Homeಕರೋನಾ ತಲ್ಲಣರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

ರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

- Advertisement -
- Advertisement -

ಕೊರೊನಾ ಲಸಿಕೆ ಬಗ್ಗೆ ಹಲವು ಅನುಮಾನಗಳನ್ನು ಹೊಂದಿರುವವರಲ್ಲಿ ಅರಿವು ಮೂಡಿಸಿ, ಲಸಿಕೆ ಪಡೆಯುವಂತೆ ಮನವೊಲಿಸುವ ಕೆಲಸ ಬೂತ್ ಮಟ್ಟದ ಅಧಿಕಾರಿಗಳದ್ದಾಗಿದೆ. ಹೀಗೆ ಲಸಿಕೆ ಪಡೆಯದ ಬುಡಕಟ್ಟು ಜನರ ಮನವೊಲಿಸಲು ಉಚಿತ ಪಡಿತರ ನೀಡುವುದು, ಕೋವಿಡ್ ಲಸಿಕಾ ಕೇಂದ್ರಗಳಿಗೆ ಉಚಿತ ಪ್ರಯಾಣ ಒದಗಿಸುವಂತಹ ಕೆಲಸಗಳನ್ನು ರಾಜಸ್ಥಾನದ ಉದಯಪುರ ಹಳ್ಳಿಯಲ್ಲಿ ಮಾಡಲಾಗುತ್ತಿದೆ.

ಜೂನ್ 21 ರಿಂದ ದೇಶದಲ್ಲಿ ಎಲ್ಲಾ ವಯಸ್ಕಿಗೆ ಉಚಿತ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು, ಉದಯಪುರದ ಬುಡಕಟ್ಟು ಜನರನ್ನು ಮನವೊಲಿಸಲು ಬೂತ್ ಮಟ್ಟದ ಅಧಿಕಾರಿ ದಿನೇಶ್ ಚಂದ್ರ ಜೋಶಿ, ಉಚಿತ ಪಡಿತರ, ಉಚಿತ ಪ್ರಯಾಣ ವ್ಯವಸ್ಥೆ, ಬುಡಕಟ್ಟು ಜನರ ಪುರೋಹಿತರನ್ನು ಒಳಗೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ.

ಉದಯಪುರದ ಹಳ್ಳಿಯ ಬುಡಕಟ್ಟು ಜನರಲ್ಲಿ ಕೊರೊನಾ ವ್ಯಾಕ್ಸಿನೇಷನ್‌ನಿಂದ ಜನರು ಸಾವನ್ನಪ್ಪುತ್ತಿದ್ದಾರೆ ಎಂಬ ಬಗ್ಗೆ ವದಂತಿಗಳಿವೆ. ಇದಕ್ಕೆ ಉತ್ತರಿಸಿರುವ ಅಧಿಕಾರಿ ದಿನೇಶ್ ಚಂದ್ರ ಜೋಶಿ,“ಇದು ಕೇವಲ ವದಂತಿಯಾಗಿದೆ. ಜನರು ಸತ್ತದ್ದು ಲಸಿಕೆಗಳಿಂದಲ್ಲ, ಕೊರೊನಾ ಸೋಂಕಿನಿಂದ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

45 ವರ್ಷಕ್ಕಿಂತ ಮೇಲಪಟ್ಟವರಲ್ಲಿ ಲಸಿಕೆ ತೆಗೆದುಕೊಂಡ ಸರಾಸರಿ ಪ್ರಮಾಣ 78.3% ರಷ್ಟಿರುವ ರಾಜಸ್ಥಾನದಲ್ಲಿ, ಬುಡಕಟ್ಟು ಜಿಲ್ಲೆಗಳಾದ ಉದಯಪುರ (63.9%), ಡುಂಗರಪುರ (62.7%) ಮತ್ತು ಪ್ರತಾಪಗಢ (59.3%) ಜಿಲ್ಲೆಗಳು ಕಡಿಮೆ ಲಸಿಕೆ ಪ್ರಮಾಣ ದಾಖಲಿಸಿವೆ.

ಉದಯಪುರದ ಜೋದೊಲ್ ಬ್ಲಾಕ್‌ನಲ್ಲಿ ಕೇವಲ 34% ಲಸಿಕೆ ಪಡೆಯಲಾಗಿದೆ. ಹೀಗಾಗಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಗುಂಜನ್ ಸಿಂಗ್ ಸುಮಾರು 2,000 ಉಚಿತ ಪಡಿತರ ಕಿಟ್‌ಗಳನ್ನು ವಿತರಿಸಿದ್ದಾರೆ. ಈ ಕಿಟ್‌ಗಳಲ್ಲಿ ಅಡುಗೆ ಎಣ್ಣೆ, ಅವಲಕ್ಕಿ, ಅಕ್ಕಿ, ದಾಲ್ ಮತ್ತು ಗೋಧಿ ಹಿಟ್ಟು ಸೇರಿವೆ. ಈ ಪಡಿತರ ಕಿಟ್‌ಗಳು, ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿರುವ 12 ರಿಂದ 13 ಬುಡಕಟ್ಟು ಹಾಸ್ಟೆಲ್‌ಗಳಿಂದ ತರಲಾಗಿದೆ. ಜೊತೆಗೆ ಹಲವು ಎನ್‌ಜಿಒಗಳು ಸಹಾಯಕ್ಕೆ ನಿಂತಿವೆ ಎಂದು ಗುಂಜನ್ ಸಿಂಗ್ ಹೇಳಿದ್ದಾರೆ.

“ನಾವು ಹಳ್ಳಿಗಳಿಗೆ ಭೇಟಿ ನೀಡಿದಾಗ, ಜನರು ವ್ಯಾಕ್ಸಿನೇಷನ್ ಪಡೆದ ಬಳಿಕ ಸಾವು ಸಂಭವಿಸುವುದಿಲ್ಲವೇ ಎಂದು ಪ್ರಶ್ನಿಸುತ್ತಾರೆ. ಕೆಲವೊಮ್ಮೆ ನಮಗೆ ಹಳ್ಳಿ ಒಳಗೆ ಪ್ರವೇಶಿಸಲು ಅವಕಾಶ ಕೂಡ ನೀಡುವುದಿಲ್ಲ. ಲಸಿಕೆ ತೆಗೆದುಕೊಂಡ ಬಳಿಕ ಏನಾದರೂ ಸಂಭವಿಸಿದಲ್ಲಿ, ನಾವು ಪರಿಹಾರ ನೀಡುತ್ತೇವೆ ಎಂಬ ಆಶ್ವಾಸನೆ ನೀಡಿ, ಲಸಿಕೆ ನೀಡಲಾಗುತ್ತಿದೆ” ಎಂದು ಅಧಿಖಾರಿಯೊಬ್ಬರು ತಿಳಿಸಿದ್ದಾರೆ. ಜೊತೆಗೆ ಮುಂದಿನ ಎರಡು ವಾರಗಳಲ್ಲಿ 100% ಲಸಿಕೆ ನೀಡುವ ಪ್ರತಿಜ್ಞೆ ಮಾಡಿದ್ದಾರೆ.

ಇದು ಕೇವಲ ರಾಜಸ್ಥಾನದ ಹಳ್ಳಿಗಳ ಸ್ಥಿತಿಯಲ್ಲ. ದೇಶದ ಕುಗ್ರಾಮಗಳಲ್ಲಿ ಈಗಲೂ ಲಸಿಕೆ ಕುರಿತು ಇಂತಹದ್ದೇ ಅಭಿಪ್ರಾಯಗಳಿವೆ. ಉಚಿತ ಲಸಿಕೆ ನೀಡುವುದು ಮಾತ್ರ ಸರ್ಕಾರದ ಕೆಲಸವಲ್ಲ. ಇದರ ಜೊತೆಗೆ ಲಸಿಕೆ 100% ಸುರಕ್ಷಿತ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಅವಶ್ಯಕ ಎಂದು ಸಾಮಾಜಿಕ ಹೋರಾಟಗಾರರು ತಿಳಿಸುತ್ತಾರೆ.


 ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...