Homeಕರೋನಾ ತಲ್ಲಣರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

ರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

- Advertisement -
- Advertisement -

ಕೊರೊನಾ ಲಸಿಕೆ ಬಗ್ಗೆ ಹಲವು ಅನುಮಾನಗಳನ್ನು ಹೊಂದಿರುವವರಲ್ಲಿ ಅರಿವು ಮೂಡಿಸಿ, ಲಸಿಕೆ ಪಡೆಯುವಂತೆ ಮನವೊಲಿಸುವ ಕೆಲಸ ಬೂತ್ ಮಟ್ಟದ ಅಧಿಕಾರಿಗಳದ್ದಾಗಿದೆ. ಹೀಗೆ ಲಸಿಕೆ ಪಡೆಯದ ಬುಡಕಟ್ಟು ಜನರ ಮನವೊಲಿಸಲು ಉಚಿತ ಪಡಿತರ ನೀಡುವುದು, ಕೋವಿಡ್ ಲಸಿಕಾ ಕೇಂದ್ರಗಳಿಗೆ ಉಚಿತ ಪ್ರಯಾಣ ಒದಗಿಸುವಂತಹ ಕೆಲಸಗಳನ್ನು ರಾಜಸ್ಥಾನದ ಉದಯಪುರ ಹಳ್ಳಿಯಲ್ಲಿ ಮಾಡಲಾಗುತ್ತಿದೆ.

ಜೂನ್ 21 ರಿಂದ ದೇಶದಲ್ಲಿ ಎಲ್ಲಾ ವಯಸ್ಕಿಗೆ ಉಚಿತ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು, ಉದಯಪುರದ ಬುಡಕಟ್ಟು ಜನರನ್ನು ಮನವೊಲಿಸಲು ಬೂತ್ ಮಟ್ಟದ ಅಧಿಕಾರಿ ದಿನೇಶ್ ಚಂದ್ರ ಜೋಶಿ, ಉಚಿತ ಪಡಿತರ, ಉಚಿತ ಪ್ರಯಾಣ ವ್ಯವಸ್ಥೆ, ಬುಡಕಟ್ಟು ಜನರ ಪುರೋಹಿತರನ್ನು ಒಳಗೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ.

ಉದಯಪುರದ ಹಳ್ಳಿಯ ಬುಡಕಟ್ಟು ಜನರಲ್ಲಿ ಕೊರೊನಾ ವ್ಯಾಕ್ಸಿನೇಷನ್‌ನಿಂದ ಜನರು ಸಾವನ್ನಪ್ಪುತ್ತಿದ್ದಾರೆ ಎಂಬ ಬಗ್ಗೆ ವದಂತಿಗಳಿವೆ. ಇದಕ್ಕೆ ಉತ್ತರಿಸಿರುವ ಅಧಿಕಾರಿ ದಿನೇಶ್ ಚಂದ್ರ ಜೋಶಿ,“ಇದು ಕೇವಲ ವದಂತಿಯಾಗಿದೆ. ಜನರು ಸತ್ತದ್ದು ಲಸಿಕೆಗಳಿಂದಲ್ಲ, ಕೊರೊನಾ ಸೋಂಕಿನಿಂದ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

45 ವರ್ಷಕ್ಕಿಂತ ಮೇಲಪಟ್ಟವರಲ್ಲಿ ಲಸಿಕೆ ತೆಗೆದುಕೊಂಡ ಸರಾಸರಿ ಪ್ರಮಾಣ 78.3% ರಷ್ಟಿರುವ ರಾಜಸ್ಥಾನದಲ್ಲಿ, ಬುಡಕಟ್ಟು ಜಿಲ್ಲೆಗಳಾದ ಉದಯಪುರ (63.9%), ಡುಂಗರಪುರ (62.7%) ಮತ್ತು ಪ್ರತಾಪಗಢ (59.3%) ಜಿಲ್ಲೆಗಳು ಕಡಿಮೆ ಲಸಿಕೆ ಪ್ರಮಾಣ ದಾಖಲಿಸಿವೆ.

ಉದಯಪುರದ ಜೋದೊಲ್ ಬ್ಲಾಕ್‌ನಲ್ಲಿ ಕೇವಲ 34% ಲಸಿಕೆ ಪಡೆಯಲಾಗಿದೆ. ಹೀಗಾಗಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಗುಂಜನ್ ಸಿಂಗ್ ಸುಮಾರು 2,000 ಉಚಿತ ಪಡಿತರ ಕಿಟ್‌ಗಳನ್ನು ವಿತರಿಸಿದ್ದಾರೆ. ಈ ಕಿಟ್‌ಗಳಲ್ಲಿ ಅಡುಗೆ ಎಣ್ಣೆ, ಅವಲಕ್ಕಿ, ಅಕ್ಕಿ, ದಾಲ್ ಮತ್ತು ಗೋಧಿ ಹಿಟ್ಟು ಸೇರಿವೆ. ಈ ಪಡಿತರ ಕಿಟ್‌ಗಳು, ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿರುವ 12 ರಿಂದ 13 ಬುಡಕಟ್ಟು ಹಾಸ್ಟೆಲ್‌ಗಳಿಂದ ತರಲಾಗಿದೆ. ಜೊತೆಗೆ ಹಲವು ಎನ್‌ಜಿಒಗಳು ಸಹಾಯಕ್ಕೆ ನಿಂತಿವೆ ಎಂದು ಗುಂಜನ್ ಸಿಂಗ್ ಹೇಳಿದ್ದಾರೆ.

“ನಾವು ಹಳ್ಳಿಗಳಿಗೆ ಭೇಟಿ ನೀಡಿದಾಗ, ಜನರು ವ್ಯಾಕ್ಸಿನೇಷನ್ ಪಡೆದ ಬಳಿಕ ಸಾವು ಸಂಭವಿಸುವುದಿಲ್ಲವೇ ಎಂದು ಪ್ರಶ್ನಿಸುತ್ತಾರೆ. ಕೆಲವೊಮ್ಮೆ ನಮಗೆ ಹಳ್ಳಿ ಒಳಗೆ ಪ್ರವೇಶಿಸಲು ಅವಕಾಶ ಕೂಡ ನೀಡುವುದಿಲ್ಲ. ಲಸಿಕೆ ತೆಗೆದುಕೊಂಡ ಬಳಿಕ ಏನಾದರೂ ಸಂಭವಿಸಿದಲ್ಲಿ, ನಾವು ಪರಿಹಾರ ನೀಡುತ್ತೇವೆ ಎಂಬ ಆಶ್ವಾಸನೆ ನೀಡಿ, ಲಸಿಕೆ ನೀಡಲಾಗುತ್ತಿದೆ” ಎಂದು ಅಧಿಖಾರಿಯೊಬ್ಬರು ತಿಳಿಸಿದ್ದಾರೆ. ಜೊತೆಗೆ ಮುಂದಿನ ಎರಡು ವಾರಗಳಲ್ಲಿ 100% ಲಸಿಕೆ ನೀಡುವ ಪ್ರತಿಜ್ಞೆ ಮಾಡಿದ್ದಾರೆ.

ಇದು ಕೇವಲ ರಾಜಸ್ಥಾನದ ಹಳ್ಳಿಗಳ ಸ್ಥಿತಿಯಲ್ಲ. ದೇಶದ ಕುಗ್ರಾಮಗಳಲ್ಲಿ ಈಗಲೂ ಲಸಿಕೆ ಕುರಿತು ಇಂತಹದ್ದೇ ಅಭಿಪ್ರಾಯಗಳಿವೆ. ಉಚಿತ ಲಸಿಕೆ ನೀಡುವುದು ಮಾತ್ರ ಸರ್ಕಾರದ ಕೆಲಸವಲ್ಲ. ಇದರ ಜೊತೆಗೆ ಲಸಿಕೆ 100% ಸುರಕ್ಷಿತ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಅವಶ್ಯಕ ಎಂದು ಸಾಮಾಜಿಕ ಹೋರಾಟಗಾರರು ತಿಳಿಸುತ್ತಾರೆ.


 ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...