Homeಮುಖಪುಟರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

- Advertisement -
- Advertisement -

ಅತ್ಯಚಾರ ಮತ್ತು ಕೊಲೆ ಪ್ರಕರಣ ವರದಿಯಾದ ಒಂದೇ ತಿಂಗಳ ಅಂತರದಲ್ಲಿ ರಾಜಸ್ಥಾನದ ವಿಶೇಷ ನ್ಯಾಯಾಲಯವು 25 ವರ್ಷದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ನಾಗೌರ್ ಜಿಲ್ಲೆಯ ಮೆರ್ತಾ ನಗರದ ವಿಶೇಷ ಪೋಕ್ಸೊ ನ್ಯಾಯಾಲಯವು ಈ ಮಹತ್ವದ ತೀರ್ಪನ್ನು ಶುಕ್ರವಾರ ಘೋಷಿಸಿದೆ.

ಈ ವರ್ಷದ ಸೆಪ್ಟೆಂಬರ್ 20 ರಂದು, ಜಿಲ್ಲೆಯ ಪಡುಕಲಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ನಡೆದಿತ್ತು.

“ವಿಶೇಷ ನ್ಯಾಯಾಧೀಶೆ ರೇಖಾ ರಾಥೋಡ್ ಅವರು, ಅಪರಾಧಿ ದಿನೇಶ್ ಜಾಟ್‌ ಸಂತ್ರಸ್ತ ಮಗುವಿನ ಮೇಲೆ 11 ದಿನಗಳ ಕಾಲ ನಿರಂತರವಾಗಿ ನಡೆಸಿದ ಅತ್ಯಾಚಾರ ಮತ್ತು ನಂತರ ನಡೆಸಿದ ಕೊಲೆಯನ್ನು ‘ಅಪರೂಪದಲ್ಲಿ ಅಪರೂಪ’ ಎಂದು ಘೋಷಿಸಿದ್ದಾರೆ” ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸುಮರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಹೋಂವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ

ದಿನೇಶ್ ಜಾಟ್‌ ಸಂತ್ರಸ್ತ ಮಗುವಿನ ತಾಯಿಯ ಸಂಬಂಧಿಯಾಗಿದ್ದ. ಪ್ರಕರಣದ ಕುರಿತು ಸಂತ್ರಸ್ತೆಯ ತಂದೆ ದೂರು ನೀಡಿದ್ದರು. ಇದರ ನಂತರ ತನಿಖೆ ಪ್ರಾರಂಭಿಸಿದ ಪೊಲೀಸರು ಹೊಲದಲ್ಲಿ ಹೂತಿಟಿದ್ದ ಮಗುವಿನ ಶವವನ್ನು ಪತ್ತೆ ಹಚ್ಚಿದ್ದರು. ನಂತರ ಪರಿಸ್ಥಿತಿಯ ಗಂಭೀರತೆಯನ್ನು ಅರಿತ, ಅಜ್ಮೇರ್ ರೇಂಜ್ ಐಜಿ ಮತ್ತು ಇತರರ ನೇತೃತ್ವದ ಪೊಲೀಸ್ ತಂಡ ನಾಗೂರಿಗೆ ಧಾವಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿತು.

ಸಾಕ್ಷಿಯ ಆಧಾರದ ಮೇಲೆ ಆರೋಪಿಯನ್ನು ವಿಶೇಷ ಪೊಲೀಸ್ ತಂಡವು ಬಂಧಿಸಿತು ಮತ್ತು ಆರು ದಿನಗಳಲ್ಲಿ ಆತನನ್ನು ಮೆರ್ಟಾ ನಗರದ ಪೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸೆಪ್ಟೆಂಬರ್ 28 ರಂದು ವಿಚಾರಣೆ ಪ್ರಾರಂಭವಾಗಿ, ಪ್ರತಿ ದಿನ ಸಾಕ್ಷಿದಾರರನ್ನು ಕರೆಸಲಾಗಿತ್ತು. ಅಂತಿಮವಾಗಿ, ಅಕ್ಟೋಬರ್ 21 ರಂದು, ದಿನೇಶ್ ಅಪರಾಧಿ ಎಂದು ಸಾಬೀತಾಗಿ, ಶುಕ್ರವಾರ ಆತನಿಗೆ ಮರಣದಂಡನೆ ವಿಧಿಸಲಾಗಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ನ್ಯಾಯಾಲಯದ ತ್ವರಿತ ತೀರ್ಪು ಮತ್ತು ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸಿದ ಪೊಲೀಸರ ನಡೆಯನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ತ್ವರಿತ ಕ್ರಮಕ್ಕೆ ಜಿಗ್ನೇಶ್ ಮೇವಾನಿ ಆಗ್ರಹ

ಇದನ್ನೂ ಓದಿ: ರಾಜಸ್ಥಾನ: ದಲಿತ ಯುವಕನ ಬರ್ಬರ ಗುಂಪು ಹತ್ಯೆ, ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...