Homeಮುಖಪುಟಸುಪ್ರೀಂ ನಲ್ಲಿ ಸಚಿನ್ ಪೈಲಟ್ ಬಣದ ವಿರುದ್ಧ ಸಲ್ಲಿಸಿದ್ದ ಅರ್ಜಿ ಕೈಬಿಟ್ಟ ರಾಜಸ್ಥಾನ ಸ್ಪೀಕರ್..

ಸುಪ್ರೀಂ ನಲ್ಲಿ ಸಚಿನ್ ಪೈಲಟ್ ಬಣದ ವಿರುದ್ಧ ಸಲ್ಲಿಸಿದ್ದ ಅರ್ಜಿ ಕೈಬಿಟ್ಟ ರಾಜಸ್ಥಾನ ಸ್ಪೀಕರ್..

ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರನ್ನೂ ಒಳಗೊಂಡ ನ್ಯಾಯಪೀಠ ಅರ್ಜಿ ವಾಪಸ್ ಪಡೆಯಲು ಅವಕಾಶ ನೀಡಿತು.

- Advertisement -
- Advertisement -

ವಿಧಾನಸಭಾ ಅಧಿವೇಶನ ಕರೆಯುವಂತೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಲ್ಲಿಸಿದ್ದ ಅರ್ಜಿಯನ್ನು ಎರಡನೇ ಬಾರಿ ರಾಜ್ಯಪಾಲ ಕಾಳ್‌ರಾಜ್‌ ಮಿಶ್ರಾ ತಿರಸ್ಕರಿಸಿದ ಬೆನ್ನಲ್ಲೇ ಬಂಡಾಯ ಶಾಸಕರ ವಿರುದ್ಧ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಸ್ಪೀಕರ್ ಸಿಪಿ ಜೋಶಿ ಹಿಂಪಡೆದಿದ್ದಾರೆ.

ರಾಜಸ್ಥಾನದಲ್ಲಿ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು 18 ಕಾಂಗ್ರೆಸ್ ಶಾಸಕರ ವಿರುದ್ಧ ಅನರ್ಹತೆ ವಿಚಾರಣೆಯನ್ನು ಮುಂದೂಡಲು ಹೈಕೋರ್ಟ್ ನೀಡಿದ್ದ ನಿರ್ದೇಶನ ಪ್ರಶ್ನಿಸಿ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ಥಾನ ವಿಧಾನಸಭೆ ಸ್ಪೀಕರ್ ಹಿಂತೆಗೆದುಕೊಂಡಿದ್ದಾರೆ.

ಈ ಮೊದಲು ಅಧಿವೇಶನ ನಡೆಸಲು ಸಾಧ್ಯವಿಲ್ಲ, ಏಕೆಂದರೆ ಈ ವಿಚಾರ ಕೋರ್ಟ್‌ನಲ್ಲಿದೆ ಎಂದು ರಾಜ್ಯಪಾಲರು ಕಾರಣ ನೀಡಿದ್ದರು. ಈ ವಾದವನ್ನು ದುರ್ಬಲಗೊಳಿಸುವ ಸಲುವಾಗಿ ಕಾಂಗ್ರೆಸ್ ಪಕ್ಷವು ಸುಪ್ರೀಂನಿಂದ ತನ್ನ ಅರ್ಜಿಯನ್ನು ಹಿಂಪಡೆದಿದೆ ಎನ್ನಲಾಗಿದೆ.

“ಹೈಕೋರ್ಟ್‌ಗಳು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಅನುಸರಿಸುತ್ತಿಲ್ಲ ಎಂಬುದು ನಮಗೆ ನೋವುಂಟು ಮಾಡಿದೆ. ಆದ್ದರಿಂದ ಈ ಮನವಿಯನ್ನು ಹಿಂತೆಗೆದುಕೊಳ್ಳಲು ದಯೆಯಿಂದ ನಮಗೆ ಅನುಮತಿ ನೀಡಿ” ಎಂದು ಜೋಶಿಯನ್ನು ಪ್ರತಿನಿಧಿಸುತ್ತಿದ್ದ ಹಿರಿಯ ಸಲಹೆಗಾರ ಕಪಿಲ್ ಸಿಬಲ್ ಸುಪ್ರೀಂನಲ್ಲಿ ಮನವಿ ಮಾಡಿದ್ದಾರೆ.

ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರನ್ನೂ ಒಳಗೊಂಡ ನ್ಯಾಯಪೀಠ ಅರ್ಜಿ ವಾಪಸ್ ಪಡೆಯಲು ಅವಕಾಶ ನೀಡಿತು.

ಸದ್ಯಕ್ಕೆ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವು 102 ಸದಸ್ಯ ಬಲವನ್ನು ಹೊಂದಿದ್ದು ಸರಳ ಬಹುಮತಕ್ಕಿಂತ 1 ಸ್ಥಾನ ಮಾತ್ರ ಹೆಚ್ಚು ಪಡೆದಿದೆ. ಪೈಲಟ್‌ ಬಣದಲ್ಲಿರುವ ಕಾಂಗ್ರೆಸ್ ಶಾಸಕರು ಜೈಪುರಕ್ಕೆ ವಾಪಸ್ ಬಂದಲ್ಲಿ ಅವರಲ್ಲಿ ಕೆಲವರು ತನ್ನ ಪರವಾಗಿ ಮತ ಚಲಾಯಿಸಬಹುದೆಂಬ ವಿಶ್ವಾಸ ಅವರಿಗಿದೆ.

ಇದೇ ಸಂದರ್ಭದಲ್ಲಿ ಬಿಎಸ್‌ಪಿ ಮುಖ್ಯಸ್ಥೆ ಮಾಯವತಿಯವರು, ರಾಜಸ್ಥಾನದಲ್ಲಿ ಬಿಎಸ್‌ಪಿಯಿಂದ ಆಯ್ಕೆಯಾಗಿ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿರುವ 6 ಶಾಸಕರಿಗೆ ಒಂದು ವೇಳೆ ವಿಶ್ವಾಸಮತ ಯಾಚನೆ ನಡೆದರೆ ಗೆಹ್ಲೋಟ್ ವಿರುದ್ಧವಾಗಿ ಮತ ಚಲಾಯಿಸುವಂತೆ ವಿಪ್ ಜಾರಿಗೊಳಿಸಿದ್ದಾರೆ. ಬಿಎಸ್‌ಪಿಯ ಒಟ್ಟು 6 ಶಾಸಕರಲ್ಲಿ 6 ಜನರು ಕಾಂಗ್ರೆಸ್ ಸೇರಿರುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗುವುದಿಲ್ಲ ಎಂಬುದು ಕಾಂಗ್ರೆಸ್ ನಿಲುವಾಗಿದೆ. ಬಿಎಸ್‌ಪಿ ಪಕ್ಷವು ರಾಷ್ಟ್ರೀಯ ಅಸ್ತಿತ್ವ ಹೊಂದಿದ್ದು ಕೇವಲ ಒಂದು ರಾಜ್ಯದಲ್ಲಿ ಪಕ್ಷಾಂತರ ಮಾಡಿದರೆ ಅದು ತಾಂತ್ರಿಕವಾಗಿ ತಪ್ಪು ಎಂಬುದು ಮಾಯಾವತಿಯವರ ನಿಲುವಾಗಿದೆ.


ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕಾಗಿ ಮಾತನಾಡಿ: ರಾಜಸ್ಥಾನ ಬಿಕ್ಕಟ್ಟಿನ ಕುರಿತು ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...