Homeಮುಖಪುಟರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

- Advertisement -
- Advertisement -

ಅತ್ಯಚಾರ ಮತ್ತು ಕೊಲೆ ಪ್ರಕರಣ ವರದಿಯಾದ ಒಂದೇ ತಿಂಗಳ ಅಂತರದಲ್ಲಿ ರಾಜಸ್ಥಾನದ ವಿಶೇಷ ನ್ಯಾಯಾಲಯವು 25 ವರ್ಷದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ನಾಗೌರ್ ಜಿಲ್ಲೆಯ ಮೆರ್ತಾ ನಗರದ ವಿಶೇಷ ಪೋಕ್ಸೊ ನ್ಯಾಯಾಲಯವು ಈ ಮಹತ್ವದ ತೀರ್ಪನ್ನು ಶುಕ್ರವಾರ ಘೋಷಿಸಿದೆ.

ಈ ವರ್ಷದ ಸೆಪ್ಟೆಂಬರ್ 20 ರಂದು, ಜಿಲ್ಲೆಯ ಪಡುಕಲಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ನಡೆದಿತ್ತು.

“ವಿಶೇಷ ನ್ಯಾಯಾಧೀಶೆ ರೇಖಾ ರಾಥೋಡ್ ಅವರು, ಅಪರಾಧಿ ದಿನೇಶ್ ಜಾಟ್‌ ಸಂತ್ರಸ್ತ ಮಗುವಿನ ಮೇಲೆ 11 ದಿನಗಳ ಕಾಲ ನಿರಂತರವಾಗಿ ನಡೆಸಿದ ಅತ್ಯಾಚಾರ ಮತ್ತು ನಂತರ ನಡೆಸಿದ ಕೊಲೆಯನ್ನು ‘ಅಪರೂಪದಲ್ಲಿ ಅಪರೂಪ’ ಎಂದು ಘೋಷಿಸಿದ್ದಾರೆ” ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸುಮರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಹೋಂವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ

ದಿನೇಶ್ ಜಾಟ್‌ ಸಂತ್ರಸ್ತ ಮಗುವಿನ ತಾಯಿಯ ಸಂಬಂಧಿಯಾಗಿದ್ದ. ಪ್ರಕರಣದ ಕುರಿತು ಸಂತ್ರಸ್ತೆಯ ತಂದೆ ದೂರು ನೀಡಿದ್ದರು. ಇದರ ನಂತರ ತನಿಖೆ ಪ್ರಾರಂಭಿಸಿದ ಪೊಲೀಸರು ಹೊಲದಲ್ಲಿ ಹೂತಿಟಿದ್ದ ಮಗುವಿನ ಶವವನ್ನು ಪತ್ತೆ ಹಚ್ಚಿದ್ದರು. ನಂತರ ಪರಿಸ್ಥಿತಿಯ ಗಂಭೀರತೆಯನ್ನು ಅರಿತ, ಅಜ್ಮೇರ್ ರೇಂಜ್ ಐಜಿ ಮತ್ತು ಇತರರ ನೇತೃತ್ವದ ಪೊಲೀಸ್ ತಂಡ ನಾಗೂರಿಗೆ ಧಾವಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿತು.

ಸಾಕ್ಷಿಯ ಆಧಾರದ ಮೇಲೆ ಆರೋಪಿಯನ್ನು ವಿಶೇಷ ಪೊಲೀಸ್ ತಂಡವು ಬಂಧಿಸಿತು ಮತ್ತು ಆರು ದಿನಗಳಲ್ಲಿ ಆತನನ್ನು ಮೆರ್ಟಾ ನಗರದ ಪೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸೆಪ್ಟೆಂಬರ್ 28 ರಂದು ವಿಚಾರಣೆ ಪ್ರಾರಂಭವಾಗಿ, ಪ್ರತಿ ದಿನ ಸಾಕ್ಷಿದಾರರನ್ನು ಕರೆಸಲಾಗಿತ್ತು. ಅಂತಿಮವಾಗಿ, ಅಕ್ಟೋಬರ್ 21 ರಂದು, ದಿನೇಶ್ ಅಪರಾಧಿ ಎಂದು ಸಾಬೀತಾಗಿ, ಶುಕ್ರವಾರ ಆತನಿಗೆ ಮರಣದಂಡನೆ ವಿಧಿಸಲಾಗಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ನ್ಯಾಯಾಲಯದ ತ್ವರಿತ ತೀರ್ಪು ಮತ್ತು ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸಿದ ಪೊಲೀಸರ ನಡೆಯನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ತ್ವರಿತ ಕ್ರಮಕ್ಕೆ ಜಿಗ್ನೇಶ್ ಮೇವಾನಿ ಆಗ್ರಹ

ಇದನ್ನೂ ಓದಿ: ರಾಜಸ್ಥಾನ: ದಲಿತ ಯುವಕನ ಬರ್ಬರ ಗುಂಪು ಹತ್ಯೆ, ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...