Homeದಲಿತ್ ಫೈಲ್ಸ್ರಾಜಸ್ಥಾನ: ದಲಿತ ವಿದ್ಯಾರ್ಥಿಯ ಮೇಲೆ ಶಿಕ್ಷಕನ ಹಲ್ಲೆ; ಮತ್ತೊಂದು ಪ್ರಕರಣ ಬಯಲು

ರಾಜಸ್ಥಾನ: ದಲಿತ ವಿದ್ಯಾರ್ಥಿಯ ಮೇಲೆ ಶಿಕ್ಷಕನ ಹಲ್ಲೆ; ಮತ್ತೊಂದು ಪ್ರಕರಣ ಬಯಲು

- Advertisement -
- Advertisement -

ರಾಜಸ್ಥಾನದಲ್ಲಿ ದಲಿತರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿದ್ದು, ಇಲ್ಲಿನ ದೌಸಾದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು 5ನೇ ತರಗತಿಯ ದಲಿತ ವಿದ್ಯಾರ್ಥಿಯ ತೋಳುಗಳನ್ನು ತಿರುಚಿ, ಝಾಡಿಸಿ ಒದೆಯುವ ಮೂಲಕ ಹಿಂಸೆ ನೀಡಿದ್ದಾನೆ.

ಆಗಸ್ಟ್ 6ರಂದು ಈ ಘಟನೆ ನಡೆದಿದ್ದು, ರಾಮೇಶ್ವರ್ ಗುರ್ಜರ್ ಎಂಬ ಇಂಗ್ಲಿಷ್ ಶಿಕ್ಷಕ, ರೋಹಿತ್ ಎಂಬ ವಿದ್ಯಾರ್ಥಿಯನ್ನು ಹಿಡಿದು ಥಳಿಸಿದ್ದಾನೆ.

ರೋಹಿತ್ ಕೈ ಮುರಿದುಕೊಂಡು ಮನೆಗೆ ಬಂದಿದ್ದನು. ವಿಚಾರಿಸಿದಾಗ ಘಟನೆಯ ಕುರಿತು ತಿಳಿಸಿದ್ದಾನೆ. ಕುಟುಂಬ ಸದಸ್ಯರು ಶಾಲೆಗೆ ಧಾವಿಸಿದರು. ಈ ಕುರಿತು ಕ್ರಮ ಕೈಗೊಳ್ಳುವಂತೆ ಪ್ರಾಂಶುಪಾಲರಿಗೆ ಮನವಿ ಮಾಡಿದರೂ ಅವರು ಗಮನಹರಿಸಲಿಲ್ಲ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಪ್ರತಿಕ್ರಿಯೆ ನೀಡಿ ಸುಮ್ಮನಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕನ ಮೇಲೆ ಹಲ್ಲೆ ನಡೆಸಿದ ಶಿಕ್ಷಕ ಆರೋಪವನ್ನು ನಿರಾಕರಿಸಿದ್ದನು. ಜೊತೆಗೆ ದಲಿತ ಕುಟುಂಬದ ಮೇಲೆ ಒತ್ತಡ ತರಲು ಯತ್ನಿಸಿದ್ದನು ಎನ್ನಲಾಗಿದೆ.

ಬಾಯಿ ಮುಚ್ಚಿಕೊಂಡಿರಲು ಬೆದರಿಕೆ: ಬಾಲಕನ ಕುಟುಂಬ ಆರೋಪ

ಸಹಾಯ ಕೋರಿ ಸಂತ್ರಸ್ತ ಕುಟುಂಬ ಸದಸ್ಯರು ಡಿಇಒ ಘನಶ್ಯಾಮ್ ಮೀನಾ ಅವರ ಬಳಿಗೆ ಹೋದರು. ಸಂತ್ರಸ್ತ ಬಾಲಕನು ಡಿಇಒಗೆ ಇಡೀ ಘಟನೆಯನ್ನು ವಿವರಿಸಿದನು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

“ಪದೇ ಪದೇ ಗಮನಕ್ಕೆ ತಂದರೂ ಯಾರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಬಾಯಿ ಮುಚ್ಚಿಕೊಂಡಲು ಕೆಲವರು ಒತ್ತಡ ಹೇರಿದರು” ಎಂದು ಕುಟುಂಬ ಆರೋಪಿಸಿದೆ.

ಘಟನೆಯ ಬಗ್ಗೆ ಶಾಲೆಯು ಸುಳ್ಳುಗಳನ್ನು ಹೇಳುತ್ತಿದೆ ಎಂದು ಬಾಲಕನ ಸಹೋದರ ಹರಿ ಮೋಹನ್ ಬಹಿರಂಗಪಡಿಸಿದ್ದಾರೆ. ರೋಹಿತ್ ಮತ್ತು ಆತನ ಸಹೋದರಿಯ ಟಿಸಿಗಳನ್ನು ವಾಪಸ್ ಪಡೆದು ಬೇರೆ ಶಾಲೆಗೆ ಸೇರುವಂತೆ ಕುಟುಂಬದ ಮೇಲೆ ಶಾಲೆಯೇ ಒತ್ತಡ ಹೇರುತ್ತಿದೆ ಎಂದು ಅವರು ದೂರಿದ್ದಾರೆ.

ಈ ವಿಚಾರವನ್ನು ಮಾಧ್ಯಮಗಳು ತರಾಟೆಗೆ ತೆಗೆದುಕೊಂಡ ನಂತರವೇ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಎಸ್‌ಟಿ ಎಸ್‌ಸಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ರಾಜಸ್ಥಾನದಲ್ಲಿ ಹೆಚ್ಚಾದ ದಲಿತರ ಮೇಲಿನ ದೌರ್ಜನ್ಯ

ಇತ್ತೀಚಿನ ದಿನಗಳಲ್ಲಿ ರಾಜಸ್ಥಾನದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಉತ್ತರ ಪ್ರದೇಶ, ಮಧ್ಯಪ್ರದೇಶವಷ್ಟೇ ಅಲ್ಲ, ರಾಜಸ್ಥಾನವು ಈಗ ಅಟ್ರಾಸಿಟಿ ವಿಚಾರದಲ್ಲಿ ಕುಖ್ಯಾತಿ ಪಡೆಯುತ್ತಿದೆ.

ಪಾತ್ರೆ ಮುಟ್ಟಿದ್ದಕ್ಕೆ ಬಾಲಕನನ್ನು ಕೊಂದ ಶಿಕ್ಷಕ: 9 ವರ್ಷದ ದಲಿತ ಬಾಲಕನನ್ನು ಶಿಕ್ಷಕನೊಬ್ಬ ಥಳಿಸಿ ಕೊಂದಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಅಹಮದಾಬಾದ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನನ್ನಪ್ಪಿತ್ತು.

ಜುಲೈ 20 ರಂದು ಶಿಕ್ಷಕ ಹಲ್ಲೆ ನಡೆಸಿದ್ದನು ಎಂದು ಕುಟುಂಬ ಸದಸ್ಯರು ಆರೋಪಿಸಿತ್ತು. ಸವರ್ಣಿಯರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ದಲಿತ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದನು. ಆರೋಪಿ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

“ಜಲೋರ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ ನನ್ನ ಮಗ ಇಂದ್ರ ಕುಮಾರ್, ಸಿಂಗ್‌ಗಳಿಗೆ ಮೀಸಲಾಗಿದ್ದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಶಿಕ್ಷಕ ಚೈಲ್ ಸಿಂಗ್ ಥಳಿಸಿದನು. ಈ ಮಡಕೆ ಮೇಲ್ಜಾತಿಗೆ ಸೇರಿದ ಸಿಂಗ್‌ಗಳಿಗೆ ಮೀಸಲಾಗಿದೆ ಎಂದು ನನ್ನ ಮಗನಿಗೆ ತಿಳಿದಿರಲಿಲ್ಲ” ಎಂದು ಮಗುವಿನ ತಂದೆ ಮತ್ತು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ನಿವಾಸಿ ದೇವರಾಮ್ ಮೇಘವಾಲ್ ಸಂಕಟ ವ್ಯಕ್ತಪಡಿಸಿದ್ದರು.

ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ: ರಾಜಸ್ಥಾನದ ಉದಯಪುರದಲ್ಲಿ ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಸಮುದಾಯದ ಯುವಕನ ಮೇಲೆ ನಾಲ್ವರು ಸವರ್ಣಿಯ ಸಮುದಾಯದ ಯುವಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿತ್ತು.

ನಾಲ್ವರು ಯುವಕರು ಸಂತ್ರಸ್ತ ಪ್ರಕಾಶ್ ಲೋಗಾರ್ (30) ಎಂಬರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿತ್ತು.

ಸಾಮಾಜಿಕ ಮಾಧ್ಯಮಗಳಲ್ಲಿ ಹಲ್ಲೆಯ ವಿಡಿಯೋ ವೈರಲ್ ಆಗಿ ದಲಿತಪರ ಸಂಘಟನೆಗಲು, ನಾಯಕರು ಸೇರಿದಂತೆ ಹಲವು ಮಂದಿ ಆಕ್ರೋಶ ವ್ಯಕ್ತಪಡಿಸಿದ ನಂತರ ಹಲ್ಲೆ ನಡೆಸಿದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ವಿಜಯ್ ಸಿಂಗ್, ರಘುನಾಥ್ ಸಿಂಗ್ ಮತ್ತು ಯಶಪಾಲ್ ಸಿಂಗ್ ಎಂದು ಗುರುತಿಸಲಾಗಿತ್ತು.

ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ: ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್‌‌ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿತ್ತು. “ಜಿತೇಂದ್ರಪಾಲ್‌ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು. ಹೀಗಾಗಿ ಕೊಲೆಯಾಗಿದ್ದಾರೆ” ಎಂದು ಕುಟುಂಬ ಆರೋಪಿಸಿತ್ತು.

ಇದನ್ನೂ ಓದಿರಿ: ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ಆರೋಪಿಗಳಾದ ಸೂರಜ್ ಸಿಂಗ್ ಮತ್ತು ರಮೇಶ್ ಸಿಂಗ್ ಅವರನ್ನು ಬಾರ್ಮರ್ ಜಿಲ್ಲೆಯ ದುಡ್ವಾ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದರು.

ಜಿತೇಂದ್ರಪಾಲ್ ತಮ್ಮ ಹಲವಾರು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಕುನ್ವರ್ ಸಾ ಜೀತ್’ ಎಂಬ ಹೆಸರಿರುವ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು. ಅವರ ಪೋಸ್ಟ್‌ಗಳಲ್ಲಿ ಅವರ ಮೀಸೆ ಗಮನ ಸೆಳೆದಿದೆ. “ನಾನು ಶ್ರೀಮಂತನಲ್ಲ, ಆದರೆ ಹೃದಯದಲ್ಲಿ ರಾಜನಾಗಿದ್ದೇನೆ” ಎಂದು ಅವರು ಟ್ಯಾಗ್‌ಲೈನ್‌ನಲ್ಲಿ ಬರೆದಿದ್ದರು.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನನ್ನು ಗೋಡ್ವಾಡ್ ರಾಜ ಎಂದು ಕರೆದುಕೊಂಡಿದ್ದ ಆರೋಪಿ ಸೂರಜ್ ಸಿಂಗ್, 2020ರಲ್ಲಿ ಸಣ್ಣ ವಿಚಾರಕ್ಕೆ ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ಆತನ ಸಹೋದರ ಓಂಪ್ರಕಾಶ್ ಹೇಳಿದ್ದರು. “ನನ್ನ ಸಹೋದರ ನೋಡಲು ಚೆನ್ನಾಗಿ ಇದ್ದದ್ದರಿಂದ, ಒಳ್ಳೆಯ ವ್ಯಕ್ತಿತ್ವದವರಾಗಿದ್ದರಿಂದ ಸೂರಜ್‌ ಸಿಂಗ್ ಅಸೂಹೆ ಹೊಂದಿದ್ದ ಎಂಬುದು ಗ್ರಾಮಸ್ಥರಿಗೆ ತಿಳಿದಿತ್ತು” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...