Homeಮುಖಪುಟರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಅಶೋಕ್ ಗೆಹ್ಲೋಟ್‌ ಔಟ್‌‌

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಅಶೋಕ್ ಗೆಹ್ಲೋಟ್‌ ಔಟ್‌‌

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌‌ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಪ್ರಸ್ತುತ ಪಕ್ಷದ ಹಿರಿಯ ನಾಯಕರಾದ ಕೆ.ಸಿ.ವೇಣುಗೋಪಾಲ್, ದಿಗ್ವಿಜಯ ಸಿಂಗ್‌ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

“ಅಶೋಕ್ ಗೆಹ್ಲೋಟ್‌‌ ಅವರು ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದಿದ್ದಾರೆ. ಸೆಪ್ಟೆಂಬರ್ 30 ರ ಮೊದಲು ಇತರ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಮುಕುಲ್ ವಾಸ್ನಿಕ್, ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ ಸಿಂಗ್, ಕೆಸಿ ವೇಣುಗೋಪಾಲ್ ರೇಸ್‌ನಲ್ಲಿದ್ದಾರೆ” ಎಂದು ಕಾಂಗ್ರೆಸ್‌‌ ಮುಖಂಡರೊಬ್ಬರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಶೋಕ್‌ ಗೆಹ್ಲೋಟ್ ನಡೆದುಕೊಂಡ ರೀತಿ ಪಕ್ಷದ ನಾಯಕತ್ವಕ್ಕೆ ಸರಿ ಹೋಗಿಲ್ಲ. ನಾಯಕತ್ವ ಅವರ ಬಗ್ಗೆ ತುಂಬಾ ಅಸಮಾಧಾನ ಹೊಂದಿದೆ” ಎಂದು ಪಕ್ಷದ ಸಿಡಬ್ಲ್ಯೂಸಿ ಸದಸ್ಯರಾಗಿರುವ ಇನ್ನೊಬ್ಬ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

ರಾಷ್ಟ್ರೀಯ ಕಾಂಗ್ರೆಸ್‌‌‌‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಶೋಕ್‌‌‌ ಗೆಹ್ಲೋಟ್‌‌‌ ಅವರು ಘೋಷಿಸಿದ ನಂತರ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಬಿಕ್ಕಟ್ಟು ಎದುರಾಗಿದೆ. ಇದರ ನಂತರ ಸಭೆ ನಡೆಸಿರುವ ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯ ನಾಮನಿರ್ದೇಶನ ಪ್ರಕ್ರಿಯೆ ಮುಗಿಯುವವರೆಗೆ (ಸೆಪ್ಟೆಂಬರ್ 30) ರಾಜ್ಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ಚರ್ಚೆ ನಡೆಯುವ ಪಕ್ಷದ ಸಭೆಗೆ ಮುನ್ನ 82 ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ತಮ್ಮ ಪ್ರಯತ್ನವನ್ನು ದೃಢಪಡಿಸಿದ್ದರಿಂದ, ಸಚಿನ್ ಪೈಲಟ್ ಅವರನ್ನು ಮುಂದಿನ ರಾಜಸ್ಥಾನ ಸಿಎಂ ಆಗಿ ನೇಮಿಸಲಾಗುತ್ತದೆ ಎಂಬ ಊಹಾಪೋಹಗಳು ಇದ್ದವು. ಆದರೆ ಅಶೋಕ್ ಗೆಹ್ಲೋಟ್ ನಿಷ್ಠಾವಂತರಿಗೆ ಇದು ಅಸಮಾಧಾನ ತಂದಿದೆ

ಹೀಗಾಗಿ, ಕಾಂಗ್ರೆಸ್ ನಾಯಕತ್ವ ಮತ್ತು ಅಶೋಕ್‌ ಗೆಹ್ಲೋಟ್ ನಿಷ್ಠಾವಂತರ ನಡುವಿನ ಬಿಕ್ಕಟ್ಟಿಗೆ ಕಾರಣವಾಯಿದೆ. ಪಕ್ಷದ ಹೈಕಮಾಂಡ್ ತನ್ನ ಪಕ್ಷದ ವೀಕ್ಷಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ಅವರಿಂದ ರಾಜಸ್ಥಾನದ ರಾಜಕೀಯ ಪರಿಸ್ಥಿತಿಯ ಬಗ್ಗೆ ವರದಿಯನ್ನು ಕೇಳಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮುಂದುವರಿಯಬೇಕು ಎಂದ ರಾಜಸ್ಥಾನದ ಕಾಂಗ್ರೆಸ್ ಶಾಸಕರು!

ಈ ಮಧ್ಯೆ, ರಾಜಸ್ಥಾನ ಸಿಎಂ ಹುದ್ದೆಗೆ ಬಿಕ್ಕಟ್ಟು ಭುಗಿಲೆದ್ದಿದ್ದು, ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್‌ನಿಂದ ಹೊರಗುಳಿಯುತ್ತಿದ್ದಾರೆ.

ಬಹಳ ಮುಖ್ಯವಾಗಿ ಕಾಂಗ್ರೆಸ್‌ ಉನ್ನತ ನಾಯಕತ್ವವು ತನ್ನ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ನೀತಿಯ ಬಗ್ಗೆ ದೃಢವಾಗಿರುವುದರಿಂದ, ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಮುಖ್ಯಸ್ಥರಾದರೆ ಸಿಎಂ ಸ್ಥಾನವನ್ನು ಉಳಿಸಿಕೊಳ್ಳಲು ಕಡಿಮೆ ಅವಕಾಶವಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...