Homeಮುಖಪುಟರಾಜಸ್ಥಾನದಲ್ಲಿ ಎಲ್ಲರಿಗೂ ಆರೋಗ್ಯ ವಿಮೆ ಘೋಷಣೆ: ಇದು ನಿಜಕ್ಕೂ ಜನರಿಗೆ ತಲುಪಲಿದೆಯೇ?

ರಾಜಸ್ಥಾನದಲ್ಲಿ ಎಲ್ಲರಿಗೂ ಆರೋಗ್ಯ ವಿಮೆ ಘೋಷಣೆ: ಇದು ನಿಜಕ್ಕೂ ಜನರಿಗೆ ತಲುಪಲಿದೆಯೇ?

ಕರ್ನಾಟಕದಲ್ಲಿಯೂ 2018 ರಲ್ಲಿ 1 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಘೋಷಣೆಯಾಗಿದ್ದು, ಯೋಜನೆ ಎಷ್ಟರ ಮಟ್ಟಿಗೆ ಪ್ರಯೋಜನಕ್ಕೆ ಬಂದಿದ್ದೆ ಎಂಬುದರ ಬಗ್ಗೆ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ರಾಜ್ಯದ ಎಲ್ಲ ನಿವಾಸಿಗಳಿಗೆ ಉಚಿತ ಆರೋಗ್ಯ ವಿಮೆ ನೀಡಿದ ದೇಶದ ಮೊದಲ ರಾಜ್ಯ ಎಂದು ರಾಜಸ್ಥಾನ ಸರ್ಕಾರ ಘೋಷಿಸಿಕೊಂಡಿದೆ. ಕರ್ನಾಟಕದಲ್ಲಿಯೂ 2018 ರಲ್ಲಿ 1 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಘೋಷಣೆಯಾಗಿದ್ದು, ಯೋಜನೆ ಎಷ್ಟರ ಮಟ್ಟಿಗೆ ಪ್ರಯೋಜನಕ್ಕೆ ಬಂದಿದ್ದೆ ಎಂಬುದರ ಬಗ್ಗೆ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ ರಾಜಸ್ಥಾನದ ಈ ಘೋಷಣೆ ಎಷ್ಟರಮಟ್ಟಿಗೆ ಜನಸಾಮಾನ್ಯರ ಉಪಯೋಗಕ್ಕೆ ಬರುತ್ತದೆ ಎಂದು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ‘ಮುಖ್ಯಮಂತ್ರಿ ಚಿರಂಜೀವಿ ಸ್ವಾಸ್ತ್ಯ ಭೀಮಾ ಯೋಜನೆ’ ಅಡಿಯಲ್ಲಿ ನೋಂದಣಿ ಪ್ರಾರಂಭಿದ್ದು, ಇದರ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬವು ವೈದ್ಯಕೀಯ ವೆಚ್ಚಗಳಿಗಾಗಿ ವರ್ಷಕ್ಕೆ ಐದು ಲಕ್ಷ ರೂಪಾಯಿಗಳನ್ನು ಪಡೆಯಲಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಯೋಜನೆಯ ಪ್ರಾರಂಭದ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. “ರಾಜಸ್ಥಾನ ಸರ್ಕಾರದ ಎಲ್ಲರಿಗೂ ನಗದುರಹಿತ ಚಿಕಿತ್ಸೆಗಾಗಿ ನೋಂದಣಿ ಆರಂಭಿಸಿದೆ. ಮುಖ್ಯಮಂತ್ರಿ ಚಿರಂಜೀವಿ ಸ್ವಾಸ್ಥ್ಯ ಭೀಮಾ ಯೋಜನೆ ಇಂದಿನಿಂದ ರಾಜ್ಯದಲ್ಲಿ ಪ್ರಾರಂಭವಾಗಿದೆ. ಇದು ವೈದ್ಯಕೀಯ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಿರುವ ಅತಿದೊಡ್ಡ ಆರೋಗ್ಯ ಯೋಜನೆಗಳಲ್ಲಿ ಒಂದಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

“ರಾಜಸ್ಥಾನ ಎಲ್ಲಾ ನಿವಾಸಿಗಳಿಗೆ ಆರೋಗ್ಯ ವಿಮೆ ಪಡೆದ ದೇಶದ ಮೊದಲ ರಾಜ್ಯವಾಗಿದೆ. ಪ್ರತಿ ಕುಟುಂಬವು ಪ್ರತಿ ವರ್ಷ 5 ಲಕ್ಷ ರೂ. ಆರೋಗ್ಯ ವಿಮೆಯನ್ನು ಪಡೆಯಬಹುದು. ನೋಂದಾಣಿ ಮಾಡಿಕೊಂಡು, ನಗದುರಹಿತ ಚಿಕಿತ್ಸೆಯನ್ನು ಪಡೆಯಬಹುದು” ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಆರೋಗ್ಯ ವಿಮಾ ಯೋಜನೆಯನ್ನು ಮುಖ್ಯಮಂತ್ರಿ ಗೆಹ್ಲೋಟ್ ಅವರು ರಾಜ್ಯ ಬಜೆಟ್ 2021-22ರಲ್ಲಿ ಘೋಷಿಸಿದ್ದಾರೆ.

ಇತ್ತ ಕರ್ನಾಟಕದಲ್ಲಿ 2018 ರ ಫ್ರೆಬ್ರವರಿಯಲ್ಲಿ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಆರೋಗ್ಯ ಸಚಿವರಾಗಿದ್ದ ರಮೇಶ್ ಕುಮಾರ್‌, ಆರೋಗ್ಯ ಕರ್ನಾಟಕ (ಯೂನಿರ್ವಸಲ್ ಹೆಲ್ತ್ ಕಾರ್ಡ್) ಯೋಜನೆ ಘೋಷಿಸಿದ್ದರು. ಮಾರ್ಚ್‌‌ನಲ್ಲಿ ಈ ಯೋಜನೆಗೆ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದರು.

ಆರೋಗ್ಯ ಕರ್ನಾಟಕ ಯೋಜನೆಯ ಹೆಲ್ತ್ ಕಾರ್ಡ್ ಅಡಿಯಲ್ಲಿ, ಚಿಕಿತ್ಸೆ ಆಧಾರದಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ. ಕನಿಷ್ಠ ಐದು ಸದಸ್ಯರ ಒಂದು ಕುಟುಂಬಕ್ಕೆ ವರ್ಷಕ್ಕೆ 30,000 ರೂಪಾಯಿಯಿಂದ 2 ಲಕ್ಷದವರೆಗಿನ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಲಾಗಿತ್ತು.

ಯಶಸ್ವಿನಿ, ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆ, ವಾಜಪೇಯಿ ಆರೋಗ್ಯಶ್ರೀ, ರಾಜೀವ್‌ ಆರೋಗ್ಯ ಭಾಗ್ಯ, ಹಿರಿಯ ನಾಗರಿಕರಿಗೆ ಆರ್‌ಎಸ್‌ಬಿವೈ ಯೋಜನೆ ಒಳಗೊಂಡಂತೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ, ಮುಖ್ಯಮಂತ್ರಿ ಸಾಂತ್ವನ ಹರೀಶ್‌ ಯೋಜನೆ ಇವುಗಳೆಲ್ಲಾ ಈ ಹೆಲ್ತ್ ಕಾರ್ಡ ಅಡಿಯಲ್ಲಿ ವಿಲಿನವಾಗಿದ್ದವು. ಆದರೆ, ಸಾಕಷ್ಟು ಜನರಿಗೆ ಈ ಬಗ್ಗೆ ಮಾಹಿತಿಯಿಲ್ಲ. ಯೋಜನೆಯನ್ನು ಅನುಮೋದಿಸುವ ಆಸ್ಪತ್ರೆಗಳು ಈ ಕುರಿತು ರೋಗಿಗೆ ತಿಳಿಸಿದರೇ ಮಾತ್ರ ಯೋಜನೆಯ ಫಲಾನುಭವಿಯಾಗಲು ಸಾಧ್ಯ.

ಆದರೆ ನಂತರದ ವರ್ಷಗಳಲ್ಲಿಯೂ ಆರೋಗ್ಯ ಕರ್ನಾಟಕ ಯೋಜನೆಯೂ ಅಂತಹ ಸದ್ದು ಮಾಡಿಲ್ಲ. ಈಗ ರಾಜಸ್ಥಾನದಲ್ಲಿಯೂ ಇಂತಹ ಒಂದು ಯೋಜನೆ ಘೋಷಣೆಯಾಗಿದ್ದು, ಇದೊಂದು ಚುನಾವಣಾ ತಂತ್ರವಾಗಿರದೇ ಜನರಿಗೆ ಆರೋಗ್ಯ ಸೌಲಭ್ಯ ನೀಡುವ  ಯೋಜನೆಯಾಗಲಿ ಎಂಬುದು ಸಾರ್ವಜನಿಕರ ಆಶಯ.


ಇದನ್ನೂ ಓದಿ: ಕೇಂದ್ರ ಸರ್ಕಾರದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...