Homeದಲಿತ್ ಫೈಲ್ಸ್ರಾಜಸ್ಥಾನ: ದಲಿತ ವಿದ್ಯಾರ್ಥಿಯ ಮೇಲೆ ಶಿಕ್ಷಕನ ಹಲ್ಲೆ; ಮತ್ತೊಂದು ಪ್ರಕರಣ ಬಯಲು

ರಾಜಸ್ಥಾನ: ದಲಿತ ವಿದ್ಯಾರ್ಥಿಯ ಮೇಲೆ ಶಿಕ್ಷಕನ ಹಲ್ಲೆ; ಮತ್ತೊಂದು ಪ್ರಕರಣ ಬಯಲು

- Advertisement -
- Advertisement -

ರಾಜಸ್ಥಾನದಲ್ಲಿ ದಲಿತರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿದ್ದು, ಇಲ್ಲಿನ ದೌಸಾದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು 5ನೇ ತರಗತಿಯ ದಲಿತ ವಿದ್ಯಾರ್ಥಿಯ ತೋಳುಗಳನ್ನು ತಿರುಚಿ, ಝಾಡಿಸಿ ಒದೆಯುವ ಮೂಲಕ ಹಿಂಸೆ ನೀಡಿದ್ದಾನೆ.

ಆಗಸ್ಟ್ 6ರಂದು ಈ ಘಟನೆ ನಡೆದಿದ್ದು, ರಾಮೇಶ್ವರ್ ಗುರ್ಜರ್ ಎಂಬ ಇಂಗ್ಲಿಷ್ ಶಿಕ್ಷಕ, ರೋಹಿತ್ ಎಂಬ ವಿದ್ಯಾರ್ಥಿಯನ್ನು ಹಿಡಿದು ಥಳಿಸಿದ್ದಾನೆ.

ರೋಹಿತ್ ಕೈ ಮುರಿದುಕೊಂಡು ಮನೆಗೆ ಬಂದಿದ್ದನು. ವಿಚಾರಿಸಿದಾಗ ಘಟನೆಯ ಕುರಿತು ತಿಳಿಸಿದ್ದಾನೆ. ಕುಟುಂಬ ಸದಸ್ಯರು ಶಾಲೆಗೆ ಧಾವಿಸಿದರು. ಈ ಕುರಿತು ಕ್ರಮ ಕೈಗೊಳ್ಳುವಂತೆ ಪ್ರಾಂಶುಪಾಲರಿಗೆ ಮನವಿ ಮಾಡಿದರೂ ಅವರು ಗಮನಹರಿಸಲಿಲ್ಲ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಪ್ರತಿಕ್ರಿಯೆ ನೀಡಿ ಸುಮ್ಮನಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕನ ಮೇಲೆ ಹಲ್ಲೆ ನಡೆಸಿದ ಶಿಕ್ಷಕ ಆರೋಪವನ್ನು ನಿರಾಕರಿಸಿದ್ದನು. ಜೊತೆಗೆ ದಲಿತ ಕುಟುಂಬದ ಮೇಲೆ ಒತ್ತಡ ತರಲು ಯತ್ನಿಸಿದ್ದನು ಎನ್ನಲಾಗಿದೆ.

ಬಾಯಿ ಮುಚ್ಚಿಕೊಂಡಿರಲು ಬೆದರಿಕೆ: ಬಾಲಕನ ಕುಟುಂಬ ಆರೋಪ

ಸಹಾಯ ಕೋರಿ ಸಂತ್ರಸ್ತ ಕುಟುಂಬ ಸದಸ್ಯರು ಡಿಇಒ ಘನಶ್ಯಾಮ್ ಮೀನಾ ಅವರ ಬಳಿಗೆ ಹೋದರು. ಸಂತ್ರಸ್ತ ಬಾಲಕನು ಡಿಇಒಗೆ ಇಡೀ ಘಟನೆಯನ್ನು ವಿವರಿಸಿದನು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

“ಪದೇ ಪದೇ ಗಮನಕ್ಕೆ ತಂದರೂ ಯಾರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಬಾಯಿ ಮುಚ್ಚಿಕೊಂಡಲು ಕೆಲವರು ಒತ್ತಡ ಹೇರಿದರು” ಎಂದು ಕುಟುಂಬ ಆರೋಪಿಸಿದೆ.

ಘಟನೆಯ ಬಗ್ಗೆ ಶಾಲೆಯು ಸುಳ್ಳುಗಳನ್ನು ಹೇಳುತ್ತಿದೆ ಎಂದು ಬಾಲಕನ ಸಹೋದರ ಹರಿ ಮೋಹನ್ ಬಹಿರಂಗಪಡಿಸಿದ್ದಾರೆ. ರೋಹಿತ್ ಮತ್ತು ಆತನ ಸಹೋದರಿಯ ಟಿಸಿಗಳನ್ನು ವಾಪಸ್ ಪಡೆದು ಬೇರೆ ಶಾಲೆಗೆ ಸೇರುವಂತೆ ಕುಟುಂಬದ ಮೇಲೆ ಶಾಲೆಯೇ ಒತ್ತಡ ಹೇರುತ್ತಿದೆ ಎಂದು ಅವರು ದೂರಿದ್ದಾರೆ.

ಈ ವಿಚಾರವನ್ನು ಮಾಧ್ಯಮಗಳು ತರಾಟೆಗೆ ತೆಗೆದುಕೊಂಡ ನಂತರವೇ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಎಸ್‌ಟಿ ಎಸ್‌ಸಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ರಾಜಸ್ಥಾನದಲ್ಲಿ ಹೆಚ್ಚಾದ ದಲಿತರ ಮೇಲಿನ ದೌರ್ಜನ್ಯ

ಇತ್ತೀಚಿನ ದಿನಗಳಲ್ಲಿ ರಾಜಸ್ಥಾನದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಉತ್ತರ ಪ್ರದೇಶ, ಮಧ್ಯಪ್ರದೇಶವಷ್ಟೇ ಅಲ್ಲ, ರಾಜಸ್ಥಾನವು ಈಗ ಅಟ್ರಾಸಿಟಿ ವಿಚಾರದಲ್ಲಿ ಕುಖ್ಯಾತಿ ಪಡೆಯುತ್ತಿದೆ.

ಪಾತ್ರೆ ಮುಟ್ಟಿದ್ದಕ್ಕೆ ಬಾಲಕನನ್ನು ಕೊಂದ ಶಿಕ್ಷಕ: 9 ವರ್ಷದ ದಲಿತ ಬಾಲಕನನ್ನು ಶಿಕ್ಷಕನೊಬ್ಬ ಥಳಿಸಿ ಕೊಂದಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಅಹಮದಾಬಾದ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನನ್ನಪ್ಪಿತ್ತು.

ಜುಲೈ 20 ರಂದು ಶಿಕ್ಷಕ ಹಲ್ಲೆ ನಡೆಸಿದ್ದನು ಎಂದು ಕುಟುಂಬ ಸದಸ್ಯರು ಆರೋಪಿಸಿತ್ತು. ಸವರ್ಣಿಯರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ದಲಿತ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದನು. ಆರೋಪಿ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

“ಜಲೋರ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ ನನ್ನ ಮಗ ಇಂದ್ರ ಕುಮಾರ್, ಸಿಂಗ್‌ಗಳಿಗೆ ಮೀಸಲಾಗಿದ್ದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಶಿಕ್ಷಕ ಚೈಲ್ ಸಿಂಗ್ ಥಳಿಸಿದನು. ಈ ಮಡಕೆ ಮೇಲ್ಜಾತಿಗೆ ಸೇರಿದ ಸಿಂಗ್‌ಗಳಿಗೆ ಮೀಸಲಾಗಿದೆ ಎಂದು ನನ್ನ ಮಗನಿಗೆ ತಿಳಿದಿರಲಿಲ್ಲ” ಎಂದು ಮಗುವಿನ ತಂದೆ ಮತ್ತು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ನಿವಾಸಿ ದೇವರಾಮ್ ಮೇಘವಾಲ್ ಸಂಕಟ ವ್ಯಕ್ತಪಡಿಸಿದ್ದರು.

ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ: ರಾಜಸ್ಥಾನದ ಉದಯಪುರದಲ್ಲಿ ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಸಮುದಾಯದ ಯುವಕನ ಮೇಲೆ ನಾಲ್ವರು ಸವರ್ಣಿಯ ಸಮುದಾಯದ ಯುವಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿತ್ತು.

ನಾಲ್ವರು ಯುವಕರು ಸಂತ್ರಸ್ತ ಪ್ರಕಾಶ್ ಲೋಗಾರ್ (30) ಎಂಬರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿತ್ತು.

ಸಾಮಾಜಿಕ ಮಾಧ್ಯಮಗಳಲ್ಲಿ ಹಲ್ಲೆಯ ವಿಡಿಯೋ ವೈರಲ್ ಆಗಿ ದಲಿತಪರ ಸಂಘಟನೆಗಲು, ನಾಯಕರು ಸೇರಿದಂತೆ ಹಲವು ಮಂದಿ ಆಕ್ರೋಶ ವ್ಯಕ್ತಪಡಿಸಿದ ನಂತರ ಹಲ್ಲೆ ನಡೆಸಿದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ವಿಜಯ್ ಸಿಂಗ್, ರಘುನಾಥ್ ಸಿಂಗ್ ಮತ್ತು ಯಶಪಾಲ್ ಸಿಂಗ್ ಎಂದು ಗುರುತಿಸಲಾಗಿತ್ತು.

ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ: ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್‌‌ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿತ್ತು. “ಜಿತೇಂದ್ರಪಾಲ್‌ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು. ಹೀಗಾಗಿ ಕೊಲೆಯಾಗಿದ್ದಾರೆ” ಎಂದು ಕುಟುಂಬ ಆರೋಪಿಸಿತ್ತು.

ಇದನ್ನೂ ಓದಿರಿ: ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ಆರೋಪಿಗಳಾದ ಸೂರಜ್ ಸಿಂಗ್ ಮತ್ತು ರಮೇಶ್ ಸಿಂಗ್ ಅವರನ್ನು ಬಾರ್ಮರ್ ಜಿಲ್ಲೆಯ ದುಡ್ವಾ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದರು.

ಜಿತೇಂದ್ರಪಾಲ್ ತಮ್ಮ ಹಲವಾರು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಕುನ್ವರ್ ಸಾ ಜೀತ್’ ಎಂಬ ಹೆಸರಿರುವ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು. ಅವರ ಪೋಸ್ಟ್‌ಗಳಲ್ಲಿ ಅವರ ಮೀಸೆ ಗಮನ ಸೆಳೆದಿದೆ. “ನಾನು ಶ್ರೀಮಂತನಲ್ಲ, ಆದರೆ ಹೃದಯದಲ್ಲಿ ರಾಜನಾಗಿದ್ದೇನೆ” ಎಂದು ಅವರು ಟ್ಯಾಗ್‌ಲೈನ್‌ನಲ್ಲಿ ಬರೆದಿದ್ದರು.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನನ್ನು ಗೋಡ್ವಾಡ್ ರಾಜ ಎಂದು ಕರೆದುಕೊಂಡಿದ್ದ ಆರೋಪಿ ಸೂರಜ್ ಸಿಂಗ್, 2020ರಲ್ಲಿ ಸಣ್ಣ ವಿಚಾರಕ್ಕೆ ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ಆತನ ಸಹೋದರ ಓಂಪ್ರಕಾಶ್ ಹೇಳಿದ್ದರು. “ನನ್ನ ಸಹೋದರ ನೋಡಲು ಚೆನ್ನಾಗಿ ಇದ್ದದ್ದರಿಂದ, ಒಳ್ಳೆಯ ವ್ಯಕ್ತಿತ್ವದವರಾಗಿದ್ದರಿಂದ ಸೂರಜ್‌ ಸಿಂಗ್ ಅಸೂಹೆ ಹೊಂದಿದ್ದ ಎಂಬುದು ಗ್ರಾಮಸ್ಥರಿಗೆ ತಿಳಿದಿತ್ತು” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...