Homeಮುಖಪುಟರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಜಯಭೇರಿ, ಎರಡನೇ ಸ್ಥಾನದಲ್ಲಿ ಬಿಜೆಪಿ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಜಯಭೇರಿ, ಎರಡನೇ ಸ್ಥಾನದಲ್ಲಿ ಬಿಜೆಪಿ

- Advertisement -
- Advertisement -

ರಾಜಸ್ಥಾನದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆದಿದ್ದು, ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ. ರಾಜ್ಯದ ಆರು ಜಿಲ್ಲೆಗಳ 78 ಪಂಚಾಯತ್‌ ಸಮಿತಿಯ 1,564 ಸ್ಥಾನಗಳಿಗೆ ಮತ್ತು ಜಿಲ್ಲಾ ಪರಿಷತ್‌ನ 200 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಶನಿವಾರ ಫಲಿತಾಂಶ ಪ್ರಕಟವಾಗಿದೆ.

ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಕಳೆದ ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗೆದ್ದಿದ್ದ ಬಿಜೆಪಿ ಈ ಚುನಾವಣೆಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ.

ಒಟ್ಟು 1,564 ಸ್ಥಾನಗಳಲ್ಲಿ ಕಾಂಗ್ರೆಸ್‌ ಪಕ್ಷವು 670 ಪಂಚಾಯತಿ ಸ್ಥಾನಗಳನ್ನು ಮತ್ತು ಬಿಜೆಪಿ 551 ರಲ್ಲಿ ಸ್ಥಾನಗಳನ್ನು ಗೆದ್ದಿದೆ. ಇನ್ನು, ಆರ್‌ಎಲ್‌ಪಿ 40 ಮತ್ತು ಬಿಎಸ್‌ಪಿ 11 ಸ್ಥಾನಗಳನ್ನು ಗೆದ್ದಿದೆ. ಸ್ವತಂತ್ರ ಅಭ್ಯರ್ಥಿಗಳು 290 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಎರಡು ಸ್ಥಾನಗಳ ಫಲಿತಾಂಶ ಪ್ರಕಟವಾಗಿಲ್ಲ.

ಜಿಲ್ಲಾ ಪರಿಷತ್‌ನ ಒಟ್ಟು 200 ಸ್ಥಾನಗಳಲ್ಲಿ ಕಾಂಗ್ರೆಸ್‌ 99 ಸ್ಥಾನಗಳು, ಬಿಜೆಪಿ 90 ಸ್ಥಾನಗಳನ್ನು ಗೆದ್ದಿವೆ. ಉಳಿದಂತೆ ಇತರ ಪಕ್ಷಗಳು 11 ಸ್ಥಾನಗಳನ್ನು ಗೆದ್ದಿವೆ.

ಇದನ್ನೂ ಓದಿ: ರಾಜಸ್ಥಾನ: ಪಾಕಿಸ್ತಾನಕ್ಕೆ ಹೋಗು ಎಂದು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ, ಐವರ ಬಂಧನ

ಕಳೆದ ಚುನಾವಣೆಯಲ್ಲಿ 1,328 ಪಂಚಾಯಿತಿ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 585 ಸ್ಥಾನ ಗೆದ್ದಿತ್ತು. ಆದರೆ, ಈ ಬಾರಿ ಒಟ್ಟು ಸ್ಥಾನಗಳ ಸಂಖ್ಯೆ 1,564ಕ್ಕೆ ಹೆಚ್ಚಿದ್ದರೂ, ಬಿಜೆಪಿ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಿದೆ.

ಹಿಂದಿನ ಚುನಾವಣೆಯಲ್ಲಿ ಬಿಜೆಪಿ 100 ಜಿಲ್ಲಾ ಪಂಚಾಯತ್ ಸ್ಥಾನಗಳನ್ನು ಗೆದ್ದಿದ್ದರೆ, 90 ಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿತ್ತು.

ಆಗಸ್ಟ್ 26, 29 ಮತ್ತು ಸೆಪ್ಟೆಂಬರ್ 1 ರಂದು ಭರತಪುರ, ದೌಸಾ, ಜೈಪುರ, ಜೋಧಪುರ, ಸವಾಯಿ ಮಾಧೋಪುರ ಮತ್ತು ಸಿರೋಹಿ ಜಿಲ್ಲೆಗಳಲ್ಲಿ ಚುನಾವಣೆ ನಡೆದಿತ್ತು.

ಒಟ್ಟು ಆರು ಜಿಲ್ಲಾ ಪರಿಷತ್‌ನ 200 ಸದಸ್ಯರು ಮತ್ತು 78 ಪಂಚಾಯತ್ ಸಮಿತಿಯ 1,564 ಸದಸ್ಯರನ್ನು ಆಯ್ಕೆ ಮಾಡಲು ಮೂರು ಹಂತಗಳಲ್ಲಿ ಮತದಾನ ನಡೆದಿತ್ತು.


ಇದನ್ನೂ ಓದಿ: ಪಂಜಾಬ್ ಬಳಿಕ ರಾಜಸ್ಥಾನದ ಸಮಸ್ಯೆ ಬಗೆ ಹರಿಸಲು ಮುಂದಾದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...