Homeದಲಿತ್ ಫೈಲ್ಸ್ರಾಜಸ್ಥಾನ: ದಲಿತ ವಿದ್ಯಾರ್ಥಿಯ ಮೇಲೆ ಶಿಕ್ಷಕನ ಹಲ್ಲೆ; ಮತ್ತೊಂದು ಪ್ರಕರಣ ಬಯಲು

ರಾಜಸ್ಥಾನ: ದಲಿತ ವಿದ್ಯಾರ್ಥಿಯ ಮೇಲೆ ಶಿಕ್ಷಕನ ಹಲ್ಲೆ; ಮತ್ತೊಂದು ಪ್ರಕರಣ ಬಯಲು

- Advertisement -
- Advertisement -

ರಾಜಸ್ಥಾನದಲ್ಲಿ ದಲಿತರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿದ್ದು, ಇಲ್ಲಿನ ದೌಸಾದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು 5ನೇ ತರಗತಿಯ ದಲಿತ ವಿದ್ಯಾರ್ಥಿಯ ತೋಳುಗಳನ್ನು ತಿರುಚಿ, ಝಾಡಿಸಿ ಒದೆಯುವ ಮೂಲಕ ಹಿಂಸೆ ನೀಡಿದ್ದಾನೆ.

ಆಗಸ್ಟ್ 6ರಂದು ಈ ಘಟನೆ ನಡೆದಿದ್ದು, ರಾಮೇಶ್ವರ್ ಗುರ್ಜರ್ ಎಂಬ ಇಂಗ್ಲಿಷ್ ಶಿಕ್ಷಕ, ರೋಹಿತ್ ಎಂಬ ವಿದ್ಯಾರ್ಥಿಯನ್ನು ಹಿಡಿದು ಥಳಿಸಿದ್ದಾನೆ.

ರೋಹಿತ್ ಕೈ ಮುರಿದುಕೊಂಡು ಮನೆಗೆ ಬಂದಿದ್ದನು. ವಿಚಾರಿಸಿದಾಗ ಘಟನೆಯ ಕುರಿತು ತಿಳಿಸಿದ್ದಾನೆ. ಕುಟುಂಬ ಸದಸ್ಯರು ಶಾಲೆಗೆ ಧಾವಿಸಿದರು. ಈ ಕುರಿತು ಕ್ರಮ ಕೈಗೊಳ್ಳುವಂತೆ ಪ್ರಾಂಶುಪಾಲರಿಗೆ ಮನವಿ ಮಾಡಿದರೂ ಅವರು ಗಮನಹರಿಸಲಿಲ್ಲ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಪ್ರತಿಕ್ರಿಯೆ ನೀಡಿ ಸುಮ್ಮನಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕನ ಮೇಲೆ ಹಲ್ಲೆ ನಡೆಸಿದ ಶಿಕ್ಷಕ ಆರೋಪವನ್ನು ನಿರಾಕರಿಸಿದ್ದನು. ಜೊತೆಗೆ ದಲಿತ ಕುಟುಂಬದ ಮೇಲೆ ಒತ್ತಡ ತರಲು ಯತ್ನಿಸಿದ್ದನು ಎನ್ನಲಾಗಿದೆ.

ಬಾಯಿ ಮುಚ್ಚಿಕೊಂಡಿರಲು ಬೆದರಿಕೆ: ಬಾಲಕನ ಕುಟುಂಬ ಆರೋಪ

ಸಹಾಯ ಕೋರಿ ಸಂತ್ರಸ್ತ ಕುಟುಂಬ ಸದಸ್ಯರು ಡಿಇಒ ಘನಶ್ಯಾಮ್ ಮೀನಾ ಅವರ ಬಳಿಗೆ ಹೋದರು. ಸಂತ್ರಸ್ತ ಬಾಲಕನು ಡಿಇಒಗೆ ಇಡೀ ಘಟನೆಯನ್ನು ವಿವರಿಸಿದನು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

“ಪದೇ ಪದೇ ಗಮನಕ್ಕೆ ತಂದರೂ ಯಾರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಬಾಯಿ ಮುಚ್ಚಿಕೊಂಡಲು ಕೆಲವರು ಒತ್ತಡ ಹೇರಿದರು” ಎಂದು ಕುಟುಂಬ ಆರೋಪಿಸಿದೆ.

ಘಟನೆಯ ಬಗ್ಗೆ ಶಾಲೆಯು ಸುಳ್ಳುಗಳನ್ನು ಹೇಳುತ್ತಿದೆ ಎಂದು ಬಾಲಕನ ಸಹೋದರ ಹರಿ ಮೋಹನ್ ಬಹಿರಂಗಪಡಿಸಿದ್ದಾರೆ. ರೋಹಿತ್ ಮತ್ತು ಆತನ ಸಹೋದರಿಯ ಟಿಸಿಗಳನ್ನು ವಾಪಸ್ ಪಡೆದು ಬೇರೆ ಶಾಲೆಗೆ ಸೇರುವಂತೆ ಕುಟುಂಬದ ಮೇಲೆ ಶಾಲೆಯೇ ಒತ್ತಡ ಹೇರುತ್ತಿದೆ ಎಂದು ಅವರು ದೂರಿದ್ದಾರೆ.

ಈ ವಿಚಾರವನ್ನು ಮಾಧ್ಯಮಗಳು ತರಾಟೆಗೆ ತೆಗೆದುಕೊಂಡ ನಂತರವೇ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಎಸ್‌ಟಿ ಎಸ್‌ಸಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ರಾಜಸ್ಥಾನದಲ್ಲಿ ಹೆಚ್ಚಾದ ದಲಿತರ ಮೇಲಿನ ದೌರ್ಜನ್ಯ

ಇತ್ತೀಚಿನ ದಿನಗಳಲ್ಲಿ ರಾಜಸ್ಥಾನದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಉತ್ತರ ಪ್ರದೇಶ, ಮಧ್ಯಪ್ರದೇಶವಷ್ಟೇ ಅಲ್ಲ, ರಾಜಸ್ಥಾನವು ಈಗ ಅಟ್ರಾಸಿಟಿ ವಿಚಾರದಲ್ಲಿ ಕುಖ್ಯಾತಿ ಪಡೆಯುತ್ತಿದೆ.

ಪಾತ್ರೆ ಮುಟ್ಟಿದ್ದಕ್ಕೆ ಬಾಲಕನನ್ನು ಕೊಂದ ಶಿಕ್ಷಕ: 9 ವರ್ಷದ ದಲಿತ ಬಾಲಕನನ್ನು ಶಿಕ್ಷಕನೊಬ್ಬ ಥಳಿಸಿ ಕೊಂದಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಅಹಮದಾಬಾದ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನನ್ನಪ್ಪಿತ್ತು.

ಜುಲೈ 20 ರಂದು ಶಿಕ್ಷಕ ಹಲ್ಲೆ ನಡೆಸಿದ್ದನು ಎಂದು ಕುಟುಂಬ ಸದಸ್ಯರು ಆರೋಪಿಸಿತ್ತು. ಸವರ್ಣಿಯರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ದಲಿತ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದನು. ಆರೋಪಿ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

“ಜಲೋರ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ ನನ್ನ ಮಗ ಇಂದ್ರ ಕುಮಾರ್, ಸಿಂಗ್‌ಗಳಿಗೆ ಮೀಸಲಾಗಿದ್ದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಶಿಕ್ಷಕ ಚೈಲ್ ಸಿಂಗ್ ಥಳಿಸಿದನು. ಈ ಮಡಕೆ ಮೇಲ್ಜಾತಿಗೆ ಸೇರಿದ ಸಿಂಗ್‌ಗಳಿಗೆ ಮೀಸಲಾಗಿದೆ ಎಂದು ನನ್ನ ಮಗನಿಗೆ ತಿಳಿದಿರಲಿಲ್ಲ” ಎಂದು ಮಗುವಿನ ತಂದೆ ಮತ್ತು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ನಿವಾಸಿ ದೇವರಾಮ್ ಮೇಘವಾಲ್ ಸಂಕಟ ವ್ಯಕ್ತಪಡಿಸಿದ್ದರು.

ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ: ರಾಜಸ್ಥಾನದ ಉದಯಪುರದಲ್ಲಿ ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಸಮುದಾಯದ ಯುವಕನ ಮೇಲೆ ನಾಲ್ವರು ಸವರ್ಣಿಯ ಸಮುದಾಯದ ಯುವಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿತ್ತು.

ನಾಲ್ವರು ಯುವಕರು ಸಂತ್ರಸ್ತ ಪ್ರಕಾಶ್ ಲೋಗಾರ್ (30) ಎಂಬರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿತ್ತು.

ಸಾಮಾಜಿಕ ಮಾಧ್ಯಮಗಳಲ್ಲಿ ಹಲ್ಲೆಯ ವಿಡಿಯೋ ವೈರಲ್ ಆಗಿ ದಲಿತಪರ ಸಂಘಟನೆಗಲು, ನಾಯಕರು ಸೇರಿದಂತೆ ಹಲವು ಮಂದಿ ಆಕ್ರೋಶ ವ್ಯಕ್ತಪಡಿಸಿದ ನಂತರ ಹಲ್ಲೆ ನಡೆಸಿದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ವಿಜಯ್ ಸಿಂಗ್, ರಘುನಾಥ್ ಸಿಂಗ್ ಮತ್ತು ಯಶಪಾಲ್ ಸಿಂಗ್ ಎಂದು ಗುರುತಿಸಲಾಗಿತ್ತು.

ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ: ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್‌‌ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿತ್ತು. “ಜಿತೇಂದ್ರಪಾಲ್‌ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು. ಹೀಗಾಗಿ ಕೊಲೆಯಾಗಿದ್ದಾರೆ” ಎಂದು ಕುಟುಂಬ ಆರೋಪಿಸಿತ್ತು.

ಇದನ್ನೂ ಓದಿರಿ: ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ಆರೋಪಿಗಳಾದ ಸೂರಜ್ ಸಿಂಗ್ ಮತ್ತು ರಮೇಶ್ ಸಿಂಗ್ ಅವರನ್ನು ಬಾರ್ಮರ್ ಜಿಲ್ಲೆಯ ದುಡ್ವಾ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದರು.

ಜಿತೇಂದ್ರಪಾಲ್ ತಮ್ಮ ಹಲವಾರು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಕುನ್ವರ್ ಸಾ ಜೀತ್’ ಎಂಬ ಹೆಸರಿರುವ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು. ಅವರ ಪೋಸ್ಟ್‌ಗಳಲ್ಲಿ ಅವರ ಮೀಸೆ ಗಮನ ಸೆಳೆದಿದೆ. “ನಾನು ಶ್ರೀಮಂತನಲ್ಲ, ಆದರೆ ಹೃದಯದಲ್ಲಿ ರಾಜನಾಗಿದ್ದೇನೆ” ಎಂದು ಅವರು ಟ್ಯಾಗ್‌ಲೈನ್‌ನಲ್ಲಿ ಬರೆದಿದ್ದರು.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನನ್ನು ಗೋಡ್ವಾಡ್ ರಾಜ ಎಂದು ಕರೆದುಕೊಂಡಿದ್ದ ಆರೋಪಿ ಸೂರಜ್ ಸಿಂಗ್, 2020ರಲ್ಲಿ ಸಣ್ಣ ವಿಚಾರಕ್ಕೆ ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ಆತನ ಸಹೋದರ ಓಂಪ್ರಕಾಶ್ ಹೇಳಿದ್ದರು. “ನನ್ನ ಸಹೋದರ ನೋಡಲು ಚೆನ್ನಾಗಿ ಇದ್ದದ್ದರಿಂದ, ಒಳ್ಳೆಯ ವ್ಯಕ್ತಿತ್ವದವರಾಗಿದ್ದರಿಂದ ಸೂರಜ್‌ ಸಿಂಗ್ ಅಸೂಹೆ ಹೊಂದಿದ್ದ ಎಂಬುದು ಗ್ರಾಮಸ್ಥರಿಗೆ ತಿಳಿದಿತ್ತು” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...