Homeಕರೋನಾ ತಲ್ಲಣಎರಡು ಡೋಸ್ ಲಸಿಕೆ ಪಡೆದ ಬಳಿಕವೂ ಮಹಿಳೆಗೆ ಡೆಲ್ಟಾ ಪ್ಲಸ್ ಸೋಂಕು..!

ಎರಡು ಡೋಸ್ ಲಸಿಕೆ ಪಡೆದ ಬಳಿಕವೂ ಮಹಿಳೆಗೆ ಡೆಲ್ಟಾ ಪ್ಲಸ್ ಸೋಂಕು..!

- Advertisement -
- Advertisement -

ದೇಶಾದ್ಯಂತ ಕೊರೊನಾ 2ನೇ ಅಲೆ ತೀವ್ರತೆ ಕಡಿಮೆಯಾಗುತ್ತಿರುವ ಮಧ್ಯೆಯೇ ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕಿನ ಭಯ ಹೆಚ್ಚಾಗುತ್ತಿದೆ. ರಾಜಸ್ಥಾನದಲ್ಲಿ ಮೊದಲ ಡೆಲ್ಟಾ ಪ್ಲಸ್​​ ಪ್ರಕರಣ ಪತ್ತೆಯಾಗಿದ್ದು, ಕೊರೊನಾ ಲಸಿಕೆಯ 2 ಡೋಸ್  ಪಡೆದಿದ್ದ, ಬಿಕನೇರ್​ ಪ್ರದೇಶದ 65 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೋವ್ಯಾಕ್ಸಿನ್​​ ಲಸಿಕೆಯ 2 ಡೋಸ್ ಪಡೆದ ಬಳಿಕವೂ ಮಹಿಳೆಯಲ್ಲಿ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತೆಯ ಸ್ಯಾಂಪಲ್​​ಗಳನ್ನು ರಾಷ್ಟ್ರೀಯ ವೈರಾಣು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮಹಿಳೆ ಸ್ಯಾಂಪಲ್​ನಲ್ಲಿ ಡೆಲ್ಟಾ ಪ್ಲಸ್​ ಪತ್ತೆಯಾಗಿದ್ದು, ರಾಜಸ್ಥಾನದಲ್ಲಿ ಮೊದಲ ಡೆಲ್ಟಾ ಪ್ಲಸ್​ ಪ್ರಕರಣ ಇದಾಗಿದೆ. ಡೆಲ್ಟಾ ಪ್ಲಸ್​ ವೈರಸ್​​ ಕಾಣಿಸಿಕೊಂಡಿದ್ದರೂ ಮನೆಯಲ್ಲಿಯೇ ಐಸೋಲೇಷನ್​ಗೆ ಒಳಗಾಗಿ 65 ವರ್ಷದ ಮಹಿಳೆ ಗುಣಮುಖರಾಗಿದ್ದಾರೆ.

ಕೊರೊನಾ ವ್ಯಾಕ್ಸಿನೇಷನ್​ ಬಳಿಕವೂ ರೂಪಾಂತರಿ ಸೋಂಕು ಕಾಣಿಸಿಕೊಂಡಿದ್ದು, ಮಹಿಳೆಯಲ್ಲಿ ಹೆಚ್ಚಿನ ರೋಗ ಲಕ್ಷಣಗಳು ಇರಲಿಲ್ಲ. ಹೀಗಾಗಿ ಮಹಿಳೆ ಹೋಂ ಐಸೋಲೇಷನ್​ಗೆ ಒಳಗಾಗಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಸ್ಥಳೀಯ ಆರೋಗ್ಯಾಧಿಕಾರಿ ಚಹಾರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

ಕೊರೊನಾ ಲಸಿಕೆ ಪಡೆದ ಬಳಿಕವೂ ಸೋಂಕು ಕಾಣಿಸಿಕೊಂಡಿದೆ ಎಂದು ಮಹಿಳೆಯ ಕುಟುಂಬ ಮನೆಯಲ್ಲಿಯೇ ವೈದ್ಯರ ನೆರವಿನಲ್ಲಿ ಚಿಕಿತ್ಸೆ ಪಡೆದಿದ್ದರು. ಇವರ ಸ್ಯಾಂಪಲನ್ನು ಪರೀಕ್ಷೆಗೆ ಒಳಪಡಿಸಿದಾಗ ಮಹಿಳೆ ರೂಪಾಂತರಿ ಸೋಂಕಿಗೆ ಒಳಗಾಗಿದ್ದು ಪತ್ತೆಯಾಗಿದೆ.

ಡೆಲ್ಟಾ ಪ್ಲಸ್ ಕಾಣಿಸಿಕೊಂಡಿದ್ದ ಮಹಿಳೆಯ ಕುಟುಂಬದ ಮೂವರಲ್ಲಿ ಸೋಂಕು ತಗುಲಿತ್ತಾದರೂ ರೂಪಾಂತರಿ ವೈರಸ್​​​ ಕಾಣಿಸಿಕೊಂಡಿಲ್ಲ. ಕುಟುಂಬದ ಎಲ್ಲರೂ ಹೋಂ ಐಸೋಲೇಷನ್​ನಲ್ಲಿ ಇದ್ದು ಗುಣಮುಖರಾಗಿದ್ದಾರೆ. ಲಸಿಕೆ ಪಡೆದಿದ್ದರಿಂದಲೇ ರೂಪಾಂತರಿ ಸೋಂಕಿಗೆ ತುತ್ತಾದರೂ 65 ವರ್ಷ ಮಹಿಳೆ ಅಪಾಯವಿಲ್ಲದೆ ಗುಣಮುಖರಾಗಿದ್ದಾರೆ ಎಂದು ಆರೋಗ್ಯಧಿಕಾರಿ ತಿಳಿಸಿದ್ದಾರೆ.

ಲಸಿಕೆ ಪಡೆದ ಬಳಿಕವೂ ಸೋಂಕು ಕಾಣಿಕೊಳ್ಳಬಹುದು. ಆದರೆ ಲಸಿಕೆ ಪಡೆದಿರುವುದರಿಂದ ಹೆಚ್ಚಿನ ಹಾನಿ ಆಗುವುದಿಲ್ಲ ಎಂದು ತಜ್ಞ ವೈದ್ಯರು ಹೇಳುತ್ತಿದ್ದಾರೆ. ಇನ್ನು ಕೊರೊನಾ ಲಸಿಕೆಗಳು ರೂಪಾಂತರಿ ಸೋಂಕಿನ ವಿರುದ್ಧವೂ ಪರಿಣಾಮಕಾರಿಯಾಗಿವೆ. ಹೀಗಾಗಿ ತಡ ಮಾಡದೆ 2 ಡೋಸ್​ ಲಸಿಕೆ ಪಡೆಯುವುದು ಉತ್ತಮ ಎನ್ನುತ್ತಿದ್ದಾರೆ.

ಆದರೆ, ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವಿರುದ್ಧ ಹೋರಾಡುವಲ್ಲಿ ಈಗಿರುವ ವ್ಯಾಕ್ಸಿನ್‌ಗಳು ದುರ್ಬಲವಾಗಿರುವುದು ಕಂಡುಬಂದಿದೆ. ಮುಂದೆ ಹೊಸ ಹೊಸ ಕೊರೋನಾ ರೂಪಾಂತರಿಗಳು ಕಾಣಿಸಿಕೊಂಡರೆ ಅವುಗಳ ವಿರುದ್ಧ ವ್ಯಾಕ್ಸಿನ್‌ಗಳು ಯಾವುದೇ ಪರಿಣಾಮವನ್ನು ಬೀರದೇ ಇರುವ ಸಾಧ್ಯತೆಗಳಿವೆ ಎಂದು ವಿಶ್ವ ಆರೊಗ್ಯ ಸಂಸ್ಥೆಯು ಸೋಮವಾರ ಜೂನ್‌ 21 ರಂದು ತಿಳಿಸಿದೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್‌ ರೂಪಾಂತರಿಗೆ ಮಹಾರಾಷ್ಟ್ರದಲ್ಲಿ ಮೊದಲ ಸಾವು: ನಿರ್ಬಂಧಗಳ ಸಡಿಲಿಕೆಯಿಂದ ಹಿಂದೆ ಸರಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...