Homeರಾಷ್ಟ್ರೀಯರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ...

ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ಈ ರೀತಿಯ ಪದ್ದತಿಗಳು ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ವರದಿಯಾಗಿದೆ

- Advertisement -
- Advertisement -

ಹಣಕಾಸಿನ ವಹಿವಾಟುಗಳು, ಸಾಲಗಳ ಮರು ಪಾವತಿ ಸೇರಿದಂತೆ ತಮ್ಮ ವಿವಾದಗಳನ್ನು ಪರಿಹರಿಸುವ ಸಲುವಾಗಿ ಸ್ಟಾಂಪ್‌ ಪೇಪರ್‌‌ಗಳಲ್ಲಿ ಒಪ್ಪಂದ ನಡೆಸಿ 8 ರಿಂದ18 ವರ್ಷದೊಳಗಿನ ಹುಡುಗಿಯರನ್ನು ಮಾರಾಟ ಮಾಡುತ್ತಿರುವ ಅಘಾತಕಾರಿ ಘಟನೆ ರಾಜಸ್ಥಾನದ ಸುಮಾರು ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ದೈನಿಕ್ ಭಾಸ್ಕರ್‌ ದಿನಪತ್ರಿಕೆ ವರದಿ ಮಾಡಿದೆ.

ಹುಡುಗಿಯರ ಮಾರಾಟಕ್ಕೆ ನಿರಾಕರಿಸಿದರೆ ಗ್ರಾಮದ ಜಾತಿ ಮಂಡಳಿಗಳ ಆದೇಶದ ಮೇರೆಗೆ ಹುಡುಗಿಯರ ತಾಯಂದಿರ ಮೇಲೆ ಅತ್ಯಾಚಾರ ನಡೆಸಿ ಅದನ್ನು ಇತ್ಯರ್ಥ ಮಾಡಲಾಗುತ್ತದೆ ಎಂದು ವರದಿ ಹೇಳಿದೆ. ರಾಜ್ಯದ ಭಿಲ್ವಾರದಂತಹ ಸ್ಥಳಗಳಲ್ಲಿನ ಜನರು ತಮ್ಮ ವಿವಾದಗಳನ್ನು ಪೋಲೀಸರ ಬಳಿಗೆ ಹೋಗುವ ಬದಲು ಜಾತಿ ಮಂಡಳಿಗಳನ್ನು ಸಂಪರ್ಕಿಸುತ್ತಾರೆ ಎಂದು ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರಾಟವಾದ ಹುಡುಗಿಯರನ್ನು ಉತ್ತರ ಪ್ರದೇಶ, ಮಧ್ಯಪ್ರದೇಶ, ಮುಂಬೈ, ದೆಹಲಿ ಮತ್ತು ವಿದೇಶಗಳಿಗೆ ಕಳುಹಿಸಲಾಗುತ್ತಿದೆ. ಗುಲಾಮಗಿರಿಗೆ ಒಳಗಾದ ಅವರ ಮೇಲೆ ದೈಹಿಕ ಕಿರುಕುಳ, ಚಿತ್ರಹಿಂಸೆ ಮತ್ತು ಲೈಂಗಿಕ ದೌರ್ಜನ್ಯ ಎಸಗಲಾಗುತ್ತದೆ. ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ರಾಜಸ್ಥಾನ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ವರದಿ ಸಲ್ಲಿಸುವಂತೆ ಸೂಚಿಸಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ವ್ಯಕ್ತಿಯೊಬ್ಬ ತಾನು ಪಡೆದ 15 ಲಕ್ಷ ರೂ. ಸಾಲವನ್ನು ಮರು ಪಾವತಿಸಲು ತನ್ನ ಸಹೋದರಿಯನ್ನು ಮಾರಾಟ ಮಾಡುವಂತೆ ಜಾತಿ ಮಂಡಳಿ ಆದೇಶ ನೀಡಿತ್ತು. ಅಷ್ಟಾಗಿಯು ಅವರ ಸಾಲ ತೀರದೆ ಇದ್ದಾಗ ಅವರ 12 ವರ್ಷದ ಮಗಳನ್ನು ಕೂಡಾ ಮಾರಾಟ ಮಾಡುವಂತೆ ಜಾತಿ ಮಂಡಳಿ ಒತ್ತಾಯಿಸಿದೆ ಎಂದು ವರದಿ ಹೇಳಿದೆ.

ಅದೇ ರೀತಿಯ ಮತ್ತೊಂದು ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಚಿಕಿತ್ಸೆಗಾಗಿ ಪಡೆದಿದ್ದ 6 ಲಕ್ಷ ರೂ.ಗಳನ್ನು ಮರುಪಾವತಿ ಮಾಡಲು ತನ್ನ ಮನೆಯನ್ನು ಮಾರಿದ್ದರು. ಮನೆ ಮಾರಿಯು ಸಾಲ ತೀರದೆ ಇದ್ದಾಗ ತನ್ನ ಮಗಳನ್ನು ಮಾರಾಟ ಮಾಡಿದ್ದಾರೆ. ಈ ಬಾಲಕಿಯನ್ನು ಆಗ್ರಾಕ್ಕೆ ಕರೆದೊಯ್ಯಲಾಗಿತ್ತು, ಅಲ್ಲಿಂದ ಬಾಲಕಿಯನ್ನು ಮೂರು ಬಾರಿ ಮಾರಾಟ ಮಾಡಲಾಗಿದೆ ಜೊತೆಗೆ ಅವರು ನಾಲ್ಕು ಬಾರಿ ಗರ್ಭಿಣಿಯಾಗಿದ್ದಾರೆ ಎಂದು ವರದಿ ಹೇಳಿದೆ.

ಪತ್ರಿಕೆಯು ವರದಿಯಲ್ಲಿ ಉಲ್ಲೇಖಿಸಿರುವ ವಿಷಯಗಳು ನಿಜವೇ ಆಗಿದ್ದಲ್ಲಿ ಅದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹೇಳಿದೆ. ನಾಲ್ಕು ವಾರಗಳಲ್ಲಿ ಕ್ರಮ ತೆಗೆದುಕೊಂಡ ವಿವರವಾದ ವರದಿಯನ್ನು ಸಲ್ಲಿಸುವಂತೆ ಅದು ರಾಜಸ್ಥಾನದ ಮುಖ್ಯ ಕಾರ್ಯದರ್ಶಿಗೆ ಕೇಳಿದೆ. ಅಲ್ಲದೆ ಆಯೋಗವು ಈಗಾಗಲೇ ಕೈಗೊಂಡಿರುವ ಕ್ರಮಗಳ ವಿವರಗಳನ್ನು ಕೇಳಿದ್ದು, ಅಂತಹ ಘಟನೆಗಳನ್ನು ತಡೆಗಟ್ಟಲು ಹೇಳಿದೆ.

ಇದನ್ನೂ ಓದಿ:  ಕೇಟ್ ಮಿಲ್ಲೆಟ್ ಅವರ ’ಸೆಕ್ಷುವಲ್ ಪಾಲಿಟಿಕ್ಸ್’ ಅನುವಾದದ ಒಂದು ಭಾಗ

ಮಾನವ ಹಕ್ಕುಗಳು ಹಾಗೂ ಹೆಣ್ಣು ಮತ್ತು ಮಹಿಳೆಯರ ಘನತೆಯ ಹಕ್ಕನ್ನು ತೊಡೆದುಹಾಕುವ ಜಾತಿ ಆಧಾರಿತ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು, ಸಂವಿಧಾನ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಪ್ರಕಾರ ಗ್ರಾಮ ಸಭೆಗಳ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ವರದಿಯಲ್ಲಿ ವಿವರಿಸಬೇಕು ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹೇಳಿದೆ.

ಅಂತಹ ಅಪರಾಧಗಳಲ್ಲಿ ಭಾಗಿಯಾಗುವವರು, ಅವರಿಗೆ ಕುಮ್ಮಕ್ಕು ನೀಡುವವರು ಮತ್ತು ಅವರಿಗೆ ಸಹಾನುಭೂತಿ ಹೊಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ರಾಜಸ್ಥಾನ ಪೊಲೀಸ್ ಮುಖ್ಯಸ್ಥರಿಗೆ ಆಯೋಗ ನೋಟಿಸ್ ನೀಡಿದ್ದು, ಪ್ರಕರಣಗಳ ಸ್ಥಿತಿ, ಚಾರ್ಜ್ ಶೀಟ್‌ಗಳು, ಬಂಧನಗಳು ಇತ್ಯಾದಿಗಳ ವಿವರಗಳನ್ನು ಕೇಳಿದೆ.

ಇಂತಹ ಘಟನೆಗಳನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಅಥವಾ ಕೈಗೊಳ್ಳಲು ಉದ್ದೇಶಿಸಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡುವಂತೆ ಕೂಡಾ ಆಯೋಗವು ಪೊಲೀಸ್ ಮುಖ್ಯಸ್ಥರನ್ನು ಕೇಳಿದೆ.

ಇದನ್ನೂ ಓದಿ: ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ವಿಶೇಷ ವರದಿಗಾರ ಉಮೇಶ್ ಕುಮಾರ್ ಶರ್ಮಾ ಕೂಡ ರಾಜಸ್ಥಾನಕ್ಕೆ ಭೇಟಿ ನೀಡಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...