Homeರಾಷ್ಟ್ರೀಯರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ...

ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ಈ ರೀತಿಯ ಪದ್ದತಿಗಳು ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ವರದಿಯಾಗಿದೆ

- Advertisement -
- Advertisement -

ಹಣಕಾಸಿನ ವಹಿವಾಟುಗಳು, ಸಾಲಗಳ ಮರು ಪಾವತಿ ಸೇರಿದಂತೆ ತಮ್ಮ ವಿವಾದಗಳನ್ನು ಪರಿಹರಿಸುವ ಸಲುವಾಗಿ ಸ್ಟಾಂಪ್‌ ಪೇಪರ್‌‌ಗಳಲ್ಲಿ ಒಪ್ಪಂದ ನಡೆಸಿ 8 ರಿಂದ18 ವರ್ಷದೊಳಗಿನ ಹುಡುಗಿಯರನ್ನು ಮಾರಾಟ ಮಾಡುತ್ತಿರುವ ಅಘಾತಕಾರಿ ಘಟನೆ ರಾಜಸ್ಥಾನದ ಸುಮಾರು ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ದೈನಿಕ್ ಭಾಸ್ಕರ್‌ ದಿನಪತ್ರಿಕೆ ವರದಿ ಮಾಡಿದೆ.

ಹುಡುಗಿಯರ ಮಾರಾಟಕ್ಕೆ ನಿರಾಕರಿಸಿದರೆ ಗ್ರಾಮದ ಜಾತಿ ಮಂಡಳಿಗಳ ಆದೇಶದ ಮೇರೆಗೆ ಹುಡುಗಿಯರ ತಾಯಂದಿರ ಮೇಲೆ ಅತ್ಯಾಚಾರ ನಡೆಸಿ ಅದನ್ನು ಇತ್ಯರ್ಥ ಮಾಡಲಾಗುತ್ತದೆ ಎಂದು ವರದಿ ಹೇಳಿದೆ. ರಾಜ್ಯದ ಭಿಲ್ವಾರದಂತಹ ಸ್ಥಳಗಳಲ್ಲಿನ ಜನರು ತಮ್ಮ ವಿವಾದಗಳನ್ನು ಪೋಲೀಸರ ಬಳಿಗೆ ಹೋಗುವ ಬದಲು ಜಾತಿ ಮಂಡಳಿಗಳನ್ನು ಸಂಪರ್ಕಿಸುತ್ತಾರೆ ಎಂದು ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರಾಟವಾದ ಹುಡುಗಿಯರನ್ನು ಉತ್ತರ ಪ್ರದೇಶ, ಮಧ್ಯಪ್ರದೇಶ, ಮುಂಬೈ, ದೆಹಲಿ ಮತ್ತು ವಿದೇಶಗಳಿಗೆ ಕಳುಹಿಸಲಾಗುತ್ತಿದೆ. ಗುಲಾಮಗಿರಿಗೆ ಒಳಗಾದ ಅವರ ಮೇಲೆ ದೈಹಿಕ ಕಿರುಕುಳ, ಚಿತ್ರಹಿಂಸೆ ಮತ್ತು ಲೈಂಗಿಕ ದೌರ್ಜನ್ಯ ಎಸಗಲಾಗುತ್ತದೆ. ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ರಾಜಸ್ಥಾನ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ವರದಿ ಸಲ್ಲಿಸುವಂತೆ ಸೂಚಿಸಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ವ್ಯಕ್ತಿಯೊಬ್ಬ ತಾನು ಪಡೆದ 15 ಲಕ್ಷ ರೂ. ಸಾಲವನ್ನು ಮರು ಪಾವತಿಸಲು ತನ್ನ ಸಹೋದರಿಯನ್ನು ಮಾರಾಟ ಮಾಡುವಂತೆ ಜಾತಿ ಮಂಡಳಿ ಆದೇಶ ನೀಡಿತ್ತು. ಅಷ್ಟಾಗಿಯು ಅವರ ಸಾಲ ತೀರದೆ ಇದ್ದಾಗ ಅವರ 12 ವರ್ಷದ ಮಗಳನ್ನು ಕೂಡಾ ಮಾರಾಟ ಮಾಡುವಂತೆ ಜಾತಿ ಮಂಡಳಿ ಒತ್ತಾಯಿಸಿದೆ ಎಂದು ವರದಿ ಹೇಳಿದೆ.

ಅದೇ ರೀತಿಯ ಮತ್ತೊಂದು ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಚಿಕಿತ್ಸೆಗಾಗಿ ಪಡೆದಿದ್ದ 6 ಲಕ್ಷ ರೂ.ಗಳನ್ನು ಮರುಪಾವತಿ ಮಾಡಲು ತನ್ನ ಮನೆಯನ್ನು ಮಾರಿದ್ದರು. ಮನೆ ಮಾರಿಯು ಸಾಲ ತೀರದೆ ಇದ್ದಾಗ ತನ್ನ ಮಗಳನ್ನು ಮಾರಾಟ ಮಾಡಿದ್ದಾರೆ. ಈ ಬಾಲಕಿಯನ್ನು ಆಗ್ರಾಕ್ಕೆ ಕರೆದೊಯ್ಯಲಾಗಿತ್ತು, ಅಲ್ಲಿಂದ ಬಾಲಕಿಯನ್ನು ಮೂರು ಬಾರಿ ಮಾರಾಟ ಮಾಡಲಾಗಿದೆ ಜೊತೆಗೆ ಅವರು ನಾಲ್ಕು ಬಾರಿ ಗರ್ಭಿಣಿಯಾಗಿದ್ದಾರೆ ಎಂದು ವರದಿ ಹೇಳಿದೆ.

ಪತ್ರಿಕೆಯು ವರದಿಯಲ್ಲಿ ಉಲ್ಲೇಖಿಸಿರುವ ವಿಷಯಗಳು ನಿಜವೇ ಆಗಿದ್ದಲ್ಲಿ ಅದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹೇಳಿದೆ. ನಾಲ್ಕು ವಾರಗಳಲ್ಲಿ ಕ್ರಮ ತೆಗೆದುಕೊಂಡ ವಿವರವಾದ ವರದಿಯನ್ನು ಸಲ್ಲಿಸುವಂತೆ ಅದು ರಾಜಸ್ಥಾನದ ಮುಖ್ಯ ಕಾರ್ಯದರ್ಶಿಗೆ ಕೇಳಿದೆ. ಅಲ್ಲದೆ ಆಯೋಗವು ಈಗಾಗಲೇ ಕೈಗೊಂಡಿರುವ ಕ್ರಮಗಳ ವಿವರಗಳನ್ನು ಕೇಳಿದ್ದು, ಅಂತಹ ಘಟನೆಗಳನ್ನು ತಡೆಗಟ್ಟಲು ಹೇಳಿದೆ.

ಇದನ್ನೂ ಓದಿ:  ಕೇಟ್ ಮಿಲ್ಲೆಟ್ ಅವರ ’ಸೆಕ್ಷುವಲ್ ಪಾಲಿಟಿಕ್ಸ್’ ಅನುವಾದದ ಒಂದು ಭಾಗ

ಮಾನವ ಹಕ್ಕುಗಳು ಹಾಗೂ ಹೆಣ್ಣು ಮತ್ತು ಮಹಿಳೆಯರ ಘನತೆಯ ಹಕ್ಕನ್ನು ತೊಡೆದುಹಾಕುವ ಜಾತಿ ಆಧಾರಿತ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು, ಸಂವಿಧಾನ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಪ್ರಕಾರ ಗ್ರಾಮ ಸಭೆಗಳ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ವರದಿಯಲ್ಲಿ ವಿವರಿಸಬೇಕು ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹೇಳಿದೆ.

ಅಂತಹ ಅಪರಾಧಗಳಲ್ಲಿ ಭಾಗಿಯಾಗುವವರು, ಅವರಿಗೆ ಕುಮ್ಮಕ್ಕು ನೀಡುವವರು ಮತ್ತು ಅವರಿಗೆ ಸಹಾನುಭೂತಿ ಹೊಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ರಾಜಸ್ಥಾನ ಪೊಲೀಸ್ ಮುಖ್ಯಸ್ಥರಿಗೆ ಆಯೋಗ ನೋಟಿಸ್ ನೀಡಿದ್ದು, ಪ್ರಕರಣಗಳ ಸ್ಥಿತಿ, ಚಾರ್ಜ್ ಶೀಟ್‌ಗಳು, ಬಂಧನಗಳು ಇತ್ಯಾದಿಗಳ ವಿವರಗಳನ್ನು ಕೇಳಿದೆ.

ಇಂತಹ ಘಟನೆಗಳನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಅಥವಾ ಕೈಗೊಳ್ಳಲು ಉದ್ದೇಶಿಸಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡುವಂತೆ ಕೂಡಾ ಆಯೋಗವು ಪೊಲೀಸ್ ಮುಖ್ಯಸ್ಥರನ್ನು ಕೇಳಿದೆ.

ಇದನ್ನೂ ಓದಿ: ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ವಿಶೇಷ ವರದಿಗಾರ ಉಮೇಶ್ ಕುಮಾರ್ ಶರ್ಮಾ ಕೂಡ ರಾಜಸ್ಥಾನಕ್ಕೆ ಭೇಟಿ ನೀಡಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...