Homeದಲಿತ್ ಫೈಲ್ಸ್ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

- Advertisement -
- Advertisement -

9 ವರ್ಷದ ದಲಿತ ಬಾಲಕನನ್ನು ಶಿಕ್ಷಕನೊಬ್ಬ ಥಳಿಸಿ ಕೊಂದಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಅಹಮದಾಬಾದ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನನ್ನಪ್ಪಿದೆ.

ಜುಲೈ 20 ರಂದು ಶಿಕ್ಷಕ ಹಲ್ಲೆ ನಡೆಸಿದ್ದನು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಸವರ್ಣಿಯರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ದಲಿತ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದಾನೆ.

ಆರೋಪಿ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಕೊಲೆ (ಐಪಿಸಿ) ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಬಾಲಕನ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಪೊಲೀಸ್ ತಂಡವನ್ನು ಅಹಮದಾಬಾದ್‌ಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಜಾಲೋರ್ ಎಸ್ಪಿ ಹರ್ಷವರ್ಧನ್ ಅಗರವಾಲಾ ತಿಳಿಸಿದ್ದಾರೆ.

“ಜಲೋರ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ ನನ್ನ ಮಗ ಇಂದ್ರ ಕುಮಾರ್, ಸಿಂಗ್‌ಗಳಿಗೆ ಮೀಸಲಾಗಿದ್ದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಶಿಕ್ಷಕ ಚೈಲ್ ಸಿಂಗ್ ಥಳಿಸಿದನು. ಈ ಮಡಕೆ ಮೇಲ್ಜಾತಿಗೆ ಸೇರಿದ ಸಿಂಗ್‌ಗಳಿಗೆ ಮೀಸಲಾಗಿದೆ ಎಂದು ನನ್ನ ಮಗನಿಗೆ ತಿಳಿದಿರಲಿಲ್ಲ” ಎಂದು ಮಗುವಿನ ತಂದೆ ಮತ್ತು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ನಿವಾಸಿ ದೇವರಾಮ್ ಮೇಘವಾಲ್ ಸಂಕಟ ವ್ಯಕ್ತಪಡಿಸಿದ್ದಾರೆ.

ಮೇಲ್ಜಾತಿ ಜನರಿಗೆ ಮೀಸಲಾದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಜಾತಿ ನಿಂದನೆ ಮಾಡಿ ಮಗುವನ್ನು ಶಿಕ್ಷಕ ಥಳಿಸಿದ್ದಾನೆ ಎಂದು ಕುಟುಂಬ ಸದಸ್ಯರು ಶನಿವಾರ ಸೈಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಂಗ್ ಹೊಡೆದಿದ್ದರಿಂದ ಮಗುವಿನ ಬಲ ಕಿವಿ ಮತ್ತು ಕಣ್ಣಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮಗನ ಸ್ಥಿತಿ ಹದಗೆಟ್ಟಿತು. ಆಸ್ಪತ್ರೆಗೆ ಸೇರಿಸಲಾಯಿತು. ಆತನ ಕಿವಿಯಿಂದ ರಕ್ತಸ್ರಾವವಾಗಿತ್ತು. ದೇಹವನ್ನು ಮತ್ತೊಂದು ಮಗ್ಗಲಿಗೆ ಬದಲಿಸಲು ಆತನಿಗೆ ಸಾಧ್ಯವಾಗುತ್ತಿರಲಿಲ್ಲ. ಅವನ ಕಣ್ಣು ನೋಯುತ್ತಿತ್ತು. ಅಹಮದಾಬಾದ್‌ಗೆ ಕರೆತರುವ ಮೊದಲು ನಾವು ಆತನನ್ನು ಜಲೋರ್, ಭಿನ್ಮಾಲ್, ಉದಯಪುರದ ಆಸ್ಪತ್ರೆಗಳಿಗೆ ದಾಖಲಿಸಿದ್ದೆವು. ನನ್ನ ಮಗ ಇಂದು [ಶನಿವಾರ] ಮಧ್ಯಾಹ್ನ ಕೊನೆಯುಸಿರೆಳೆದನು. ಅವನ ಸಾವಿಗೆ ಜಾತಿ ತಾರತಮ್ಯವೇ ಕಾರಣ” ಎಂದು ಮೇಘವಾಲ್ ‘ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಕುರಿತು ಟ್ವೀಟ್ ಮಾಡಿದ್ದು, “ಜಲೋರ್‌ನ ಸೈಲಾ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕ ಮಗುವನ್ನು ಥಳಿಸಿದ ಕಾರಣ ಸಾವು ಸಂಭವಿಸಿದೆ. ಘಟನೆಯು ನೋವು ತಂದಿದೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕೊಲೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ಸಿಗುವಂತೆ ನೋಡಿಕೊಳ್ಳಲಾಗುವುದು. ಮಗುವಿನ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹ 5 ಲಕ್ಷ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಮಗುವಿನ ಸಾವಿನ ವಿಚಾರವಾಗಿ ಗೆಹ್ಲೋಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “ಮುಖ್ಯಮಂತ್ರಿಗಳೇ, ಇದಕ್ಕೆ ಯಾರು ಹೊಣೆ? ನಿಮ್ಮ ಆಡಳಿತದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸುರಕ್ಷಿತವಾಗಿಲ್ಲ. ನೊಂದ ಕುಟುಂಬಕ್ಕೆ ಸಹಾಯ ಮಾಡಬೇಕು. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ಘಟನೆ ಕೇಳಿದರೆ ನಮಗೆ ಇಷ್ಟು ಕೋಪ ಆಕ್ರೋಶ ಮತ್ತು ನಾಚಿಕೆಯಿಂದ ತಲೆ ತಗ್ಗಿಸೋ ಹಾಗೆ ಆಗಿದೆ.
    ಅ ಜಾತಿ ಕ್ರಿಮಿ ಶಿಕ್ಷಕನಿಗೂ ಅದೇ ರೀತಿಯಲ್ಲಿ. ಹಲ್ಲೆ ನಡೆಸಿ ಕೊಲ್ಲೋ ಶಿಕ್ಷೆ ನೀಡಬೇಕು,ತಪ್ಪಿದರೆ ದಲಿತರೇ ಅ ಶಿಕ್ಷೆ ನೀಡಿದರೆ ಕನಿಷ್ಟ ಅ ಮಗುವಿನ ಪೋಷಕರಿಗೆ ಸಮಾಧಾನ ದೊರೇಕೀತು ಅವರು ಈ

  2. *ವಸುದೈವ ಕುಟುಂಬಕಂ..*

    ಮಡಕೆ ಮುಟ್ಟಿದ ಮಗುವನ್ನ ಮುಗಿಸಿಬಿಡುವ
    *ವಿಶ್ವ ಗುರುವನ್ನ* ಹುಟ್ಟಿಸಿದ್ದೇವೆ, “ವಸುದೈವ ಕುಟುಂಬಕಂ”ನ ಜನರು ನಾವು.

    ಯಾವ ಮನೆಯ ಮೇಲೆ ಬಾವುಟವಿಲ್ಲ ಅಂತ ಎಣಿಸುವ ಮನಸುಗಳ ಬೆಳೆಸಿದ್ದೇವೆ, ವಸುದೈವ ಕುಟುಂಬಕಂ ನ ಜನರು ನಾವು.

    ಯಾರು ದೇಶದವರು ಅಂತ ಸರ್ಟಿಫಿಕೇಟು ಕೊಡಲು ನೂರಾನಲವತ್ತು ಕೋಟಿ ಜನರ ಕಾಗದ ನೋಡುವ ಕಾನೂನು ತಂದಿದ್ದೇವೆ ವಸುದೈವ ಕುಟುಂಬಕಂ ನ ಜನರು ನಾವು.

    ಬಟ್ಟೆ ನೋಡಿಯೇ ಯಾರೆಂದು ತಿಳಿಯಬಲ್ಲ ದಿವ್ಯದರ್ಶಿ ಮೇಧಾವಿಯನ್ನ ಪ್ರಧಾನಿ ಮಾಡಿದ್ದೇವೆ,ವಸುದೈವ ಕುಟುಂಬಕಂ ಜನರು ನಾವು.

    ಮಾರುವುದೇ ಪರಮಾದರ್ಶ
    ಪ್ರದರ್ಶಿಸಿದ್ದೇ ಪರಮಸತ್ಯ
    ಲಕ್ಷ ಕೋಟಿಯ ಕ್ರೋನಿ ಕುಳಗಳೇ ಧರೆಗಿಳಿದ ದೇವತೆಗಳು.

    ಈ ನಮ್ಮ ವಸುದೈವ ಕುಟುಂಬದಲ್ಲಿ.

    ***
    ರಾಜಸ್ತಾನದ ಮಗುವಿನ ಕೊಲೆ ಮಾಡಿದ ಗುರುವಿನ ಸುದ್ದಿ ಓದಿದ ತಕ್ಷಣ ಬರೆದ ಕವನ

  3. ಎತ್ತ ಸಾಗುತ್ತಿದೆ ಈ ದೇಶ. ಮೂರನೇ ತರಗತಿಯ ಬಾಲಕನೊಬ್ಬನನ್ನು ಸಾಯುವಂತೆ ಹೊಡೆಯುವುದೇ? ಈ ರೀತಿಯಲ್ಲಿ ಶಿಕ್ಷಕರೇ ಕೊಲೆ ಪಾತಕರಾದರೆ, ನಮ್ಮ ಮುಂದಿನ ಪೀಳಿಗೆಯ ಗತಿ? ಈ ದೇಶಕ್ಕೆ ನಿಜಕ್ಕೂ ಒಳ್ಳೆಯ ಬವಿಶ್ಯ ಇದೆಯಾ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...