Homeದಲಿತ್ ಫೈಲ್ಸ್ರಾಜಸ್ಥಾನ: ಕಾಣೆಯಾಗಿದ್ದ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರು ಶವವಾಗಿ ಪತ್ತೆ

ರಾಜಸ್ಥಾನ: ಕಾಣೆಯಾಗಿದ್ದ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರು ಶವವಾಗಿ ಪತ್ತೆ

ಮತ್ತೊಂದು ಪ್ರಕರಣ: ನಾಲ್ವರು ದಲಿತರನ್ನು ಕೊಂದಿದ್ದ ಅಪರಾಧಿಗೆ ಮರಣದಂಡನೆಯನ್ನು ರಾಜಸ್ಥಾನದ ಸ್ಥಳೀಯ ನ್ಯಾಯಾಲಯವೊಂದು ವಿಧಿಸಿದೆ.

- Advertisement -
- Advertisement -

ಎರಡು ದಿನಗಳಿಂದ ಕಾಣೆಯಾಗಿದ್ದ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರ ಶವಗಳು ರಾಜಸ್ಥಾನದ ಜಲೋರ್ ಜಿಲ್ಲೆಯ ಸಂಚೋರ್ ಪ್ರದೇಶದ ನರ್ಮದಾ ಕಾಲುವೆಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿಯಿಂದ ಇಬ್ಬರು ಬಾಲಕಿಯರು ಕಾಣೆಯಾಗಿದ್ದರು.

ಬಾಲಕಿಯರ ಸಂಬಂಧಿಕರು ನೀಡಿದ ದೂರಿನನ್ವಯ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೋ) ಮತ್ತು ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್‌ ಆಗಿದೆ.

ಎಫ್‌ಐಆರ್ ಆಧಾರದ ಮೇಲೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಸರ್ಕಲ್ ಆಫೀಸರ್ (ಸಂಚೋರ್) ರೂಪ್ ಸಿಂಗ್ ಬುಧವಾರ ತಿಳಿಸಿರುವುದಾಗಿ ‘ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಮರಣೋತ್ತರ ಪರೀಕ್ಷೆಯನ್ನು ವೈದ್ಯಕೀಯ ಮಂಡಳಿಯು ಮಾಡಿದೆ. ಆದರೆ ಬಾಲಕಿಯರ ಕುಟುಂಬ ಸದಸ್ಯರು ಮೃತದೇಹಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ತಲಾ 50 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡಬೇಕೆಂಬ ಆಗ್ರಹ ಬಂದಿದೆ.

ಬಾಲಕಿಯರ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಉಪವಿಭಾಗಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ್ದಾರೆ. ಪ್ರತಿಭಟನೆಯನ್ನು ಕೊನೆಗೊಳಿಸಲು ಬಾಲಕಿಯರ ಕುಟುಂಬ ಸದಸ್ಯರೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಾಲಕಿಯರನ್ನು ಕೊಂದು ನಾಲೆಗೆ ಎಸೆಯಲಾಗಿದೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. “ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ” ಎಂದು ಸಿಂಗ್ ಹೇಳಿದ್ದಾರೆ.

ದಲಿತ ಕಾರ್ಮಿಕರ ಹತ್ಯೆ: ಅಪರಾಧಿಗೆ ಮರಣದಂಡನೆ ವಿಧಿಸಿದ ರಾಜಸ್ಥಾನ ಸ್ಥಳೀಯ ಕೋರ್ಟ್

2008ರಲ್ಲಿ ಘಟಿಸಿದ ನಾಲ್ವರು ದಲಿತ ಕಾರ್ಮಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಧೋಲ್ಪುರ್ ಸ್ಥಳೀಯ ನ್ಯಾಯಾಲಯ ವ್ಯಕ್ತಿಯೊಬ್ಬನಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಪ್ರಕರಣಗಳ ವಿಶೇಷ ನ್ಯಾಯಾಧೀಶರಾದ ನರೇಂದ್ರ ಮೀನಾ ಅವರು ಬುಧವಾರ ಶಿಕ್ಷೆ ಘೋಷಿಸಿದ್ದು, ಅಪರಾಧಿ ಕೀರ್ತಿ ರಾಮ್ ಗುರ್ಜಾರ್‌ ಎಂಬಾತನಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸೈಯದ್ ಮಹಿರ್ ಹಸನ್ ರಿಜ್ವಿ ಮಾಹಿತಿ ನೀಡಿದ್ದಾರೆ.

ಇಲ್ಲಿನ ಬ್ಯಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಇನ್ನೂ ಮೂವರು ಆರೋಪಿಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಅವರ ವಿಚಾರಣೆ ನಡೆಯುತ್ತಿದೆ ಎಂದು ರಿಜ್ವಿ ಹೇಳಿದ್ದಾರೆ.

ಜುಲೈ 9, 2008ರಂದು ಸಂತ್ರಸ್ತ ಜೈಪಾಲ್ ಸಿಂಗ್ ದೂರು ನೀಡಿದ್ದರು. “ನಮ್ಮ ತಂದೆ ರತನ್ ಲಾಲ್, ಚಿಕ್ಕಪ್ಪರಾದ ನತ್ತಿಲಾಲ್, ರಾಮಸ್ವರೂಪ್, ಸಹೋದರರಾದ ಭನ್ವರ್ ಲಾಲ್ ಮತ್ತು ಪಪ್ಪು ಅವರು ನರೇಗಾ ಅಡಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡಲು ಹೋಗಿದ್ದರು. ಹಳೆ ದ್ವೇಷದಿಂದ ಕೀರ್ತಿ ರಾಮ್ ಗುರ್ಜರ್, ಸುರೇಶ್, ಬಿರ್ಮಾ, ಚಂದ್ರಭಾನ್ ಅಲಿಯಾಸ್ ಅಟ್ಟಾ, ಪುರಾನ್ ಮತ್ತು ಭಗವಾನ್ ಸಿಂಗ್ ಇತರರು ಅಲ್ಲಿಗೆ ಬಂದು ಜಾತಿ ನಿಂದನೆ ಮಾಡಿದರು. ದಲಿತ ಕಾರ್ಮಿಕರ ಮೇಲೆ ಮನಬಂದಂತೆ ಗುಂಡು ಹಾರಿಸಿದರು” ಎಂದು ದೂರಿನಲ್ಲಿ ತಿಳಿಸಿದ್ದರು.

ಇದನ್ನೂ ಓದಿರಿ: ತುಮಕೂರು: ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

ಗುಂಡಿನ ದಾಳಿಯಲ್ಲಿ ರತನ್ ಲಾಲ್, ನತ್ತಿಲಾಲ್, ರಾಮಸ್ವರೂಪ್ ಮತ್ತು ರಾಮ್‌ವೀರ್ ಸಾವನ್ನಪ್ಪಿದ್ದು, ಆರೋಪಿಗಳು ಪರಾರಿಯಾಗಿದ್ದರು.

ಬುಧವಾರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರು ಕೀರ್ತಿ ರಾಮ್ ಗುರ್ಜರ್‌ನನ್ನು ಹತ್ಯೆಗೈದ ಅಪರಾಧಿ ಎಂದು ತೀರ್ಮಾನಿಸಿದ್ದಾರೆ. ಜೊತೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಮರಣದಂಡನೆಯನ್ನು ವಿಧಿಸಿದರು.

ಇತರ ಮೂವರು ಆರೋಪಿಗಳಾದ ಸುರೇಶ್, ಬಿರ್ಮಾ ಮತ್ತು ಭಗವಾನ್ ಸಿಂಗ್ ಅವರು ಧೋಲ್ಪುರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು ಅವರ ವಿಚಾರಣೆ ನಡೆಯುತ್ತಿದೆ ಎಂದು ರಿಜ್ವಿ ತಿಳಿಸಿದ್ದಾರೆ.

ಏಪ್ರಿಲ್ 15, 1982 ರಂದು ಧೋಲ್ಪುರ್ ಜಿಲ್ಲೆ ರಚನೆಯಾಯಿತು. ಇಲ್ಲಿನ ಜಿಲ್ಲೆಯ ನ್ಯಾಯಾಲಯವು ಮರಣದಂಡನೆ ವಿಧಿಸಿದ ಮೊದಲ ಪ್ರಕರಣ ಇದಾಗಿದೆ ಎಂದು ರಿಜ್ವಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...