Homeಮುಖಪುಟಮುಖ್ಯಮಂತ್ರಿ ಪರಿಹಾರ ನಿಧಿಗೆ ಸಿಎಸ್‌ಆರ್‌ ಹಣ ಏಕಿಲ್ಲ?: ಸುಪ್ರೀಂ ಕದ ತಟ್ಟಿದ ರಾಜಸ್ಥಾನ

ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಿಎಸ್‌ಆರ್‌ ಹಣ ಏಕಿಲ್ಲ?: ಸುಪ್ರೀಂ ಕದ ತಟ್ಟಿದ ರಾಜಸ್ಥಾನ

- Advertisement -
- Advertisement -

ಸಿಎಸ್ಆರ್ (ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ) ಯೋಜನೆಯಿಂದ ಮುಖ್ಯಮಂತ್ರಿಯ ಪರಿಹಾರ ನಿಧಿಯನ್ನು ಹೊರತುಪಡಿಸಿರುವ ಕೇಂದ್ರದ ಕ್ರಮವನ್ನು ರಾಜಸ್ಥಾನ ಸರ್ಕಾರವು  ನ್ಯಾಯಾಲಯದಲ್ಲಿ ಪ್ರಶ್ನಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಸುತ್ತೋಲೆಯು ನಿರಾಶೆಗೊಳಿಸಿದೆ ಎಂದು ಅದು ಸುಪ್ರೀಂ ಕೋರ್ಟ್ ನಲ್ಲಿ ಹೇಳಿದೆ.

ಹೀಗಾಗಿ ಸಿಎಸ್ಆರ್ ವ್ಯಾಪ್ತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು (ಸಿಎಮ್ಆರ್‌ಎಫ್) ಹೊರತುಪಡಿಸುವ ಕೇಂದ್ರ ಸರ್ಕಾರದ ಸುತ್ತೋಲೆಯ ಮಾನ್ಯತೆಯು ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿದೆ. ಕೊರೊನಾ ಪರಿಣಾಮವನ್ನು ತಗ್ಗಿಸಲು ಸಿಎಸ್ಆರ್ ಯೋಜನೆಯ ಭಾಗವಾಗಿ ದೇಣಿಗೆ ಸ್ವೀಕರಿಸಲು ಸಿಎಮ್ಆರ್‌ಎಫ್ ಅನ್ನು ರಚಿಸಲಾಗಿದೆ.

ಕಾಂಗ್ರೆಸ್ ನೇತೃತ್ವದ ರಾಜಸ್ಥಾನ್ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಏಪ್ರಿಲ್ 10 ರ ಸುತ್ತೋಲೆ ಪಿಎಂ ಕೇರ್ಸ್ ಫಂಡ್‌ಗೆ ಇಂತಹ ದೇಣಿಗೆ ಪಡೆಯಲು ಅವಕಾಶವಿದೆ. ಆದರೆ ಸಿಎಮ್‌ಆರ್‌ಎಫ್ ಏಕೆ ಅವಕಾಶವಿಲ್ಲ ಎಂಬ ಬಗ್ಗೆ ಕೇಂದ್ರದಿಂದ ಪ್ರತಿಕ್ರಿಯೆ ಕೋರಿದೆ.

ಪಿಎಂ ಕೇರ್ಸ್ ನಿಧಿಯನ್ನು ಕೇಂದ್ರವು ರಚಿಸಿದ ಒಂದು ದಿನದ ನಂತರ ಮಾರ್ಚ್ 29 ರಂದು ರಾಜಸ್ಥಾನ್ ಸರ್ಕಾರ ಈ ನಿಧಿಯನ್ನು ಸ್ಥಾಪಿಸಿತು.

ಜೂನ್ 16 ರಂದು, ಭಾರತದ ಮುಖ್ಯ ನ್ಯಾಯಮೂರ್ತಿ ಎಸ್. ಎ. ಬಾಬ್ಡೆ ನೇತೃತ್ವದ ನ್ಯಾಯಪೀಠವು ಎರಡು ನಿಧಿಗಳ ನಡುವಿನ ಅಂತಹ ವ್ಯತ್ಯಾಸವು ಅಸಂವಿಧಾನಿಕವಾಗಿದೆ ಮತ್ತು ಸಹಕಾರಿ ಫೆಡರಲಿಸಂನ ತತ್ವಕ್ಕೆ ವಿರುದ್ಧವಾಗಿದೆ ಎಂದು ರಾಜಸ್ಥಾನದ ಪ್ರತಿಪಾದನೆಯ ಕುರಿತು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಕೇಂದ್ರದ ಈ ಸುತ್ತೋಲೆಯು ಅಸಂವಿಧಾನಿಕ ಎಂದು ಘೋಷಿಸಲು ಸುಪ್ರೀಂ ಕೋರ್ಟ್ ಕದ ತಟ್ಟಿದ್ದು ಇದುವೆ ಮೊದಲ ಬಾರಿಯಲ್ಲ. ಮೇ ತಿಂಗಳಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಾಹುವಾ ಮೊಯಿತ್ರಾ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿ, ಪಿಎಂ ಕೇರ್ಸ್ ಮತ್ತು ಸಿಎಮ್ಆರ್‌ಎಫ್ ನಡುವಿನ ಅಸಮಾನತೆಯನ್ನು ಅವರು ಎತ್ತಿ ತೋರಿಸಿದ್ದರು. ಕೇವಲ ಪಿಎಂ ಕೇರ್ಸ್‌‌ಗೆ ಮಾತ್ರ ಸಿಎಸ್‌ಆರ್‌ ದೇಣಿಗೆ ನೀಡಲು ಸಾಧ್ಯ, ರಾಜ್ಯ ಸರ್ಕಾರಗಳ ನಿಧಿಗೆ ಅವಕಾಶವಿಲ್ಲ ಎಂದು ವಾದಿಸಿದ್ದರು.

ಆದರೆ, ಆ ಸಮಯದಲ್ಲಿ ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ನಿರಾಕರಿಸಿ, ಲೋಕಸಭಾ ಸಂಸದರು ನ್ಯಾಯಾಲಯದಲ್ಲಿ ವಾದಿಸುವ ಬದಲು ತನ್ನ ವಿವಾದವನ್ನು  ಸಂಸತ್ತಿನಲ್ಲಿ ಚರ್ಚಿಸುವಂತೆ ಕೇಳಿಕೊಂಡಿತ್ತು.


ಓದಿ: ಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...