Homeಮುಖಪುಟರಾಜಸ್ಥಾನ: ಶಿಕ್ಷಕನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ: ಸಂಬಂಧಿಕರು ಆರೋಪ

ರಾಜಸ್ಥಾನ: ಶಿಕ್ಷಕನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ: ಸಂಬಂಧಿಕರು ಆರೋಪ

- Advertisement -
- Advertisement -

ರಾಜಸ್ಥಾನದಲ್ಲಿ ಬಾಲಕಿಯರ ವಿರುದ್ಧದ ಮತ್ತೊಂದು ಅಪರಾಧ ಬೆಳಕಿಗೆ ಬಂದಿದೆ. ಗುರುವಾರ ಸವಾಯಿ ಮಾಧೋಪುರ್ ಜಿಲ್ಲೆಯ ಬಾವಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಬಾಲಕಿಯ ಮೇಲೆ ಅವರ ಶಾಲಾ ಶಿಕ್ಷಕರೇ ಅತ್ಯಾಚಾರ ಮಾಡಿ ನಂತರ ಹತ್ಯೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಆರೋಪಿ ವಿರುದ್ಧ ಬೋನ್ಲಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ 16 ವರ್ಷದ ಬಾಲಕಿ ಆಗಸ್ಟ್ 8ರಂದು ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಶಾಲೆಯ ಶಿಕ್ಷಕ ರಾಮರತನ್ ಮೀನಾ ವಿರುದ್ಧ ಬಾಲಕಿಯ ತಂದೆ ದೂರು ನೀಡಿದ್ದಾರೆ ಎಂದು ಬೋನ್ಲಿ ವೃತ್ತದ ಅಧಿಕಾರಿ ಬೋನ್ಲಿ ಮೀನಾ ಅವರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಈ ಘಟನೆಯಿಂದ ನೊಂದ ಬಾಲಕಿಯ ಸಂಬಂಧಿಕರು ಮತ್ತು ಗ್ರಾಮಸ್ಥರು, ಶಾಲಾ ಆಟದ ಮೈದಾನದಲ್ಲಿ ಶವವನ್ನು ಇಟ್ಟು ಪ್ರತಿಭಟನೆ ನಡೆಸಿದರು. ”ಪರಿಹಾರ ನೀಡಬೇಕು, ಇಡೀ ಶಾಲೆಯ ಸಿಬ್ಬಂದಿಯನ್ನು ತೆಗೆದುಹಾಕಬೇಕು, ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಸಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಿಂದಾಗಿ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಲಿಲ್ಲ. ಆರೋಪಿ ಶಿಕ್ಷಕ ರಾಮರತನ್ ಮೀನಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಆತನನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆ ಶಾಲೆಯ ಎಲ್ಲಾ ಪುರುಷ ಸಿಬ್ಬಂದಿಯನ್ನು ಸಹ ತೆಗೆದುಹಾಕಲಾಗಿದೆ ಎಂದು ಸಿಒ ಹೇಳಿದ್ದಾರೆ. ಘಟನೆಯ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚಿವೆ ಎಂದು ಹೇಳಿದ್ದಾರೆ.

”ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರ ಸುರಕ್ಷತೆ ಇಂದು ದೊಡ್ಡ ಪ್ರಶ್ನೆಯಾಗಿದೆ. ಸವಾಯಿ ಮಾಧೋಪುರದಲ್ಲಿ ಮತ್ತೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿದೆ. ಮೃತದೇಹವನ್ನು ಬಾವಿಗೆ ಎಸೆದಿರುವ ಈ ಘಟನೆ ಮಾನವೀಯತೆಗೆ ನಾಚಿಕೆಗೇಡು. ಈ ಘಟನೆಯೂ ರಾಜ್ಯದ ಕಾನೂನು ಸುವ್ಯವಸ್ಥೆಯ ಮೇಲೆ ಪ್ರಶ್ನಾರ್ಥಕ ಚಿಹ್ನೆಯಾಗಿದೆ” ಎಂದು ಅವರು ಹೇಳಿದರು.

ಆಗಸ್ಟ್ 2 ರಂದು ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರವೆಸಗಿ ಆಕೆಯ ದೇಹವನ್ನು ಸುಟ್ಟು ಹಾಕಿರುವ ಘಟನೆ ನಡೆದಿತ್ತು. ಈ ಪ್ರಕರಣದಲ್ಲಿ ಏಳು ಜನರನ್ನು ಬಂಧಿಸಲಾಗಿದೆ.

ಮತ್ತೊಂದು ಇತ್ತೀಚಿನ ಘಟನೆಯಲ್ಲಿ, ಪಾಲಿ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳು ಮಂಗಳವಾರ ಸಂಜೆ ಮಜ್ಜಿಗೆ ಕುಡಿಯಲು ತನ್ನ ನೆರೆಯ ಮನೆಗೆ ಹೋದಾಗ 25 ವರ್ಷದ ವ್ಯಕ್ತಿಯಿಂದ ಅತ್ಯಾಚಾರವೆಸಗಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸಂಜೆ ಖಿನ್ವಾರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬುಧವಾರ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರ ಕರ್ತವ್ಯಲೋಪವೆಂದು ಕುಟುಂಬಸ್ಥರ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...