Homeಮುಖಪುಟರಾಜಸ್ಥಾನ: ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿದರೆ 5000 ರೂ ಬಹುಮಾನ

ರಾಜಸ್ಥಾನ: ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿದರೆ 5000 ರೂ ಬಹುಮಾನ

- Advertisement -
- Advertisement -

ರಸ್ತೆ ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಿ ಅವರನ್ನು ಪದೇ ಪದೇ ನ್ಯಾಯಾಲಯಕ್ಕೆ ಅಲೆಸಲಾಗುತ್ತದೆ ಎಂಬ ದೂರು ಆಗಾಗ್ಗೆ ಕೇಳಿಬರುತ್ತಿತ್ತು. ಹಾಗಾಗಿ ತಮ್ಮ ಕಣ್ಣಾರೆ ಅಪಘಾತದಲ್ಲಿ ಜನ ಸಾಯುತ್ತಿದ್ದರೂ ಬಹಳಷ್ಟು ಜನ ತಮ್ಮ ಪಾಡಿಗೆ ತಾವು ಹೋಗಿಬಿಡುತ್ತಿದ್ದರು. ಈ ಮನಸ್ಥಿತಿ ಬದಲಿಸಲು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಮುಂದಾಗಿದ್ದು ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡುವವರಿಗೆ ಈಗ 5,000 ರೂ ಬಹುಮಾನ ಘೋಷಿಸಿದ್ದಾರೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅನೇಕ ಜನ ಸಾವನ್ನಪ್ಪುತ್ತಿದ್ದಾರೆ. ಈಗ ಅಂತಹ ಜನರ ಜೀವ ಉಳಿಸಲು ರಾಜಸ್ಥಾನ ಸರ್ಕಾರ ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ, ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುವ ಜನರಿಗೆ ಸರ್ಕಾರದಿಂದ 5000 ರೂಪಾಯಿ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಗೆಹ್ಲೋಟ್ ಸರ್ಕಾರ ಘೋಷಿಸಿದೆ.

ಈ ಯೋಜನೆಗೆ ಚಿರಂಜೀವಿ ಜೀವನ್ ರಕ್ಷಾ ಯೋಜನೆ ಎಂದು ಹೆಸರಿಡಲಾಗಿದೆ. ಈ ಯೋಜನೆಯಡಿ, ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸಹಾಯ ಮಾಡುವವರ ಪೋಲಿಸ್ ವಿಚಾರಣೆ ಇರುವುದಿಲ್ಲ. ಅಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ತಲುಪಿಸಿದರೆ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಹಣವನ್ನೂ ಪಾವತಿ ಮಾಡುವಂತಿಲ್ಲ ಎಂದು ಯೋಜನೆಯಲ್ಲಿ ತಿಳಿಸಲಾಗಿದೆ.

ಈ ಯೋಜನೆಯಡಿ ಗಾಯಗೊಂಡ ವ್ಯಕ್ತಿಯನ್ನು ಸಾಧ್ಯವಾದಷ್ಟು ಬೇಗ ಸಹಾಯಕ್ಕಾಗಿ ಆಸ್ಪತ್ರೆಗೆ ಕರೆದೊಯ್ಯುವ ವ್ಯಕ್ತಿಯು ಬಹುಮಾನದ ಮೊತ್ತವನ್ನು ಶೀಘ್ರವಾಗಿಯೇ ಪಡೆಯುತ್ತಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆತಂದ ಮೇಲೆ ಪ್ರಮಾಣಪತ್ರವನ್ನು ಮಾತ್ರ ನೀಡಲಾಗುತ್ತದೆ. ಸರ್ಕಾರಿ ಆಂಬ್ಯುಲೆನ್ಸ್, ಖಾಸಗಿ ಆಂಬ್ಯುಲೆನ್ಸ್, ಪಿಸಿಆರ್ ವ್ಯಾನ್ ಮತ್ತು ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಈ ಯೋಜನೆಯ ಲಾಭವನ್ನು ಪಡೆಯುವುದಿಲ್ಲ. ಏಕೆಂದರೆ ಇದು ಅವರ ಕರ್ತವ್ಯ ಎಂದು ಉಲ್ಲೇಖಿಸಲಾಗಿದೆ.


ಇದನ್ನೂ ಓದಿ; #NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...