Homeದಲಿತ್ ಫೈಲ್ಸ್ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

- Advertisement -
- Advertisement -

9 ವರ್ಷದ ದಲಿತ ಬಾಲಕನನ್ನು ಶಿಕ್ಷಕನೊಬ್ಬ ಥಳಿಸಿ ಕೊಂದಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಅಹಮದಾಬಾದ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನನ್ನಪ್ಪಿದೆ.

ಜುಲೈ 20 ರಂದು ಶಿಕ್ಷಕ ಹಲ್ಲೆ ನಡೆಸಿದ್ದನು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಸವರ್ಣಿಯರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ದಲಿತ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದಾನೆ.

ಆರೋಪಿ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಕೊಲೆ (ಐಪಿಸಿ) ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಬಾಲಕನ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಪೊಲೀಸ್ ತಂಡವನ್ನು ಅಹಮದಾಬಾದ್‌ಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಜಾಲೋರ್ ಎಸ್ಪಿ ಹರ್ಷವರ್ಧನ್ ಅಗರವಾಲಾ ತಿಳಿಸಿದ್ದಾರೆ.

“ಜಲೋರ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ ನನ್ನ ಮಗ ಇಂದ್ರ ಕುಮಾರ್, ಸಿಂಗ್‌ಗಳಿಗೆ ಮೀಸಲಾಗಿದ್ದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಶಿಕ್ಷಕ ಚೈಲ್ ಸಿಂಗ್ ಥಳಿಸಿದನು. ಈ ಮಡಕೆ ಮೇಲ್ಜಾತಿಗೆ ಸೇರಿದ ಸಿಂಗ್‌ಗಳಿಗೆ ಮೀಸಲಾಗಿದೆ ಎಂದು ನನ್ನ ಮಗನಿಗೆ ತಿಳಿದಿರಲಿಲ್ಲ” ಎಂದು ಮಗುವಿನ ತಂದೆ ಮತ್ತು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ನಿವಾಸಿ ದೇವರಾಮ್ ಮೇಘವಾಲ್ ಸಂಕಟ ವ್ಯಕ್ತಪಡಿಸಿದ್ದಾರೆ.

ಮೇಲ್ಜಾತಿ ಜನರಿಗೆ ಮೀಸಲಾದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಜಾತಿ ನಿಂದನೆ ಮಾಡಿ ಮಗುವನ್ನು ಶಿಕ್ಷಕ ಥಳಿಸಿದ್ದಾನೆ ಎಂದು ಕುಟುಂಬ ಸದಸ್ಯರು ಶನಿವಾರ ಸೈಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಂಗ್ ಹೊಡೆದಿದ್ದರಿಂದ ಮಗುವಿನ ಬಲ ಕಿವಿ ಮತ್ತು ಕಣ್ಣಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮಗನ ಸ್ಥಿತಿ ಹದಗೆಟ್ಟಿತು. ಆಸ್ಪತ್ರೆಗೆ ಸೇರಿಸಲಾಯಿತು. ಆತನ ಕಿವಿಯಿಂದ ರಕ್ತಸ್ರಾವವಾಗಿತ್ತು. ದೇಹವನ್ನು ಮತ್ತೊಂದು ಮಗ್ಗಲಿಗೆ ಬದಲಿಸಲು ಆತನಿಗೆ ಸಾಧ್ಯವಾಗುತ್ತಿರಲಿಲ್ಲ. ಅವನ ಕಣ್ಣು ನೋಯುತ್ತಿತ್ತು. ಅಹಮದಾಬಾದ್‌ಗೆ ಕರೆತರುವ ಮೊದಲು ನಾವು ಆತನನ್ನು ಜಲೋರ್, ಭಿನ್ಮಾಲ್, ಉದಯಪುರದ ಆಸ್ಪತ್ರೆಗಳಿಗೆ ದಾಖಲಿಸಿದ್ದೆವು. ನನ್ನ ಮಗ ಇಂದು [ಶನಿವಾರ] ಮಧ್ಯಾಹ್ನ ಕೊನೆಯುಸಿರೆಳೆದನು. ಅವನ ಸಾವಿಗೆ ಜಾತಿ ತಾರತಮ್ಯವೇ ಕಾರಣ” ಎಂದು ಮೇಘವಾಲ್ ‘ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಕುರಿತು ಟ್ವೀಟ್ ಮಾಡಿದ್ದು, “ಜಲೋರ್‌ನ ಸೈಲಾ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕ ಮಗುವನ್ನು ಥಳಿಸಿದ ಕಾರಣ ಸಾವು ಸಂಭವಿಸಿದೆ. ಘಟನೆಯು ನೋವು ತಂದಿದೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕೊಲೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ಸಿಗುವಂತೆ ನೋಡಿಕೊಳ್ಳಲಾಗುವುದು. ಮಗುವಿನ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹ 5 ಲಕ್ಷ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಮಗುವಿನ ಸಾವಿನ ವಿಚಾರವಾಗಿ ಗೆಹ್ಲೋಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “ಮುಖ್ಯಮಂತ್ರಿಗಳೇ, ಇದಕ್ಕೆ ಯಾರು ಹೊಣೆ? ನಿಮ್ಮ ಆಡಳಿತದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸುರಕ್ಷಿತವಾಗಿಲ್ಲ. ನೊಂದ ಕುಟುಂಬಕ್ಕೆ ಸಹಾಯ ಮಾಡಬೇಕು. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ಘಟನೆ ಕೇಳಿದರೆ ನಮಗೆ ಇಷ್ಟು ಕೋಪ ಆಕ್ರೋಶ ಮತ್ತು ನಾಚಿಕೆಯಿಂದ ತಲೆ ತಗ್ಗಿಸೋ ಹಾಗೆ ಆಗಿದೆ.
    ಅ ಜಾತಿ ಕ್ರಿಮಿ ಶಿಕ್ಷಕನಿಗೂ ಅದೇ ರೀತಿಯಲ್ಲಿ. ಹಲ್ಲೆ ನಡೆಸಿ ಕೊಲ್ಲೋ ಶಿಕ್ಷೆ ನೀಡಬೇಕು,ತಪ್ಪಿದರೆ ದಲಿತರೇ ಅ ಶಿಕ್ಷೆ ನೀಡಿದರೆ ಕನಿಷ್ಟ ಅ ಮಗುವಿನ ಪೋಷಕರಿಗೆ ಸಮಾಧಾನ ದೊರೇಕೀತು ಅವರು ಈ

  2. *ವಸುದೈವ ಕುಟುಂಬಕಂ..*

    ಮಡಕೆ ಮುಟ್ಟಿದ ಮಗುವನ್ನ ಮುಗಿಸಿಬಿಡುವ
    *ವಿಶ್ವ ಗುರುವನ್ನ* ಹುಟ್ಟಿಸಿದ್ದೇವೆ, “ವಸುದೈವ ಕುಟುಂಬಕಂ”ನ ಜನರು ನಾವು.

    ಯಾವ ಮನೆಯ ಮೇಲೆ ಬಾವುಟವಿಲ್ಲ ಅಂತ ಎಣಿಸುವ ಮನಸುಗಳ ಬೆಳೆಸಿದ್ದೇವೆ, ವಸುದೈವ ಕುಟುಂಬಕಂ ನ ಜನರು ನಾವು.

    ಯಾರು ದೇಶದವರು ಅಂತ ಸರ್ಟಿಫಿಕೇಟು ಕೊಡಲು ನೂರಾನಲವತ್ತು ಕೋಟಿ ಜನರ ಕಾಗದ ನೋಡುವ ಕಾನೂನು ತಂದಿದ್ದೇವೆ ವಸುದೈವ ಕುಟುಂಬಕಂ ನ ಜನರು ನಾವು.

    ಬಟ್ಟೆ ನೋಡಿಯೇ ಯಾರೆಂದು ತಿಳಿಯಬಲ್ಲ ದಿವ್ಯದರ್ಶಿ ಮೇಧಾವಿಯನ್ನ ಪ್ರಧಾನಿ ಮಾಡಿದ್ದೇವೆ,ವಸುದೈವ ಕುಟುಂಬಕಂ ಜನರು ನಾವು.

    ಮಾರುವುದೇ ಪರಮಾದರ್ಶ
    ಪ್ರದರ್ಶಿಸಿದ್ದೇ ಪರಮಸತ್ಯ
    ಲಕ್ಷ ಕೋಟಿಯ ಕ್ರೋನಿ ಕುಳಗಳೇ ಧರೆಗಿಳಿದ ದೇವತೆಗಳು.

    ಈ ನಮ್ಮ ವಸುದೈವ ಕುಟುಂಬದಲ್ಲಿ.

    ***
    ರಾಜಸ್ತಾನದ ಮಗುವಿನ ಕೊಲೆ ಮಾಡಿದ ಗುರುವಿನ ಸುದ್ದಿ ಓದಿದ ತಕ್ಷಣ ಬರೆದ ಕವನ

  3. ಎತ್ತ ಸಾಗುತ್ತಿದೆ ಈ ದೇಶ. ಮೂರನೇ ತರಗತಿಯ ಬಾಲಕನೊಬ್ಬನನ್ನು ಸಾಯುವಂತೆ ಹೊಡೆಯುವುದೇ? ಈ ರೀತಿಯಲ್ಲಿ ಶಿಕ್ಷಕರೇ ಕೊಲೆ ಪಾತಕರಾದರೆ, ನಮ್ಮ ಮುಂದಿನ ಪೀಳಿಗೆಯ ಗತಿ? ಈ ದೇಶಕ್ಕೆ ನಿಜಕ್ಕೂ ಒಳ್ಳೆಯ ಬವಿಶ್ಯ ಇದೆಯಾ?

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...