Homeರಾಷ್ಟ್ರೀಯರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ...

ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ಈ ರೀತಿಯ ಪದ್ದತಿಗಳು ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ವರದಿಯಾಗಿದೆ

- Advertisement -
- Advertisement -

ಹಣಕಾಸಿನ ವಹಿವಾಟುಗಳು, ಸಾಲಗಳ ಮರು ಪಾವತಿ ಸೇರಿದಂತೆ ತಮ್ಮ ವಿವಾದಗಳನ್ನು ಪರಿಹರಿಸುವ ಸಲುವಾಗಿ ಸ್ಟಾಂಪ್‌ ಪೇಪರ್‌‌ಗಳಲ್ಲಿ ಒಪ್ಪಂದ ನಡೆಸಿ 8 ರಿಂದ18 ವರ್ಷದೊಳಗಿನ ಹುಡುಗಿಯರನ್ನು ಮಾರಾಟ ಮಾಡುತ್ತಿರುವ ಅಘಾತಕಾರಿ ಘಟನೆ ರಾಜಸ್ಥಾನದ ಸುಮಾರು ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ದೈನಿಕ್ ಭಾಸ್ಕರ್‌ ದಿನಪತ್ರಿಕೆ ವರದಿ ಮಾಡಿದೆ.

ಹುಡುಗಿಯರ ಮಾರಾಟಕ್ಕೆ ನಿರಾಕರಿಸಿದರೆ ಗ್ರಾಮದ ಜಾತಿ ಮಂಡಳಿಗಳ ಆದೇಶದ ಮೇರೆಗೆ ಹುಡುಗಿಯರ ತಾಯಂದಿರ ಮೇಲೆ ಅತ್ಯಾಚಾರ ನಡೆಸಿ ಅದನ್ನು ಇತ್ಯರ್ಥ ಮಾಡಲಾಗುತ್ತದೆ ಎಂದು ವರದಿ ಹೇಳಿದೆ. ರಾಜ್ಯದ ಭಿಲ್ವಾರದಂತಹ ಸ್ಥಳಗಳಲ್ಲಿನ ಜನರು ತಮ್ಮ ವಿವಾದಗಳನ್ನು ಪೋಲೀಸರ ಬಳಿಗೆ ಹೋಗುವ ಬದಲು ಜಾತಿ ಮಂಡಳಿಗಳನ್ನು ಸಂಪರ್ಕಿಸುತ್ತಾರೆ ಎಂದು ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರಾಟವಾದ ಹುಡುಗಿಯರನ್ನು ಉತ್ತರ ಪ್ರದೇಶ, ಮಧ್ಯಪ್ರದೇಶ, ಮುಂಬೈ, ದೆಹಲಿ ಮತ್ತು ವಿದೇಶಗಳಿಗೆ ಕಳುಹಿಸಲಾಗುತ್ತಿದೆ. ಗುಲಾಮಗಿರಿಗೆ ಒಳಗಾದ ಅವರ ಮೇಲೆ ದೈಹಿಕ ಕಿರುಕುಳ, ಚಿತ್ರಹಿಂಸೆ ಮತ್ತು ಲೈಂಗಿಕ ದೌರ್ಜನ್ಯ ಎಸಗಲಾಗುತ್ತದೆ. ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ರಾಜಸ್ಥಾನ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ವರದಿ ಸಲ್ಲಿಸುವಂತೆ ಸೂಚಿಸಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ವ್ಯಕ್ತಿಯೊಬ್ಬ ತಾನು ಪಡೆದ 15 ಲಕ್ಷ ರೂ. ಸಾಲವನ್ನು ಮರು ಪಾವತಿಸಲು ತನ್ನ ಸಹೋದರಿಯನ್ನು ಮಾರಾಟ ಮಾಡುವಂತೆ ಜಾತಿ ಮಂಡಳಿ ಆದೇಶ ನೀಡಿತ್ತು. ಅಷ್ಟಾಗಿಯು ಅವರ ಸಾಲ ತೀರದೆ ಇದ್ದಾಗ ಅವರ 12 ವರ್ಷದ ಮಗಳನ್ನು ಕೂಡಾ ಮಾರಾಟ ಮಾಡುವಂತೆ ಜಾತಿ ಮಂಡಳಿ ಒತ್ತಾಯಿಸಿದೆ ಎಂದು ವರದಿ ಹೇಳಿದೆ.

ಅದೇ ರೀತಿಯ ಮತ್ತೊಂದು ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಚಿಕಿತ್ಸೆಗಾಗಿ ಪಡೆದಿದ್ದ 6 ಲಕ್ಷ ರೂ.ಗಳನ್ನು ಮರುಪಾವತಿ ಮಾಡಲು ತನ್ನ ಮನೆಯನ್ನು ಮಾರಿದ್ದರು. ಮನೆ ಮಾರಿಯು ಸಾಲ ತೀರದೆ ಇದ್ದಾಗ ತನ್ನ ಮಗಳನ್ನು ಮಾರಾಟ ಮಾಡಿದ್ದಾರೆ. ಈ ಬಾಲಕಿಯನ್ನು ಆಗ್ರಾಕ್ಕೆ ಕರೆದೊಯ್ಯಲಾಗಿತ್ತು, ಅಲ್ಲಿಂದ ಬಾಲಕಿಯನ್ನು ಮೂರು ಬಾರಿ ಮಾರಾಟ ಮಾಡಲಾಗಿದೆ ಜೊತೆಗೆ ಅವರು ನಾಲ್ಕು ಬಾರಿ ಗರ್ಭಿಣಿಯಾಗಿದ್ದಾರೆ ಎಂದು ವರದಿ ಹೇಳಿದೆ.

ಪತ್ರಿಕೆಯು ವರದಿಯಲ್ಲಿ ಉಲ್ಲೇಖಿಸಿರುವ ವಿಷಯಗಳು ನಿಜವೇ ಆಗಿದ್ದಲ್ಲಿ ಅದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹೇಳಿದೆ. ನಾಲ್ಕು ವಾರಗಳಲ್ಲಿ ಕ್ರಮ ತೆಗೆದುಕೊಂಡ ವಿವರವಾದ ವರದಿಯನ್ನು ಸಲ್ಲಿಸುವಂತೆ ಅದು ರಾಜಸ್ಥಾನದ ಮುಖ್ಯ ಕಾರ್ಯದರ್ಶಿಗೆ ಕೇಳಿದೆ. ಅಲ್ಲದೆ ಆಯೋಗವು ಈಗಾಗಲೇ ಕೈಗೊಂಡಿರುವ ಕ್ರಮಗಳ ವಿವರಗಳನ್ನು ಕೇಳಿದ್ದು, ಅಂತಹ ಘಟನೆಗಳನ್ನು ತಡೆಗಟ್ಟಲು ಹೇಳಿದೆ.

ಇದನ್ನೂ ಓದಿ:  ಕೇಟ್ ಮಿಲ್ಲೆಟ್ ಅವರ ’ಸೆಕ್ಷುವಲ್ ಪಾಲಿಟಿಕ್ಸ್’ ಅನುವಾದದ ಒಂದು ಭಾಗ

ಮಾನವ ಹಕ್ಕುಗಳು ಹಾಗೂ ಹೆಣ್ಣು ಮತ್ತು ಮಹಿಳೆಯರ ಘನತೆಯ ಹಕ್ಕನ್ನು ತೊಡೆದುಹಾಕುವ ಜಾತಿ ಆಧಾರಿತ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು, ಸಂವಿಧಾನ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಪ್ರಕಾರ ಗ್ರಾಮ ಸಭೆಗಳ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ವರದಿಯಲ್ಲಿ ವಿವರಿಸಬೇಕು ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹೇಳಿದೆ.

ಅಂತಹ ಅಪರಾಧಗಳಲ್ಲಿ ಭಾಗಿಯಾಗುವವರು, ಅವರಿಗೆ ಕುಮ್ಮಕ್ಕು ನೀಡುವವರು ಮತ್ತು ಅವರಿಗೆ ಸಹಾನುಭೂತಿ ಹೊಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ರಾಜಸ್ಥಾನ ಪೊಲೀಸ್ ಮುಖ್ಯಸ್ಥರಿಗೆ ಆಯೋಗ ನೋಟಿಸ್ ನೀಡಿದ್ದು, ಪ್ರಕರಣಗಳ ಸ್ಥಿತಿ, ಚಾರ್ಜ್ ಶೀಟ್‌ಗಳು, ಬಂಧನಗಳು ಇತ್ಯಾದಿಗಳ ವಿವರಗಳನ್ನು ಕೇಳಿದೆ.

ಇಂತಹ ಘಟನೆಗಳನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಅಥವಾ ಕೈಗೊಳ್ಳಲು ಉದ್ದೇಶಿಸಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡುವಂತೆ ಕೂಡಾ ಆಯೋಗವು ಪೊಲೀಸ್ ಮುಖ್ಯಸ್ಥರನ್ನು ಕೇಳಿದೆ.

ಇದನ್ನೂ ಓದಿ: ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ವಿಶೇಷ ವರದಿಗಾರ ಉಮೇಶ್ ಕುಮಾರ್ ಶರ್ಮಾ ಕೂಡ ರಾಜಸ್ಥಾನಕ್ಕೆ ಭೇಟಿ ನೀಡಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...