Homeಮುಖಪುಟಮುಖ್ಯಮಂತ್ರಿ ಪರಿಹಾರ ನಿಧಿಗೆ ಸಿಎಸ್‌ಆರ್‌ ಹಣ ಏಕಿಲ್ಲ?: ಸುಪ್ರೀಂ ಕದ ತಟ್ಟಿದ ರಾಜಸ್ಥಾನ

ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಿಎಸ್‌ಆರ್‌ ಹಣ ಏಕಿಲ್ಲ?: ಸುಪ್ರೀಂ ಕದ ತಟ್ಟಿದ ರಾಜಸ್ಥಾನ

- Advertisement -
- Advertisement -

ಸಿಎಸ್ಆರ್ (ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ) ಯೋಜನೆಯಿಂದ ಮುಖ್ಯಮಂತ್ರಿಯ ಪರಿಹಾರ ನಿಧಿಯನ್ನು ಹೊರತುಪಡಿಸಿರುವ ಕೇಂದ್ರದ ಕ್ರಮವನ್ನು ರಾಜಸ್ಥಾನ ಸರ್ಕಾರವು  ನ್ಯಾಯಾಲಯದಲ್ಲಿ ಪ್ರಶ್ನಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಸುತ್ತೋಲೆಯು ನಿರಾಶೆಗೊಳಿಸಿದೆ ಎಂದು ಅದು ಸುಪ್ರೀಂ ಕೋರ್ಟ್ ನಲ್ಲಿ ಹೇಳಿದೆ.

ಹೀಗಾಗಿ ಸಿಎಸ್ಆರ್ ವ್ಯಾಪ್ತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು (ಸಿಎಮ್ಆರ್‌ಎಫ್) ಹೊರತುಪಡಿಸುವ ಕೇಂದ್ರ ಸರ್ಕಾರದ ಸುತ್ತೋಲೆಯ ಮಾನ್ಯತೆಯು ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿದೆ. ಕೊರೊನಾ ಪರಿಣಾಮವನ್ನು ತಗ್ಗಿಸಲು ಸಿಎಸ್ಆರ್ ಯೋಜನೆಯ ಭಾಗವಾಗಿ ದೇಣಿಗೆ ಸ್ವೀಕರಿಸಲು ಸಿಎಮ್ಆರ್‌ಎಫ್ ಅನ್ನು ರಚಿಸಲಾಗಿದೆ.

ಕಾಂಗ್ರೆಸ್ ನೇತೃತ್ವದ ರಾಜಸ್ಥಾನ್ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಏಪ್ರಿಲ್ 10 ರ ಸುತ್ತೋಲೆ ಪಿಎಂ ಕೇರ್ಸ್ ಫಂಡ್‌ಗೆ ಇಂತಹ ದೇಣಿಗೆ ಪಡೆಯಲು ಅವಕಾಶವಿದೆ. ಆದರೆ ಸಿಎಮ್‌ಆರ್‌ಎಫ್ ಏಕೆ ಅವಕಾಶವಿಲ್ಲ ಎಂಬ ಬಗ್ಗೆ ಕೇಂದ್ರದಿಂದ ಪ್ರತಿಕ್ರಿಯೆ ಕೋರಿದೆ.

ಪಿಎಂ ಕೇರ್ಸ್ ನಿಧಿಯನ್ನು ಕೇಂದ್ರವು ರಚಿಸಿದ ಒಂದು ದಿನದ ನಂತರ ಮಾರ್ಚ್ 29 ರಂದು ರಾಜಸ್ಥಾನ್ ಸರ್ಕಾರ ಈ ನಿಧಿಯನ್ನು ಸ್ಥಾಪಿಸಿತು.

ಜೂನ್ 16 ರಂದು, ಭಾರತದ ಮುಖ್ಯ ನ್ಯಾಯಮೂರ್ತಿ ಎಸ್. ಎ. ಬಾಬ್ಡೆ ನೇತೃತ್ವದ ನ್ಯಾಯಪೀಠವು ಎರಡು ನಿಧಿಗಳ ನಡುವಿನ ಅಂತಹ ವ್ಯತ್ಯಾಸವು ಅಸಂವಿಧಾನಿಕವಾಗಿದೆ ಮತ್ತು ಸಹಕಾರಿ ಫೆಡರಲಿಸಂನ ತತ್ವಕ್ಕೆ ವಿರುದ್ಧವಾಗಿದೆ ಎಂದು ರಾಜಸ್ಥಾನದ ಪ್ರತಿಪಾದನೆಯ ಕುರಿತು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಕೇಂದ್ರದ ಈ ಸುತ್ತೋಲೆಯು ಅಸಂವಿಧಾನಿಕ ಎಂದು ಘೋಷಿಸಲು ಸುಪ್ರೀಂ ಕೋರ್ಟ್ ಕದ ತಟ್ಟಿದ್ದು ಇದುವೆ ಮೊದಲ ಬಾರಿಯಲ್ಲ. ಮೇ ತಿಂಗಳಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಾಹುವಾ ಮೊಯಿತ್ರಾ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿ, ಪಿಎಂ ಕೇರ್ಸ್ ಮತ್ತು ಸಿಎಮ್ಆರ್‌ಎಫ್ ನಡುವಿನ ಅಸಮಾನತೆಯನ್ನು ಅವರು ಎತ್ತಿ ತೋರಿಸಿದ್ದರು. ಕೇವಲ ಪಿಎಂ ಕೇರ್ಸ್‌‌ಗೆ ಮಾತ್ರ ಸಿಎಸ್‌ಆರ್‌ ದೇಣಿಗೆ ನೀಡಲು ಸಾಧ್ಯ, ರಾಜ್ಯ ಸರ್ಕಾರಗಳ ನಿಧಿಗೆ ಅವಕಾಶವಿಲ್ಲ ಎಂದು ವಾದಿಸಿದ್ದರು.

ಆದರೆ, ಆ ಸಮಯದಲ್ಲಿ ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ನಿರಾಕರಿಸಿ, ಲೋಕಸಭಾ ಸಂಸದರು ನ್ಯಾಯಾಲಯದಲ್ಲಿ ವಾದಿಸುವ ಬದಲು ತನ್ನ ವಿವಾದವನ್ನು  ಸಂಸತ್ತಿನಲ್ಲಿ ಚರ್ಚಿಸುವಂತೆ ಕೇಳಿಕೊಂಡಿತ್ತು.


ಓದಿ: ಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...