Homeಮುಖಪುಟರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಜಯಭೇರಿ, ಎರಡನೇ ಸ್ಥಾನದಲ್ಲಿ ಬಿಜೆಪಿ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಜಯಭೇರಿ, ಎರಡನೇ ಸ್ಥಾನದಲ್ಲಿ ಬಿಜೆಪಿ

- Advertisement -
- Advertisement -

ರಾಜಸ್ಥಾನದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆದಿದ್ದು, ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ. ರಾಜ್ಯದ ಆರು ಜಿಲ್ಲೆಗಳ 78 ಪಂಚಾಯತ್‌ ಸಮಿತಿಯ 1,564 ಸ್ಥಾನಗಳಿಗೆ ಮತ್ತು ಜಿಲ್ಲಾ ಪರಿಷತ್‌ನ 200 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಶನಿವಾರ ಫಲಿತಾಂಶ ಪ್ರಕಟವಾಗಿದೆ.

ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಕಳೆದ ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗೆದ್ದಿದ್ದ ಬಿಜೆಪಿ ಈ ಚುನಾವಣೆಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ.

ಒಟ್ಟು 1,564 ಸ್ಥಾನಗಳಲ್ಲಿ ಕಾಂಗ್ರೆಸ್‌ ಪಕ್ಷವು 670 ಪಂಚಾಯತಿ ಸ್ಥಾನಗಳನ್ನು ಮತ್ತು ಬಿಜೆಪಿ 551 ರಲ್ಲಿ ಸ್ಥಾನಗಳನ್ನು ಗೆದ್ದಿದೆ. ಇನ್ನು, ಆರ್‌ಎಲ್‌ಪಿ 40 ಮತ್ತು ಬಿಎಸ್‌ಪಿ 11 ಸ್ಥಾನಗಳನ್ನು ಗೆದ್ದಿದೆ. ಸ್ವತಂತ್ರ ಅಭ್ಯರ್ಥಿಗಳು 290 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಎರಡು ಸ್ಥಾನಗಳ ಫಲಿತಾಂಶ ಪ್ರಕಟವಾಗಿಲ್ಲ.

ಜಿಲ್ಲಾ ಪರಿಷತ್‌ನ ಒಟ್ಟು 200 ಸ್ಥಾನಗಳಲ್ಲಿ ಕಾಂಗ್ರೆಸ್‌ 99 ಸ್ಥಾನಗಳು, ಬಿಜೆಪಿ 90 ಸ್ಥಾನಗಳನ್ನು ಗೆದ್ದಿವೆ. ಉಳಿದಂತೆ ಇತರ ಪಕ್ಷಗಳು 11 ಸ್ಥಾನಗಳನ್ನು ಗೆದ್ದಿವೆ.

ಇದನ್ನೂ ಓದಿ: ರಾಜಸ್ಥಾನ: ಪಾಕಿಸ್ತಾನಕ್ಕೆ ಹೋಗು ಎಂದು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ, ಐವರ ಬಂಧನ

ಕಳೆದ ಚುನಾವಣೆಯಲ್ಲಿ 1,328 ಪಂಚಾಯಿತಿ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 585 ಸ್ಥಾನ ಗೆದ್ದಿತ್ತು. ಆದರೆ, ಈ ಬಾರಿ ಒಟ್ಟು ಸ್ಥಾನಗಳ ಸಂಖ್ಯೆ 1,564ಕ್ಕೆ ಹೆಚ್ಚಿದ್ದರೂ, ಬಿಜೆಪಿ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಿದೆ.

ಹಿಂದಿನ ಚುನಾವಣೆಯಲ್ಲಿ ಬಿಜೆಪಿ 100 ಜಿಲ್ಲಾ ಪಂಚಾಯತ್ ಸ್ಥಾನಗಳನ್ನು ಗೆದ್ದಿದ್ದರೆ, 90 ಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿತ್ತು.

ಆಗಸ್ಟ್ 26, 29 ಮತ್ತು ಸೆಪ್ಟೆಂಬರ್ 1 ರಂದು ಭರತಪುರ, ದೌಸಾ, ಜೈಪುರ, ಜೋಧಪುರ, ಸವಾಯಿ ಮಾಧೋಪುರ ಮತ್ತು ಸಿರೋಹಿ ಜಿಲ್ಲೆಗಳಲ್ಲಿ ಚುನಾವಣೆ ನಡೆದಿತ್ತು.

ಒಟ್ಟು ಆರು ಜಿಲ್ಲಾ ಪರಿಷತ್‌ನ 200 ಸದಸ್ಯರು ಮತ್ತು 78 ಪಂಚಾಯತ್ ಸಮಿತಿಯ 1,564 ಸದಸ್ಯರನ್ನು ಆಯ್ಕೆ ಮಾಡಲು ಮೂರು ಹಂತಗಳಲ್ಲಿ ಮತದಾನ ನಡೆದಿತ್ತು.


ಇದನ್ನೂ ಓದಿ: ಪಂಜಾಬ್ ಬಳಿಕ ರಾಜಸ್ಥಾನದ ಸಮಸ್ಯೆ ಬಗೆ ಹರಿಸಲು ಮುಂದಾದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...