Homeರಾಷ್ಟ್ರೀಯರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ...

ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ಈ ರೀತಿಯ ಪದ್ದತಿಗಳು ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ವರದಿಯಾಗಿದೆ

- Advertisement -
- Advertisement -

ಹಣಕಾಸಿನ ವಹಿವಾಟುಗಳು, ಸಾಲಗಳ ಮರು ಪಾವತಿ ಸೇರಿದಂತೆ ತಮ್ಮ ವಿವಾದಗಳನ್ನು ಪರಿಹರಿಸುವ ಸಲುವಾಗಿ ಸ್ಟಾಂಪ್‌ ಪೇಪರ್‌‌ಗಳಲ್ಲಿ ಒಪ್ಪಂದ ನಡೆಸಿ 8 ರಿಂದ18 ವರ್ಷದೊಳಗಿನ ಹುಡುಗಿಯರನ್ನು ಮಾರಾಟ ಮಾಡುತ್ತಿರುವ ಅಘಾತಕಾರಿ ಘಟನೆ ರಾಜಸ್ಥಾನದ ಸುಮಾರು ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ದೈನಿಕ್ ಭಾಸ್ಕರ್‌ ದಿನಪತ್ರಿಕೆ ವರದಿ ಮಾಡಿದೆ.

ಹುಡುಗಿಯರ ಮಾರಾಟಕ್ಕೆ ನಿರಾಕರಿಸಿದರೆ ಗ್ರಾಮದ ಜಾತಿ ಮಂಡಳಿಗಳ ಆದೇಶದ ಮೇರೆಗೆ ಹುಡುಗಿಯರ ತಾಯಂದಿರ ಮೇಲೆ ಅತ್ಯಾಚಾರ ನಡೆಸಿ ಅದನ್ನು ಇತ್ಯರ್ಥ ಮಾಡಲಾಗುತ್ತದೆ ಎಂದು ವರದಿ ಹೇಳಿದೆ. ರಾಜ್ಯದ ಭಿಲ್ವಾರದಂತಹ ಸ್ಥಳಗಳಲ್ಲಿನ ಜನರು ತಮ್ಮ ವಿವಾದಗಳನ್ನು ಪೋಲೀಸರ ಬಳಿಗೆ ಹೋಗುವ ಬದಲು ಜಾತಿ ಮಂಡಳಿಗಳನ್ನು ಸಂಪರ್ಕಿಸುತ್ತಾರೆ ಎಂದು ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರಾಟವಾದ ಹುಡುಗಿಯರನ್ನು ಉತ್ತರ ಪ್ರದೇಶ, ಮಧ್ಯಪ್ರದೇಶ, ಮುಂಬೈ, ದೆಹಲಿ ಮತ್ತು ವಿದೇಶಗಳಿಗೆ ಕಳುಹಿಸಲಾಗುತ್ತಿದೆ. ಗುಲಾಮಗಿರಿಗೆ ಒಳಗಾದ ಅವರ ಮೇಲೆ ದೈಹಿಕ ಕಿರುಕುಳ, ಚಿತ್ರಹಿಂಸೆ ಮತ್ತು ಲೈಂಗಿಕ ದೌರ್ಜನ್ಯ ಎಸಗಲಾಗುತ್ತದೆ. ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ರಾಜಸ್ಥಾನ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ವರದಿ ಸಲ್ಲಿಸುವಂತೆ ಸೂಚಿಸಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ವ್ಯಕ್ತಿಯೊಬ್ಬ ತಾನು ಪಡೆದ 15 ಲಕ್ಷ ರೂ. ಸಾಲವನ್ನು ಮರು ಪಾವತಿಸಲು ತನ್ನ ಸಹೋದರಿಯನ್ನು ಮಾರಾಟ ಮಾಡುವಂತೆ ಜಾತಿ ಮಂಡಳಿ ಆದೇಶ ನೀಡಿತ್ತು. ಅಷ್ಟಾಗಿಯು ಅವರ ಸಾಲ ತೀರದೆ ಇದ್ದಾಗ ಅವರ 12 ವರ್ಷದ ಮಗಳನ್ನು ಕೂಡಾ ಮಾರಾಟ ಮಾಡುವಂತೆ ಜಾತಿ ಮಂಡಳಿ ಒತ್ತಾಯಿಸಿದೆ ಎಂದು ವರದಿ ಹೇಳಿದೆ.

ಅದೇ ರೀತಿಯ ಮತ್ತೊಂದು ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಚಿಕಿತ್ಸೆಗಾಗಿ ಪಡೆದಿದ್ದ 6 ಲಕ್ಷ ರೂ.ಗಳನ್ನು ಮರುಪಾವತಿ ಮಾಡಲು ತನ್ನ ಮನೆಯನ್ನು ಮಾರಿದ್ದರು. ಮನೆ ಮಾರಿಯು ಸಾಲ ತೀರದೆ ಇದ್ದಾಗ ತನ್ನ ಮಗಳನ್ನು ಮಾರಾಟ ಮಾಡಿದ್ದಾರೆ. ಈ ಬಾಲಕಿಯನ್ನು ಆಗ್ರಾಕ್ಕೆ ಕರೆದೊಯ್ಯಲಾಗಿತ್ತು, ಅಲ್ಲಿಂದ ಬಾಲಕಿಯನ್ನು ಮೂರು ಬಾರಿ ಮಾರಾಟ ಮಾಡಲಾಗಿದೆ ಜೊತೆಗೆ ಅವರು ನಾಲ್ಕು ಬಾರಿ ಗರ್ಭಿಣಿಯಾಗಿದ್ದಾರೆ ಎಂದು ವರದಿ ಹೇಳಿದೆ.

ಪತ್ರಿಕೆಯು ವರದಿಯಲ್ಲಿ ಉಲ್ಲೇಖಿಸಿರುವ ವಿಷಯಗಳು ನಿಜವೇ ಆಗಿದ್ದಲ್ಲಿ ಅದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹೇಳಿದೆ. ನಾಲ್ಕು ವಾರಗಳಲ್ಲಿ ಕ್ರಮ ತೆಗೆದುಕೊಂಡ ವಿವರವಾದ ವರದಿಯನ್ನು ಸಲ್ಲಿಸುವಂತೆ ಅದು ರಾಜಸ್ಥಾನದ ಮುಖ್ಯ ಕಾರ್ಯದರ್ಶಿಗೆ ಕೇಳಿದೆ. ಅಲ್ಲದೆ ಆಯೋಗವು ಈಗಾಗಲೇ ಕೈಗೊಂಡಿರುವ ಕ್ರಮಗಳ ವಿವರಗಳನ್ನು ಕೇಳಿದ್ದು, ಅಂತಹ ಘಟನೆಗಳನ್ನು ತಡೆಗಟ್ಟಲು ಹೇಳಿದೆ.

ಇದನ್ನೂ ಓದಿ:  ಕೇಟ್ ಮಿಲ್ಲೆಟ್ ಅವರ ’ಸೆಕ್ಷುವಲ್ ಪಾಲಿಟಿಕ್ಸ್’ ಅನುವಾದದ ಒಂದು ಭಾಗ

ಮಾನವ ಹಕ್ಕುಗಳು ಹಾಗೂ ಹೆಣ್ಣು ಮತ್ತು ಮಹಿಳೆಯರ ಘನತೆಯ ಹಕ್ಕನ್ನು ತೊಡೆದುಹಾಕುವ ಜಾತಿ ಆಧಾರಿತ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು, ಸಂವಿಧಾನ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಪ್ರಕಾರ ಗ್ರಾಮ ಸಭೆಗಳ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ವರದಿಯಲ್ಲಿ ವಿವರಿಸಬೇಕು ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹೇಳಿದೆ.

ಅಂತಹ ಅಪರಾಧಗಳಲ್ಲಿ ಭಾಗಿಯಾಗುವವರು, ಅವರಿಗೆ ಕುಮ್ಮಕ್ಕು ನೀಡುವವರು ಮತ್ತು ಅವರಿಗೆ ಸಹಾನುಭೂತಿ ಹೊಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ರಾಜಸ್ಥಾನ ಪೊಲೀಸ್ ಮುಖ್ಯಸ್ಥರಿಗೆ ಆಯೋಗ ನೋಟಿಸ್ ನೀಡಿದ್ದು, ಪ್ರಕರಣಗಳ ಸ್ಥಿತಿ, ಚಾರ್ಜ್ ಶೀಟ್‌ಗಳು, ಬಂಧನಗಳು ಇತ್ಯಾದಿಗಳ ವಿವರಗಳನ್ನು ಕೇಳಿದೆ.

ಇಂತಹ ಘಟನೆಗಳನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಅಥವಾ ಕೈಗೊಳ್ಳಲು ಉದ್ದೇಶಿಸಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡುವಂತೆ ಕೂಡಾ ಆಯೋಗವು ಪೊಲೀಸ್ ಮುಖ್ಯಸ್ಥರನ್ನು ಕೇಳಿದೆ.

ಇದನ್ನೂ ಓದಿ: ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ವಿಶೇಷ ವರದಿಗಾರ ಉಮೇಶ್ ಕುಮಾರ್ ಶರ್ಮಾ ಕೂಡ ರಾಜಸ್ಥಾನಕ್ಕೆ ಭೇಟಿ ನೀಡಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...