Homeಮುಖಪುಟರಾಜಸ್ಥಾನದಲ್ಲಿ ಎಲ್ಲರಿಗೂ ಆರೋಗ್ಯ ವಿಮೆ ಘೋಷಣೆ: ಇದು ನಿಜಕ್ಕೂ ಜನರಿಗೆ ತಲುಪಲಿದೆಯೇ?

ರಾಜಸ್ಥಾನದಲ್ಲಿ ಎಲ್ಲರಿಗೂ ಆರೋಗ್ಯ ವಿಮೆ ಘೋಷಣೆ: ಇದು ನಿಜಕ್ಕೂ ಜನರಿಗೆ ತಲುಪಲಿದೆಯೇ?

ಕರ್ನಾಟಕದಲ್ಲಿಯೂ 2018 ರಲ್ಲಿ 1 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಘೋಷಣೆಯಾಗಿದ್ದು, ಯೋಜನೆ ಎಷ್ಟರ ಮಟ್ಟಿಗೆ ಪ್ರಯೋಜನಕ್ಕೆ ಬಂದಿದ್ದೆ ಎಂಬುದರ ಬಗ್ಗೆ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ರಾಜ್ಯದ ಎಲ್ಲ ನಿವಾಸಿಗಳಿಗೆ ಉಚಿತ ಆರೋಗ್ಯ ವಿಮೆ ನೀಡಿದ ದೇಶದ ಮೊದಲ ರಾಜ್ಯ ಎಂದು ರಾಜಸ್ಥಾನ ಸರ್ಕಾರ ಘೋಷಿಸಿಕೊಂಡಿದೆ. ಕರ್ನಾಟಕದಲ್ಲಿಯೂ 2018 ರಲ್ಲಿ 1 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಘೋಷಣೆಯಾಗಿದ್ದು, ಯೋಜನೆ ಎಷ್ಟರ ಮಟ್ಟಿಗೆ ಪ್ರಯೋಜನಕ್ಕೆ ಬಂದಿದ್ದೆ ಎಂಬುದರ ಬಗ್ಗೆ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ ರಾಜಸ್ಥಾನದ ಈ ಘೋಷಣೆ ಎಷ್ಟರಮಟ್ಟಿಗೆ ಜನಸಾಮಾನ್ಯರ ಉಪಯೋಗಕ್ಕೆ ಬರುತ್ತದೆ ಎಂದು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ‘ಮುಖ್ಯಮಂತ್ರಿ ಚಿರಂಜೀವಿ ಸ್ವಾಸ್ತ್ಯ ಭೀಮಾ ಯೋಜನೆ’ ಅಡಿಯಲ್ಲಿ ನೋಂದಣಿ ಪ್ರಾರಂಭಿದ್ದು, ಇದರ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬವು ವೈದ್ಯಕೀಯ ವೆಚ್ಚಗಳಿಗಾಗಿ ವರ್ಷಕ್ಕೆ ಐದು ಲಕ್ಷ ರೂಪಾಯಿಗಳನ್ನು ಪಡೆಯಲಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಯೋಜನೆಯ ಪ್ರಾರಂಭದ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. “ರಾಜಸ್ಥಾನ ಸರ್ಕಾರದ ಎಲ್ಲರಿಗೂ ನಗದುರಹಿತ ಚಿಕಿತ್ಸೆಗಾಗಿ ನೋಂದಣಿ ಆರಂಭಿಸಿದೆ. ಮುಖ್ಯಮಂತ್ರಿ ಚಿರಂಜೀವಿ ಸ್ವಾಸ್ಥ್ಯ ಭೀಮಾ ಯೋಜನೆ ಇಂದಿನಿಂದ ರಾಜ್ಯದಲ್ಲಿ ಪ್ರಾರಂಭವಾಗಿದೆ. ಇದು ವೈದ್ಯಕೀಯ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಿರುವ ಅತಿದೊಡ್ಡ ಆರೋಗ್ಯ ಯೋಜನೆಗಳಲ್ಲಿ ಒಂದಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

“ರಾಜಸ್ಥಾನ ಎಲ್ಲಾ ನಿವಾಸಿಗಳಿಗೆ ಆರೋಗ್ಯ ವಿಮೆ ಪಡೆದ ದೇಶದ ಮೊದಲ ರಾಜ್ಯವಾಗಿದೆ. ಪ್ರತಿ ಕುಟುಂಬವು ಪ್ರತಿ ವರ್ಷ 5 ಲಕ್ಷ ರೂ. ಆರೋಗ್ಯ ವಿಮೆಯನ್ನು ಪಡೆಯಬಹುದು. ನೋಂದಾಣಿ ಮಾಡಿಕೊಂಡು, ನಗದುರಹಿತ ಚಿಕಿತ್ಸೆಯನ್ನು ಪಡೆಯಬಹುದು” ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಆರೋಗ್ಯ ವಿಮಾ ಯೋಜನೆಯನ್ನು ಮುಖ್ಯಮಂತ್ರಿ ಗೆಹ್ಲೋಟ್ ಅವರು ರಾಜ್ಯ ಬಜೆಟ್ 2021-22ರಲ್ಲಿ ಘೋಷಿಸಿದ್ದಾರೆ.

ಇತ್ತ ಕರ್ನಾಟಕದಲ್ಲಿ 2018 ರ ಫ್ರೆಬ್ರವರಿಯಲ್ಲಿ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಆರೋಗ್ಯ ಸಚಿವರಾಗಿದ್ದ ರಮೇಶ್ ಕುಮಾರ್‌, ಆರೋಗ್ಯ ಕರ್ನಾಟಕ (ಯೂನಿರ್ವಸಲ್ ಹೆಲ್ತ್ ಕಾರ್ಡ್) ಯೋಜನೆ ಘೋಷಿಸಿದ್ದರು. ಮಾರ್ಚ್‌‌ನಲ್ಲಿ ಈ ಯೋಜನೆಗೆ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದರು.

ಆರೋಗ್ಯ ಕರ್ನಾಟಕ ಯೋಜನೆಯ ಹೆಲ್ತ್ ಕಾರ್ಡ್ ಅಡಿಯಲ್ಲಿ, ಚಿಕಿತ್ಸೆ ಆಧಾರದಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ. ಕನಿಷ್ಠ ಐದು ಸದಸ್ಯರ ಒಂದು ಕುಟುಂಬಕ್ಕೆ ವರ್ಷಕ್ಕೆ 30,000 ರೂಪಾಯಿಯಿಂದ 2 ಲಕ್ಷದವರೆಗಿನ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಲಾಗಿತ್ತು.

ಯಶಸ್ವಿನಿ, ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆ, ವಾಜಪೇಯಿ ಆರೋಗ್ಯಶ್ರೀ, ರಾಜೀವ್‌ ಆರೋಗ್ಯ ಭಾಗ್ಯ, ಹಿರಿಯ ನಾಗರಿಕರಿಗೆ ಆರ್‌ಎಸ್‌ಬಿವೈ ಯೋಜನೆ ಒಳಗೊಂಡಂತೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ, ಮುಖ್ಯಮಂತ್ರಿ ಸಾಂತ್ವನ ಹರೀಶ್‌ ಯೋಜನೆ ಇವುಗಳೆಲ್ಲಾ ಈ ಹೆಲ್ತ್ ಕಾರ್ಡ ಅಡಿಯಲ್ಲಿ ವಿಲಿನವಾಗಿದ್ದವು. ಆದರೆ, ಸಾಕಷ್ಟು ಜನರಿಗೆ ಈ ಬಗ್ಗೆ ಮಾಹಿತಿಯಿಲ್ಲ. ಯೋಜನೆಯನ್ನು ಅನುಮೋದಿಸುವ ಆಸ್ಪತ್ರೆಗಳು ಈ ಕುರಿತು ರೋಗಿಗೆ ತಿಳಿಸಿದರೇ ಮಾತ್ರ ಯೋಜನೆಯ ಫಲಾನುಭವಿಯಾಗಲು ಸಾಧ್ಯ.

ಆದರೆ ನಂತರದ ವರ್ಷಗಳಲ್ಲಿಯೂ ಆರೋಗ್ಯ ಕರ್ನಾಟಕ ಯೋಜನೆಯೂ ಅಂತಹ ಸದ್ದು ಮಾಡಿಲ್ಲ. ಈಗ ರಾಜಸ್ಥಾನದಲ್ಲಿಯೂ ಇಂತಹ ಒಂದು ಯೋಜನೆ ಘೋಷಣೆಯಾಗಿದ್ದು, ಇದೊಂದು ಚುನಾವಣಾ ತಂತ್ರವಾಗಿರದೇ ಜನರಿಗೆ ಆರೋಗ್ಯ ಸೌಲಭ್ಯ ನೀಡುವ  ಯೋಜನೆಯಾಗಲಿ ಎಂಬುದು ಸಾರ್ವಜನಿಕರ ಆಶಯ.


ಇದನ್ನೂ ಓದಿ: ಕೇಂದ್ರ ಸರ್ಕಾರದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕನ್ನಡ ಸುದ್ದಿ ಪೋರ್ಟಲ್ ‘ಪ್ರತಿಧ್ವನಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...