕಾರ ನಿರ್ಧಾರ; ಕಾಂಗ್ರೆಸ್ ವಿರೋಧ

ರಾಜಸ್ಥಾನ | ನಿರ್ಗಮಿತ ಸರಪಂಚ್‌ಗಳನ್ನೆ ಪಂಚಾಯಿತಿ ಆಡಳಿತಾಧಿಕಾರಿಯಾಗಿ ನೇಮಕಕ್ಕೆ ಬಿಜೆಪಿ ಸರ್ಕಾರ ನಿರ್ಧಾರ; ಕಾಂಗ್ರೆಸ್ ವಿರೋಧ

- Advertisement -
- Advertisement -

ಅಧಿಕಾರಾವಧಿ ಮುಗಿದು ಹೊರಹೋಗುವ ಸರಪಂಚರನ್ನೆ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳಾಗಿ ನೇಮಿಸುವ ಬಗ್ಗೆ ರಾಜಸ್ಥಾನದ ಬಿಜೆಪಿ ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದ್ದು, ಈ ಕ್ರಮವು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ವಿಳಂಬಗೊಳಿಸುತ್ತದೆ ಎಂದು ಆರೋಪಿಸಿದೆ. ರಾಜಸ್ಥಾನ

ರಾಜ್ಯ ಕಾಂಗ್ರೆಸ್‌ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಿ.ಬಿ. ಯಾದವ್ ಅವರು ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರಿಗೆ ಪತ್ರ ಬರೆದು, ಸರ್ಕಾರವು ಸಕಾಲಿಕವಾಗಿ ಪಂಚಾಯತ್ ಚುನಾವಣೆಗಳನ್ನು ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಚುನಾವಣೆಗಳನ್ನು ವಿಳಂಬಗೊಳಿಸುವ ನಿರ್ಧಾರವು ಸಂವಿಧಾನದ 243-ಇ ವಿಧಿ ಮತ್ತು 1994 ರ ರಾಜಸ್ಥಾನ ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 95 ರ ವಿರುದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.  

“ಐದು ವರ್ಷಗಳ ಅವಧಿ ಮುಗಿದ ನಂತರ ಯಾವುದೇ ಸಂದರ್ಭಗಳಲ್ಲಿ ಅಧಿಕಾರಾವಧಿಯನ್ನು ವಿಸ್ತರಿಸಲು ಅಥವಾ ಚುನಾವಣೆಗಳನ್ನು ಮುಂದೂಡಲು ಅನುಮತಿಸುವ ಯಾವುದೇ ನಿಬಂಧನೆ ಸಂವಿಧಾನ ಅಥವಾ ಪಂಚಾಯತ್ ರಾಜ್ ಕಾಯ್ದೆಯಲ್ಲಿ ಇಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುರುವಾರ, ರಾಜ್ಯ ಸರ್ಕಾರವು ಅಧಿಕಾರಾವಧಿ ಮುಕ್ತಾಯಗೊಳ್ಳಲಿರುವ ಗ್ರಾಮ ಪಂಚಾಯಿತಿಗಳಿಗೆ ಹೊರಹೋಗುವ ಸರಪಂಚರನ್ನು ಮಧ್ಯಂತರ ಆಡಳಿತಾಧಿಕಾರಿಗಳಾಗಿ ನೇಮಿಸುವ ಅಧಿಸೂಚನೆಯನ್ನು ಹೊರಡಿಸಿತ್ತು.

ರಾಜಸ್ಥಾನದಾದ್ಯಂತ 6,759 ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಜನವರಿ 17, 2024 ರಂದು ಕೊನೆಗೊಳ್ಳಲಿದೆ. ಅಧಿಕೃತ ಮೂಲಗಳ ಪ್ರಕಾರ, ಸರ್ಕಾರವು ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಉತ್ತರಾಖಂಡಗಳಲ್ಲಿ ಜಾರಿಗೆ ತಂದಿರುವ ಇದೇ ರೀತಿಯ ಮಾದರಿಗಳನ್ನು ಅಧ್ಯಯನ ಮಾಡಿ ನಿರ್ಧಾರವನ್ನು ಅಂತಿಮಗೊಳಿಸಿದೆ. ಈ ಬಗ್ಗೆ ಕಾನೂನು ಸಲಹೆ ಪಡೆದು, ಸರಪಂಚ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಯಿತು. ಅವರು ಈ ಕ್ರಮಕ್ಕೆ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಧಿಸೂಚನೆಯು, ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯತ್‌ಗಳಲ್ಲಿ ಆಡಳಿತಾಧಿಕಾರಿಗಳ ನೇಮಕಾತಿ ಮತ್ತು ಆಡಳಿತ ಸಮಿತಿಗಳ ರಚನೆಯ ಮೇಲ್ವಿಚಾರಣೆ ಮಾಡಬೇಕೆಂದು ಆದೇಶಿಸುತ್ತದೆ. ರಾಜಸ್ಥಾನದಲ್ಲಿ 11,000 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿದ್ದರೂ, ಅವುಗಳ ಅಧಿಕಾರಾವಧಿ ಏಕರೂಪವಾಗಿ ಕೊನೆಗೊಳ್ಳುವುದಿಲ್ಲ. ಉದಾಹರಣೆಗೆ, 704 ಪಂಚಾಯತ್‌ಗಳ ಅಧಿಕಾರಾವಧಿ ಮಾರ್ಚ್‌ನಲ್ಲಿ ಮುಕ್ತಾಯಗೊಳ್ಳಲಿದ್ದು, 3,847 ಪಂಚಾಯತ್‌ಗಳ ಅವಧಿ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ.

ಚುನಾವಣಾ ಪ್ರಕ್ರಿಯೆಯನ್ನು ಒಟ್ಟಗೂಡಿಸುವುದು ಮತ್ತು ಮಧ್ಯಂತರದಲ್ಲಿ ಸುಗಮ ಆಡಳಿತವನ್ನು ಖಚಿತಪಡಿಸುವುದು ಈ ನಿರ್ಧಾರದ ಗುರಿಯಾಗಿದೆ ಎಂದು ಬಿಜೆಪಿ ಸರ್ಕಾರ ಹೇಳಿಕೊಂಡಿದೆ. ಆದಾಗ್ಯೂ, ಅನಗತ್ಯವಾಗಿ ಚುನಾವಣೆಗಳನ್ನು ವಿಳಂಬ ಮಾಡುವ ಮೂಲಕ ಸರ್ಕಾರವು ಪ್ರಜಾಪ್ರಭುತ್ವ ತತ್ವಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಟೀಕಿಸುತ್ತಿದೆ. ಪ್ರಸ್ತುತ ವಿಚಾರವು ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದ್ದು, ಪಂಚಾಯತ್ ಆಡಳಿತದಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಸಾಂವಿಧಾನಿಕ ಆದೇಶಗಳನ್ನು ಪಾಲಿಸಬೇಕೆಂಬ ಕೂಗು ಕೇಳಿ ಬಂದಿದೆ.

ಇದನ್ನೂಓದಿ:  ಇಡಿಯಿಂದ ಮುಡಾ ಸ್ಥಿರಾಸ್ತಿ ಮುಟ್ಟುಗೋಲು – ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...