Homeಮುಖಪುಟಸುಪ್ರೀಂ ನಲ್ಲಿ ಸಚಿನ್ ಪೈಲಟ್ ಬಣದ ವಿರುದ್ಧ ಸಲ್ಲಿಸಿದ್ದ ಅರ್ಜಿ ಕೈಬಿಟ್ಟ ರಾಜಸ್ಥಾನ ಸ್ಪೀಕರ್..

ಸುಪ್ರೀಂ ನಲ್ಲಿ ಸಚಿನ್ ಪೈಲಟ್ ಬಣದ ವಿರುದ್ಧ ಸಲ್ಲಿಸಿದ್ದ ಅರ್ಜಿ ಕೈಬಿಟ್ಟ ರಾಜಸ್ಥಾನ ಸ್ಪೀಕರ್..

ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರನ್ನೂ ಒಳಗೊಂಡ ನ್ಯಾಯಪೀಠ ಅರ್ಜಿ ವಾಪಸ್ ಪಡೆಯಲು ಅವಕಾಶ ನೀಡಿತು.

- Advertisement -
- Advertisement -

ವಿಧಾನಸಭಾ ಅಧಿವೇಶನ ಕರೆಯುವಂತೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಲ್ಲಿಸಿದ್ದ ಅರ್ಜಿಯನ್ನು ಎರಡನೇ ಬಾರಿ ರಾಜ್ಯಪಾಲ ಕಾಳ್‌ರಾಜ್‌ ಮಿಶ್ರಾ ತಿರಸ್ಕರಿಸಿದ ಬೆನ್ನಲ್ಲೇ ಬಂಡಾಯ ಶಾಸಕರ ವಿರುದ್ಧ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಸ್ಪೀಕರ್ ಸಿಪಿ ಜೋಶಿ ಹಿಂಪಡೆದಿದ್ದಾರೆ.

ರಾಜಸ್ಥಾನದಲ್ಲಿ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು 18 ಕಾಂಗ್ರೆಸ್ ಶಾಸಕರ ವಿರುದ್ಧ ಅನರ್ಹತೆ ವಿಚಾರಣೆಯನ್ನು ಮುಂದೂಡಲು ಹೈಕೋರ್ಟ್ ನೀಡಿದ್ದ ನಿರ್ದೇಶನ ಪ್ರಶ್ನಿಸಿ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ಥಾನ ವಿಧಾನಸಭೆ ಸ್ಪೀಕರ್ ಹಿಂತೆಗೆದುಕೊಂಡಿದ್ದಾರೆ.

ಈ ಮೊದಲು ಅಧಿವೇಶನ ನಡೆಸಲು ಸಾಧ್ಯವಿಲ್ಲ, ಏಕೆಂದರೆ ಈ ವಿಚಾರ ಕೋರ್ಟ್‌ನಲ್ಲಿದೆ ಎಂದು ರಾಜ್ಯಪಾಲರು ಕಾರಣ ನೀಡಿದ್ದರು. ಈ ವಾದವನ್ನು ದುರ್ಬಲಗೊಳಿಸುವ ಸಲುವಾಗಿ ಕಾಂಗ್ರೆಸ್ ಪಕ್ಷವು ಸುಪ್ರೀಂನಿಂದ ತನ್ನ ಅರ್ಜಿಯನ್ನು ಹಿಂಪಡೆದಿದೆ ಎನ್ನಲಾಗಿದೆ.

“ಹೈಕೋರ್ಟ್‌ಗಳು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಅನುಸರಿಸುತ್ತಿಲ್ಲ ಎಂಬುದು ನಮಗೆ ನೋವುಂಟು ಮಾಡಿದೆ. ಆದ್ದರಿಂದ ಈ ಮನವಿಯನ್ನು ಹಿಂತೆಗೆದುಕೊಳ್ಳಲು ದಯೆಯಿಂದ ನಮಗೆ ಅನುಮತಿ ನೀಡಿ” ಎಂದು ಜೋಶಿಯನ್ನು ಪ್ರತಿನಿಧಿಸುತ್ತಿದ್ದ ಹಿರಿಯ ಸಲಹೆಗಾರ ಕಪಿಲ್ ಸಿಬಲ್ ಸುಪ್ರೀಂನಲ್ಲಿ ಮನವಿ ಮಾಡಿದ್ದಾರೆ.

ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರನ್ನೂ ಒಳಗೊಂಡ ನ್ಯಾಯಪೀಠ ಅರ್ಜಿ ವಾಪಸ್ ಪಡೆಯಲು ಅವಕಾಶ ನೀಡಿತು.

ಸದ್ಯಕ್ಕೆ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವು 102 ಸದಸ್ಯ ಬಲವನ್ನು ಹೊಂದಿದ್ದು ಸರಳ ಬಹುಮತಕ್ಕಿಂತ 1 ಸ್ಥಾನ ಮಾತ್ರ ಹೆಚ್ಚು ಪಡೆದಿದೆ. ಪೈಲಟ್‌ ಬಣದಲ್ಲಿರುವ ಕಾಂಗ್ರೆಸ್ ಶಾಸಕರು ಜೈಪುರಕ್ಕೆ ವಾಪಸ್ ಬಂದಲ್ಲಿ ಅವರಲ್ಲಿ ಕೆಲವರು ತನ್ನ ಪರವಾಗಿ ಮತ ಚಲಾಯಿಸಬಹುದೆಂಬ ವಿಶ್ವಾಸ ಅವರಿಗಿದೆ.

ಇದೇ ಸಂದರ್ಭದಲ್ಲಿ ಬಿಎಸ್‌ಪಿ ಮುಖ್ಯಸ್ಥೆ ಮಾಯವತಿಯವರು, ರಾಜಸ್ಥಾನದಲ್ಲಿ ಬಿಎಸ್‌ಪಿಯಿಂದ ಆಯ್ಕೆಯಾಗಿ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿರುವ 6 ಶಾಸಕರಿಗೆ ಒಂದು ವೇಳೆ ವಿಶ್ವಾಸಮತ ಯಾಚನೆ ನಡೆದರೆ ಗೆಹ್ಲೋಟ್ ವಿರುದ್ಧವಾಗಿ ಮತ ಚಲಾಯಿಸುವಂತೆ ವಿಪ್ ಜಾರಿಗೊಳಿಸಿದ್ದಾರೆ. ಬಿಎಸ್‌ಪಿಯ ಒಟ್ಟು 6 ಶಾಸಕರಲ್ಲಿ 6 ಜನರು ಕಾಂಗ್ರೆಸ್ ಸೇರಿರುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗುವುದಿಲ್ಲ ಎಂಬುದು ಕಾಂಗ್ರೆಸ್ ನಿಲುವಾಗಿದೆ. ಬಿಎಸ್‌ಪಿ ಪಕ್ಷವು ರಾಷ್ಟ್ರೀಯ ಅಸ್ತಿತ್ವ ಹೊಂದಿದ್ದು ಕೇವಲ ಒಂದು ರಾಜ್ಯದಲ್ಲಿ ಪಕ್ಷಾಂತರ ಮಾಡಿದರೆ ಅದು ತಾಂತ್ರಿಕವಾಗಿ ತಪ್ಪು ಎಂಬುದು ಮಾಯಾವತಿಯವರ ನಿಲುವಾಗಿದೆ.


ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕಾಗಿ ಮಾತನಾಡಿ: ರಾಜಸ್ಥಾನ ಬಿಕ್ಕಟ್ಟಿನ ಕುರಿತು ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...