Homeಕರೋನಾ ತಲ್ಲಣರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

ರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

- Advertisement -
- Advertisement -

ಕೊರೊನಾ ಲಸಿಕೆ ಬಗ್ಗೆ ಹಲವು ಅನುಮಾನಗಳನ್ನು ಹೊಂದಿರುವವರಲ್ಲಿ ಅರಿವು ಮೂಡಿಸಿ, ಲಸಿಕೆ ಪಡೆಯುವಂತೆ ಮನವೊಲಿಸುವ ಕೆಲಸ ಬೂತ್ ಮಟ್ಟದ ಅಧಿಕಾರಿಗಳದ್ದಾಗಿದೆ. ಹೀಗೆ ಲಸಿಕೆ ಪಡೆಯದ ಬುಡಕಟ್ಟು ಜನರ ಮನವೊಲಿಸಲು ಉಚಿತ ಪಡಿತರ ನೀಡುವುದು, ಕೋವಿಡ್ ಲಸಿಕಾ ಕೇಂದ್ರಗಳಿಗೆ ಉಚಿತ ಪ್ರಯಾಣ ಒದಗಿಸುವಂತಹ ಕೆಲಸಗಳನ್ನು ರಾಜಸ್ಥಾನದ ಉದಯಪುರ ಹಳ್ಳಿಯಲ್ಲಿ ಮಾಡಲಾಗುತ್ತಿದೆ.

ಜೂನ್ 21 ರಿಂದ ದೇಶದಲ್ಲಿ ಎಲ್ಲಾ ವಯಸ್ಕಿಗೆ ಉಚಿತ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು, ಉದಯಪುರದ ಬುಡಕಟ್ಟು ಜನರನ್ನು ಮನವೊಲಿಸಲು ಬೂತ್ ಮಟ್ಟದ ಅಧಿಕಾರಿ ದಿನೇಶ್ ಚಂದ್ರ ಜೋಶಿ, ಉಚಿತ ಪಡಿತರ, ಉಚಿತ ಪ್ರಯಾಣ ವ್ಯವಸ್ಥೆ, ಬುಡಕಟ್ಟು ಜನರ ಪುರೋಹಿತರನ್ನು ಒಳಗೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ.

ಉದಯಪುರದ ಹಳ್ಳಿಯ ಬುಡಕಟ್ಟು ಜನರಲ್ಲಿ ಕೊರೊನಾ ವ್ಯಾಕ್ಸಿನೇಷನ್‌ನಿಂದ ಜನರು ಸಾವನ್ನಪ್ಪುತ್ತಿದ್ದಾರೆ ಎಂಬ ಬಗ್ಗೆ ವದಂತಿಗಳಿವೆ. ಇದಕ್ಕೆ ಉತ್ತರಿಸಿರುವ ಅಧಿಕಾರಿ ದಿನೇಶ್ ಚಂದ್ರ ಜೋಶಿ,“ಇದು ಕೇವಲ ವದಂತಿಯಾಗಿದೆ. ಜನರು ಸತ್ತದ್ದು ಲಸಿಕೆಗಳಿಂದಲ್ಲ, ಕೊರೊನಾ ಸೋಂಕಿನಿಂದ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

45 ವರ್ಷಕ್ಕಿಂತ ಮೇಲಪಟ್ಟವರಲ್ಲಿ ಲಸಿಕೆ ತೆಗೆದುಕೊಂಡ ಸರಾಸರಿ ಪ್ರಮಾಣ 78.3% ರಷ್ಟಿರುವ ರಾಜಸ್ಥಾನದಲ್ಲಿ, ಬುಡಕಟ್ಟು ಜಿಲ್ಲೆಗಳಾದ ಉದಯಪುರ (63.9%), ಡುಂಗರಪುರ (62.7%) ಮತ್ತು ಪ್ರತಾಪಗಢ (59.3%) ಜಿಲ್ಲೆಗಳು ಕಡಿಮೆ ಲಸಿಕೆ ಪ್ರಮಾಣ ದಾಖಲಿಸಿವೆ.

ಉದಯಪುರದ ಜೋದೊಲ್ ಬ್ಲಾಕ್‌ನಲ್ಲಿ ಕೇವಲ 34% ಲಸಿಕೆ ಪಡೆಯಲಾಗಿದೆ. ಹೀಗಾಗಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಗುಂಜನ್ ಸಿಂಗ್ ಸುಮಾರು 2,000 ಉಚಿತ ಪಡಿತರ ಕಿಟ್‌ಗಳನ್ನು ವಿತರಿಸಿದ್ದಾರೆ. ಈ ಕಿಟ್‌ಗಳಲ್ಲಿ ಅಡುಗೆ ಎಣ್ಣೆ, ಅವಲಕ್ಕಿ, ಅಕ್ಕಿ, ದಾಲ್ ಮತ್ತು ಗೋಧಿ ಹಿಟ್ಟು ಸೇರಿವೆ. ಈ ಪಡಿತರ ಕಿಟ್‌ಗಳು, ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿರುವ 12 ರಿಂದ 13 ಬುಡಕಟ್ಟು ಹಾಸ್ಟೆಲ್‌ಗಳಿಂದ ತರಲಾಗಿದೆ. ಜೊತೆಗೆ ಹಲವು ಎನ್‌ಜಿಒಗಳು ಸಹಾಯಕ್ಕೆ ನಿಂತಿವೆ ಎಂದು ಗುಂಜನ್ ಸಿಂಗ್ ಹೇಳಿದ್ದಾರೆ.

“ನಾವು ಹಳ್ಳಿಗಳಿಗೆ ಭೇಟಿ ನೀಡಿದಾಗ, ಜನರು ವ್ಯಾಕ್ಸಿನೇಷನ್ ಪಡೆದ ಬಳಿಕ ಸಾವು ಸಂಭವಿಸುವುದಿಲ್ಲವೇ ಎಂದು ಪ್ರಶ್ನಿಸುತ್ತಾರೆ. ಕೆಲವೊಮ್ಮೆ ನಮಗೆ ಹಳ್ಳಿ ಒಳಗೆ ಪ್ರವೇಶಿಸಲು ಅವಕಾಶ ಕೂಡ ನೀಡುವುದಿಲ್ಲ. ಲಸಿಕೆ ತೆಗೆದುಕೊಂಡ ಬಳಿಕ ಏನಾದರೂ ಸಂಭವಿಸಿದಲ್ಲಿ, ನಾವು ಪರಿಹಾರ ನೀಡುತ್ತೇವೆ ಎಂಬ ಆಶ್ವಾಸನೆ ನೀಡಿ, ಲಸಿಕೆ ನೀಡಲಾಗುತ್ತಿದೆ” ಎಂದು ಅಧಿಖಾರಿಯೊಬ್ಬರು ತಿಳಿಸಿದ್ದಾರೆ. ಜೊತೆಗೆ ಮುಂದಿನ ಎರಡು ವಾರಗಳಲ್ಲಿ 100% ಲಸಿಕೆ ನೀಡುವ ಪ್ರತಿಜ್ಞೆ ಮಾಡಿದ್ದಾರೆ.

ಇದು ಕೇವಲ ರಾಜಸ್ಥಾನದ ಹಳ್ಳಿಗಳ ಸ್ಥಿತಿಯಲ್ಲ. ದೇಶದ ಕುಗ್ರಾಮಗಳಲ್ಲಿ ಈಗಲೂ ಲಸಿಕೆ ಕುರಿತು ಇಂತಹದ್ದೇ ಅಭಿಪ್ರಾಯಗಳಿವೆ. ಉಚಿತ ಲಸಿಕೆ ನೀಡುವುದು ಮಾತ್ರ ಸರ್ಕಾರದ ಕೆಲಸವಲ್ಲ. ಇದರ ಜೊತೆಗೆ ಲಸಿಕೆ 100% ಸುರಕ್ಷಿತ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಅವಶ್ಯಕ ಎಂದು ಸಾಮಾಜಿಕ ಹೋರಾಟಗಾರರು ತಿಳಿಸುತ್ತಾರೆ.


 ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...