Homeದಲಿತ್ ಫೈಲ್ಸ್ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

- Advertisement -
- Advertisement -

9 ವರ್ಷದ ದಲಿತ ಬಾಲಕನನ್ನು ಶಿಕ್ಷಕನೊಬ್ಬ ಥಳಿಸಿ ಕೊಂದಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಅಹಮದಾಬಾದ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನನ್ನಪ್ಪಿದೆ.

ಜುಲೈ 20 ರಂದು ಶಿಕ್ಷಕ ಹಲ್ಲೆ ನಡೆಸಿದ್ದನು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಸವರ್ಣಿಯರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ದಲಿತ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದಾನೆ.

ಆರೋಪಿ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಕೊಲೆ (ಐಪಿಸಿ) ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಬಾಲಕನ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಪೊಲೀಸ್ ತಂಡವನ್ನು ಅಹಮದಾಬಾದ್‌ಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಜಾಲೋರ್ ಎಸ್ಪಿ ಹರ್ಷವರ್ಧನ್ ಅಗರವಾಲಾ ತಿಳಿಸಿದ್ದಾರೆ.

“ಜಲೋರ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ ನನ್ನ ಮಗ ಇಂದ್ರ ಕುಮಾರ್, ಸಿಂಗ್‌ಗಳಿಗೆ ಮೀಸಲಾಗಿದ್ದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಶಿಕ್ಷಕ ಚೈಲ್ ಸಿಂಗ್ ಥಳಿಸಿದನು. ಈ ಮಡಕೆ ಮೇಲ್ಜಾತಿಗೆ ಸೇರಿದ ಸಿಂಗ್‌ಗಳಿಗೆ ಮೀಸಲಾಗಿದೆ ಎಂದು ನನ್ನ ಮಗನಿಗೆ ತಿಳಿದಿರಲಿಲ್ಲ” ಎಂದು ಮಗುವಿನ ತಂದೆ ಮತ್ತು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ನಿವಾಸಿ ದೇವರಾಮ್ ಮೇಘವಾಲ್ ಸಂಕಟ ವ್ಯಕ್ತಪಡಿಸಿದ್ದಾರೆ.

ಮೇಲ್ಜಾತಿ ಜನರಿಗೆ ಮೀಸಲಾದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಜಾತಿ ನಿಂದನೆ ಮಾಡಿ ಮಗುವನ್ನು ಶಿಕ್ಷಕ ಥಳಿಸಿದ್ದಾನೆ ಎಂದು ಕುಟುಂಬ ಸದಸ್ಯರು ಶನಿವಾರ ಸೈಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಂಗ್ ಹೊಡೆದಿದ್ದರಿಂದ ಮಗುವಿನ ಬಲ ಕಿವಿ ಮತ್ತು ಕಣ್ಣಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮಗನ ಸ್ಥಿತಿ ಹದಗೆಟ್ಟಿತು. ಆಸ್ಪತ್ರೆಗೆ ಸೇರಿಸಲಾಯಿತು. ಆತನ ಕಿವಿಯಿಂದ ರಕ್ತಸ್ರಾವವಾಗಿತ್ತು. ದೇಹವನ್ನು ಮತ್ತೊಂದು ಮಗ್ಗಲಿಗೆ ಬದಲಿಸಲು ಆತನಿಗೆ ಸಾಧ್ಯವಾಗುತ್ತಿರಲಿಲ್ಲ. ಅವನ ಕಣ್ಣು ನೋಯುತ್ತಿತ್ತು. ಅಹಮದಾಬಾದ್‌ಗೆ ಕರೆತರುವ ಮೊದಲು ನಾವು ಆತನನ್ನು ಜಲೋರ್, ಭಿನ್ಮಾಲ್, ಉದಯಪುರದ ಆಸ್ಪತ್ರೆಗಳಿಗೆ ದಾಖಲಿಸಿದ್ದೆವು. ನನ್ನ ಮಗ ಇಂದು [ಶನಿವಾರ] ಮಧ್ಯಾಹ್ನ ಕೊನೆಯುಸಿರೆಳೆದನು. ಅವನ ಸಾವಿಗೆ ಜಾತಿ ತಾರತಮ್ಯವೇ ಕಾರಣ” ಎಂದು ಮೇಘವಾಲ್ ‘ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಕುರಿತು ಟ್ವೀಟ್ ಮಾಡಿದ್ದು, “ಜಲೋರ್‌ನ ಸೈಲಾ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕ ಮಗುವನ್ನು ಥಳಿಸಿದ ಕಾರಣ ಸಾವು ಸಂಭವಿಸಿದೆ. ಘಟನೆಯು ನೋವು ತಂದಿದೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕೊಲೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ಸಿಗುವಂತೆ ನೋಡಿಕೊಳ್ಳಲಾಗುವುದು. ಮಗುವಿನ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹ 5 ಲಕ್ಷ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಮಗುವಿನ ಸಾವಿನ ವಿಚಾರವಾಗಿ ಗೆಹ್ಲೋಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “ಮುಖ್ಯಮಂತ್ರಿಗಳೇ, ಇದಕ್ಕೆ ಯಾರು ಹೊಣೆ? ನಿಮ್ಮ ಆಡಳಿತದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸುರಕ್ಷಿತವಾಗಿಲ್ಲ. ನೊಂದ ಕುಟುಂಬಕ್ಕೆ ಸಹಾಯ ಮಾಡಬೇಕು. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ಘಟನೆ ಕೇಳಿದರೆ ನಮಗೆ ಇಷ್ಟು ಕೋಪ ಆಕ್ರೋಶ ಮತ್ತು ನಾಚಿಕೆಯಿಂದ ತಲೆ ತಗ್ಗಿಸೋ ಹಾಗೆ ಆಗಿದೆ.
    ಅ ಜಾತಿ ಕ್ರಿಮಿ ಶಿಕ್ಷಕನಿಗೂ ಅದೇ ರೀತಿಯಲ್ಲಿ. ಹಲ್ಲೆ ನಡೆಸಿ ಕೊಲ್ಲೋ ಶಿಕ್ಷೆ ನೀಡಬೇಕು,ತಪ್ಪಿದರೆ ದಲಿತರೇ ಅ ಶಿಕ್ಷೆ ನೀಡಿದರೆ ಕನಿಷ್ಟ ಅ ಮಗುವಿನ ಪೋಷಕರಿಗೆ ಸಮಾಧಾನ ದೊರೇಕೀತು ಅವರು ಈ

  2. *ವಸುದೈವ ಕುಟುಂಬಕಂ..*

    ಮಡಕೆ ಮುಟ್ಟಿದ ಮಗುವನ್ನ ಮುಗಿಸಿಬಿಡುವ
    *ವಿಶ್ವ ಗುರುವನ್ನ* ಹುಟ್ಟಿಸಿದ್ದೇವೆ, “ವಸುದೈವ ಕುಟುಂಬಕಂ”ನ ಜನರು ನಾವು.

    ಯಾವ ಮನೆಯ ಮೇಲೆ ಬಾವುಟವಿಲ್ಲ ಅಂತ ಎಣಿಸುವ ಮನಸುಗಳ ಬೆಳೆಸಿದ್ದೇವೆ, ವಸುದೈವ ಕುಟುಂಬಕಂ ನ ಜನರು ನಾವು.

    ಯಾರು ದೇಶದವರು ಅಂತ ಸರ್ಟಿಫಿಕೇಟು ಕೊಡಲು ನೂರಾನಲವತ್ತು ಕೋಟಿ ಜನರ ಕಾಗದ ನೋಡುವ ಕಾನೂನು ತಂದಿದ್ದೇವೆ ವಸುದೈವ ಕುಟುಂಬಕಂ ನ ಜನರು ನಾವು.

    ಬಟ್ಟೆ ನೋಡಿಯೇ ಯಾರೆಂದು ತಿಳಿಯಬಲ್ಲ ದಿವ್ಯದರ್ಶಿ ಮೇಧಾವಿಯನ್ನ ಪ್ರಧಾನಿ ಮಾಡಿದ್ದೇವೆ,ವಸುದೈವ ಕುಟುಂಬಕಂ ಜನರು ನಾವು.

    ಮಾರುವುದೇ ಪರಮಾದರ್ಶ
    ಪ್ರದರ್ಶಿಸಿದ್ದೇ ಪರಮಸತ್ಯ
    ಲಕ್ಷ ಕೋಟಿಯ ಕ್ರೋನಿ ಕುಳಗಳೇ ಧರೆಗಿಳಿದ ದೇವತೆಗಳು.

    ಈ ನಮ್ಮ ವಸುದೈವ ಕುಟುಂಬದಲ್ಲಿ.

    ***
    ರಾಜಸ್ತಾನದ ಮಗುವಿನ ಕೊಲೆ ಮಾಡಿದ ಗುರುವಿನ ಸುದ್ದಿ ಓದಿದ ತಕ್ಷಣ ಬರೆದ ಕವನ

  3. ಎತ್ತ ಸಾಗುತ್ತಿದೆ ಈ ದೇಶ. ಮೂರನೇ ತರಗತಿಯ ಬಾಲಕನೊಬ್ಬನನ್ನು ಸಾಯುವಂತೆ ಹೊಡೆಯುವುದೇ? ಈ ರೀತಿಯಲ್ಲಿ ಶಿಕ್ಷಕರೇ ಕೊಲೆ ಪಾತಕರಾದರೆ, ನಮ್ಮ ಮುಂದಿನ ಪೀಳಿಗೆಯ ಗತಿ? ಈ ದೇಶಕ್ಕೆ ನಿಜಕ್ಕೂ ಒಳ್ಳೆಯ ಬವಿಶ್ಯ ಇದೆಯಾ?

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...