Homeಕರೋನಾ ತಲ್ಲಣರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

ರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

- Advertisement -
- Advertisement -

ಕೊರೊನಾ ಲಸಿಕೆ ಬಗ್ಗೆ ಹಲವು ಅನುಮಾನಗಳನ್ನು ಹೊಂದಿರುವವರಲ್ಲಿ ಅರಿವು ಮೂಡಿಸಿ, ಲಸಿಕೆ ಪಡೆಯುವಂತೆ ಮನವೊಲಿಸುವ ಕೆಲಸ ಬೂತ್ ಮಟ್ಟದ ಅಧಿಕಾರಿಗಳದ್ದಾಗಿದೆ. ಹೀಗೆ ಲಸಿಕೆ ಪಡೆಯದ ಬುಡಕಟ್ಟು ಜನರ ಮನವೊಲಿಸಲು ಉಚಿತ ಪಡಿತರ ನೀಡುವುದು, ಕೋವಿಡ್ ಲಸಿಕಾ ಕೇಂದ್ರಗಳಿಗೆ ಉಚಿತ ಪ್ರಯಾಣ ಒದಗಿಸುವಂತಹ ಕೆಲಸಗಳನ್ನು ರಾಜಸ್ಥಾನದ ಉದಯಪುರ ಹಳ್ಳಿಯಲ್ಲಿ ಮಾಡಲಾಗುತ್ತಿದೆ.

ಜೂನ್ 21 ರಿಂದ ದೇಶದಲ್ಲಿ ಎಲ್ಲಾ ವಯಸ್ಕಿಗೆ ಉಚಿತ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು, ಉದಯಪುರದ ಬುಡಕಟ್ಟು ಜನರನ್ನು ಮನವೊಲಿಸಲು ಬೂತ್ ಮಟ್ಟದ ಅಧಿಕಾರಿ ದಿನೇಶ್ ಚಂದ್ರ ಜೋಶಿ, ಉಚಿತ ಪಡಿತರ, ಉಚಿತ ಪ್ರಯಾಣ ವ್ಯವಸ್ಥೆ, ಬುಡಕಟ್ಟು ಜನರ ಪುರೋಹಿತರನ್ನು ಒಳಗೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ.

ಉದಯಪುರದ ಹಳ್ಳಿಯ ಬುಡಕಟ್ಟು ಜನರಲ್ಲಿ ಕೊರೊನಾ ವ್ಯಾಕ್ಸಿನೇಷನ್‌ನಿಂದ ಜನರು ಸಾವನ್ನಪ್ಪುತ್ತಿದ್ದಾರೆ ಎಂಬ ಬಗ್ಗೆ ವದಂತಿಗಳಿವೆ. ಇದಕ್ಕೆ ಉತ್ತರಿಸಿರುವ ಅಧಿಕಾರಿ ದಿನೇಶ್ ಚಂದ್ರ ಜೋಶಿ,“ಇದು ಕೇವಲ ವದಂತಿಯಾಗಿದೆ. ಜನರು ಸತ್ತದ್ದು ಲಸಿಕೆಗಳಿಂದಲ್ಲ, ಕೊರೊನಾ ಸೋಂಕಿನಿಂದ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

45 ವರ್ಷಕ್ಕಿಂತ ಮೇಲಪಟ್ಟವರಲ್ಲಿ ಲಸಿಕೆ ತೆಗೆದುಕೊಂಡ ಸರಾಸರಿ ಪ್ರಮಾಣ 78.3% ರಷ್ಟಿರುವ ರಾಜಸ್ಥಾನದಲ್ಲಿ, ಬುಡಕಟ್ಟು ಜಿಲ್ಲೆಗಳಾದ ಉದಯಪುರ (63.9%), ಡುಂಗರಪುರ (62.7%) ಮತ್ತು ಪ್ರತಾಪಗಢ (59.3%) ಜಿಲ್ಲೆಗಳು ಕಡಿಮೆ ಲಸಿಕೆ ಪ್ರಮಾಣ ದಾಖಲಿಸಿವೆ.

ಉದಯಪುರದ ಜೋದೊಲ್ ಬ್ಲಾಕ್‌ನಲ್ಲಿ ಕೇವಲ 34% ಲಸಿಕೆ ಪಡೆಯಲಾಗಿದೆ. ಹೀಗಾಗಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಗುಂಜನ್ ಸಿಂಗ್ ಸುಮಾರು 2,000 ಉಚಿತ ಪಡಿತರ ಕಿಟ್‌ಗಳನ್ನು ವಿತರಿಸಿದ್ದಾರೆ. ಈ ಕಿಟ್‌ಗಳಲ್ಲಿ ಅಡುಗೆ ಎಣ್ಣೆ, ಅವಲಕ್ಕಿ, ಅಕ್ಕಿ, ದಾಲ್ ಮತ್ತು ಗೋಧಿ ಹಿಟ್ಟು ಸೇರಿವೆ. ಈ ಪಡಿತರ ಕಿಟ್‌ಗಳು, ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿರುವ 12 ರಿಂದ 13 ಬುಡಕಟ್ಟು ಹಾಸ್ಟೆಲ್‌ಗಳಿಂದ ತರಲಾಗಿದೆ. ಜೊತೆಗೆ ಹಲವು ಎನ್‌ಜಿಒಗಳು ಸಹಾಯಕ್ಕೆ ನಿಂತಿವೆ ಎಂದು ಗುಂಜನ್ ಸಿಂಗ್ ಹೇಳಿದ್ದಾರೆ.

“ನಾವು ಹಳ್ಳಿಗಳಿಗೆ ಭೇಟಿ ನೀಡಿದಾಗ, ಜನರು ವ್ಯಾಕ್ಸಿನೇಷನ್ ಪಡೆದ ಬಳಿಕ ಸಾವು ಸಂಭವಿಸುವುದಿಲ್ಲವೇ ಎಂದು ಪ್ರಶ್ನಿಸುತ್ತಾರೆ. ಕೆಲವೊಮ್ಮೆ ನಮಗೆ ಹಳ್ಳಿ ಒಳಗೆ ಪ್ರವೇಶಿಸಲು ಅವಕಾಶ ಕೂಡ ನೀಡುವುದಿಲ್ಲ. ಲಸಿಕೆ ತೆಗೆದುಕೊಂಡ ಬಳಿಕ ಏನಾದರೂ ಸಂಭವಿಸಿದಲ್ಲಿ, ನಾವು ಪರಿಹಾರ ನೀಡುತ್ತೇವೆ ಎಂಬ ಆಶ್ವಾಸನೆ ನೀಡಿ, ಲಸಿಕೆ ನೀಡಲಾಗುತ್ತಿದೆ” ಎಂದು ಅಧಿಖಾರಿಯೊಬ್ಬರು ತಿಳಿಸಿದ್ದಾರೆ. ಜೊತೆಗೆ ಮುಂದಿನ ಎರಡು ವಾರಗಳಲ್ಲಿ 100% ಲಸಿಕೆ ನೀಡುವ ಪ್ರತಿಜ್ಞೆ ಮಾಡಿದ್ದಾರೆ.

ಇದು ಕೇವಲ ರಾಜಸ್ಥಾನದ ಹಳ್ಳಿಗಳ ಸ್ಥಿತಿಯಲ್ಲ. ದೇಶದ ಕುಗ್ರಾಮಗಳಲ್ಲಿ ಈಗಲೂ ಲಸಿಕೆ ಕುರಿತು ಇಂತಹದ್ದೇ ಅಭಿಪ್ರಾಯಗಳಿವೆ. ಉಚಿತ ಲಸಿಕೆ ನೀಡುವುದು ಮಾತ್ರ ಸರ್ಕಾರದ ಕೆಲಸವಲ್ಲ. ಇದರ ಜೊತೆಗೆ ಲಸಿಕೆ 100% ಸುರಕ್ಷಿತ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಅವಶ್ಯಕ ಎಂದು ಸಾಮಾಜಿಕ ಹೋರಾಟಗಾರರು ತಿಳಿಸುತ್ತಾರೆ.


 ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...