Homeಮುಖಪುಟರಾಜಸ್ಥಾನ | ನಿರ್ಗಮಿತ ಸರಪಂಚ್‌ಗಳನ್ನೆ ಪಂಚಾಯಿತಿ ಆಡಳಿತಾಧಿಕಾರಿಯಾಗಿ ನೇಮಕಕ್ಕೆ ಬಿಜೆಪಿ ಸರ್ಕಾರ ನಿರ್ಧಾರ; ಕಾಂಗ್ರೆಸ್ ವಿರೋಧ

ರಾಜಸ್ಥಾನ | ನಿರ್ಗಮಿತ ಸರಪಂಚ್‌ಗಳನ್ನೆ ಪಂಚಾಯಿತಿ ಆಡಳಿತಾಧಿಕಾರಿಯಾಗಿ ನೇಮಕಕ್ಕೆ ಬಿಜೆಪಿ ಸರ್ಕಾರ ನಿರ್ಧಾರ; ಕಾಂಗ್ರೆಸ್ ವಿರೋಧ

- Advertisement -
- Advertisement -

ಅಧಿಕಾರಾವಧಿ ಮುಗಿದು ಹೊರಹೋಗುವ ಸರಪಂಚರನ್ನೆ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳಾಗಿ ನೇಮಿಸುವ ಬಗ್ಗೆ ರಾಜಸ್ಥಾನದ ಬಿಜೆಪಿ ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದ್ದು, ಈ ಕ್ರಮವು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ವಿಳಂಬಗೊಳಿಸುತ್ತದೆ ಎಂದು ಆರೋಪಿಸಿದೆ. ರಾಜಸ್ಥಾನ

ರಾಜ್ಯ ಕಾಂಗ್ರೆಸ್‌ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಿ.ಬಿ. ಯಾದವ್ ಅವರು ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರಿಗೆ ಪತ್ರ ಬರೆದು, ಸರ್ಕಾರವು ಸಕಾಲಿಕವಾಗಿ ಪಂಚಾಯತ್ ಚುನಾವಣೆಗಳನ್ನು ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಚುನಾವಣೆಗಳನ್ನು ವಿಳಂಬಗೊಳಿಸುವ ನಿರ್ಧಾರವು ಸಂವಿಧಾನದ 243-ಇ ವಿಧಿ ಮತ್ತು 1994 ರ ರಾಜಸ್ಥಾನ ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 95 ರ ವಿರುದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.  

“ಐದು ವರ್ಷಗಳ ಅವಧಿ ಮುಗಿದ ನಂತರ ಯಾವುದೇ ಸಂದರ್ಭಗಳಲ್ಲಿ ಅಧಿಕಾರಾವಧಿಯನ್ನು ವಿಸ್ತರಿಸಲು ಅಥವಾ ಚುನಾವಣೆಗಳನ್ನು ಮುಂದೂಡಲು ಅನುಮತಿಸುವ ಯಾವುದೇ ನಿಬಂಧನೆ ಸಂವಿಧಾನ ಅಥವಾ ಪಂಚಾಯತ್ ರಾಜ್ ಕಾಯ್ದೆಯಲ್ಲಿ ಇಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುರುವಾರ, ರಾಜ್ಯ ಸರ್ಕಾರವು ಅಧಿಕಾರಾವಧಿ ಮುಕ್ತಾಯಗೊಳ್ಳಲಿರುವ ಗ್ರಾಮ ಪಂಚಾಯಿತಿಗಳಿಗೆ ಹೊರಹೋಗುವ ಸರಪಂಚರನ್ನು ಮಧ್ಯಂತರ ಆಡಳಿತಾಧಿಕಾರಿಗಳಾಗಿ ನೇಮಿಸುವ ಅಧಿಸೂಚನೆಯನ್ನು ಹೊರಡಿಸಿತ್ತು.

ರಾಜಸ್ಥಾನದಾದ್ಯಂತ 6,759 ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಜನವರಿ 17, 2024 ರಂದು ಕೊನೆಗೊಳ್ಳಲಿದೆ. ಅಧಿಕೃತ ಮೂಲಗಳ ಪ್ರಕಾರ, ಸರ್ಕಾರವು ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಉತ್ತರಾಖಂಡಗಳಲ್ಲಿ ಜಾರಿಗೆ ತಂದಿರುವ ಇದೇ ರೀತಿಯ ಮಾದರಿಗಳನ್ನು ಅಧ್ಯಯನ ಮಾಡಿ ನಿರ್ಧಾರವನ್ನು ಅಂತಿಮಗೊಳಿಸಿದೆ. ಈ ಬಗ್ಗೆ ಕಾನೂನು ಸಲಹೆ ಪಡೆದು, ಸರಪಂಚ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಯಿತು. ಅವರು ಈ ಕ್ರಮಕ್ಕೆ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಧಿಸೂಚನೆಯು, ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯತ್‌ಗಳಲ್ಲಿ ಆಡಳಿತಾಧಿಕಾರಿಗಳ ನೇಮಕಾತಿ ಮತ್ತು ಆಡಳಿತ ಸಮಿತಿಗಳ ರಚನೆಯ ಮೇಲ್ವಿಚಾರಣೆ ಮಾಡಬೇಕೆಂದು ಆದೇಶಿಸುತ್ತದೆ. ರಾಜಸ್ಥಾನದಲ್ಲಿ 11,000 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿದ್ದರೂ, ಅವುಗಳ ಅಧಿಕಾರಾವಧಿ ಏಕರೂಪವಾಗಿ ಕೊನೆಗೊಳ್ಳುವುದಿಲ್ಲ. ಉದಾಹರಣೆಗೆ, 704 ಪಂಚಾಯತ್‌ಗಳ ಅಧಿಕಾರಾವಧಿ ಮಾರ್ಚ್‌ನಲ್ಲಿ ಮುಕ್ತಾಯಗೊಳ್ಳಲಿದ್ದು, 3,847 ಪಂಚಾಯತ್‌ಗಳ ಅವಧಿ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ.

ಚುನಾವಣಾ ಪ್ರಕ್ರಿಯೆಯನ್ನು ಒಟ್ಟಗೂಡಿಸುವುದು ಮತ್ತು ಮಧ್ಯಂತರದಲ್ಲಿ ಸುಗಮ ಆಡಳಿತವನ್ನು ಖಚಿತಪಡಿಸುವುದು ಈ ನಿರ್ಧಾರದ ಗುರಿಯಾಗಿದೆ ಎಂದು ಬಿಜೆಪಿ ಸರ್ಕಾರ ಹೇಳಿಕೊಂಡಿದೆ. ಆದಾಗ್ಯೂ, ಅನಗತ್ಯವಾಗಿ ಚುನಾವಣೆಗಳನ್ನು ವಿಳಂಬ ಮಾಡುವ ಮೂಲಕ ಸರ್ಕಾರವು ಪ್ರಜಾಪ್ರಭುತ್ವ ತತ್ವಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಟೀಕಿಸುತ್ತಿದೆ. ಪ್ರಸ್ತುತ ವಿಚಾರವು ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದ್ದು, ಪಂಚಾಯತ್ ಆಡಳಿತದಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಸಾಂವಿಧಾನಿಕ ಆದೇಶಗಳನ್ನು ಪಾಲಿಸಬೇಕೆಂಬ ಕೂಗು ಕೇಳಿ ಬಂದಿದೆ.

ಇದನ್ನೂಓದಿ:  ಇಡಿಯಿಂದ ಮುಡಾ ಸ್ಥಿರಾಸ್ತಿ ಮುಟ್ಟುಗೋಲು – ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...