Homeಕರೋನಾ ತಲ್ಲಣಎರಡು ಡೋಸ್ ಲಸಿಕೆ ಪಡೆದ ಬಳಿಕವೂ ಮಹಿಳೆಗೆ ಡೆಲ್ಟಾ ಪ್ಲಸ್ ಸೋಂಕು..!

ಎರಡು ಡೋಸ್ ಲಸಿಕೆ ಪಡೆದ ಬಳಿಕವೂ ಮಹಿಳೆಗೆ ಡೆಲ್ಟಾ ಪ್ಲಸ್ ಸೋಂಕು..!

- Advertisement -
- Advertisement -

ದೇಶಾದ್ಯಂತ ಕೊರೊನಾ 2ನೇ ಅಲೆ ತೀವ್ರತೆ ಕಡಿಮೆಯಾಗುತ್ತಿರುವ ಮಧ್ಯೆಯೇ ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕಿನ ಭಯ ಹೆಚ್ಚಾಗುತ್ತಿದೆ. ರಾಜಸ್ಥಾನದಲ್ಲಿ ಮೊದಲ ಡೆಲ್ಟಾ ಪ್ಲಸ್​​ ಪ್ರಕರಣ ಪತ್ತೆಯಾಗಿದ್ದು, ಕೊರೊನಾ ಲಸಿಕೆಯ 2 ಡೋಸ್  ಪಡೆದಿದ್ದ, ಬಿಕನೇರ್​ ಪ್ರದೇಶದ 65 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೋವ್ಯಾಕ್ಸಿನ್​​ ಲಸಿಕೆಯ 2 ಡೋಸ್ ಪಡೆದ ಬಳಿಕವೂ ಮಹಿಳೆಯಲ್ಲಿ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತೆಯ ಸ್ಯಾಂಪಲ್​​ಗಳನ್ನು ರಾಷ್ಟ್ರೀಯ ವೈರಾಣು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮಹಿಳೆ ಸ್ಯಾಂಪಲ್​ನಲ್ಲಿ ಡೆಲ್ಟಾ ಪ್ಲಸ್​ ಪತ್ತೆಯಾಗಿದ್ದು, ರಾಜಸ್ಥಾನದಲ್ಲಿ ಮೊದಲ ಡೆಲ್ಟಾ ಪ್ಲಸ್​ ಪ್ರಕರಣ ಇದಾಗಿದೆ. ಡೆಲ್ಟಾ ಪ್ಲಸ್​ ವೈರಸ್​​ ಕಾಣಿಸಿಕೊಂಡಿದ್ದರೂ ಮನೆಯಲ್ಲಿಯೇ ಐಸೋಲೇಷನ್​ಗೆ ಒಳಗಾಗಿ 65 ವರ್ಷದ ಮಹಿಳೆ ಗುಣಮುಖರಾಗಿದ್ದಾರೆ.

ಕೊರೊನಾ ವ್ಯಾಕ್ಸಿನೇಷನ್​ ಬಳಿಕವೂ ರೂಪಾಂತರಿ ಸೋಂಕು ಕಾಣಿಸಿಕೊಂಡಿದ್ದು, ಮಹಿಳೆಯಲ್ಲಿ ಹೆಚ್ಚಿನ ರೋಗ ಲಕ್ಷಣಗಳು ಇರಲಿಲ್ಲ. ಹೀಗಾಗಿ ಮಹಿಳೆ ಹೋಂ ಐಸೋಲೇಷನ್​ಗೆ ಒಳಗಾಗಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಸ್ಥಳೀಯ ಆರೋಗ್ಯಾಧಿಕಾರಿ ಚಹಾರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

ಕೊರೊನಾ ಲಸಿಕೆ ಪಡೆದ ಬಳಿಕವೂ ಸೋಂಕು ಕಾಣಿಸಿಕೊಂಡಿದೆ ಎಂದು ಮಹಿಳೆಯ ಕುಟುಂಬ ಮನೆಯಲ್ಲಿಯೇ ವೈದ್ಯರ ನೆರವಿನಲ್ಲಿ ಚಿಕಿತ್ಸೆ ಪಡೆದಿದ್ದರು. ಇವರ ಸ್ಯಾಂಪಲನ್ನು ಪರೀಕ್ಷೆಗೆ ಒಳಪಡಿಸಿದಾಗ ಮಹಿಳೆ ರೂಪಾಂತರಿ ಸೋಂಕಿಗೆ ಒಳಗಾಗಿದ್ದು ಪತ್ತೆಯಾಗಿದೆ.

ಡೆಲ್ಟಾ ಪ್ಲಸ್ ಕಾಣಿಸಿಕೊಂಡಿದ್ದ ಮಹಿಳೆಯ ಕುಟುಂಬದ ಮೂವರಲ್ಲಿ ಸೋಂಕು ತಗುಲಿತ್ತಾದರೂ ರೂಪಾಂತರಿ ವೈರಸ್​​​ ಕಾಣಿಸಿಕೊಂಡಿಲ್ಲ. ಕುಟುಂಬದ ಎಲ್ಲರೂ ಹೋಂ ಐಸೋಲೇಷನ್​ನಲ್ಲಿ ಇದ್ದು ಗುಣಮುಖರಾಗಿದ್ದಾರೆ. ಲಸಿಕೆ ಪಡೆದಿದ್ದರಿಂದಲೇ ರೂಪಾಂತರಿ ಸೋಂಕಿಗೆ ತುತ್ತಾದರೂ 65 ವರ್ಷ ಮಹಿಳೆ ಅಪಾಯವಿಲ್ಲದೆ ಗುಣಮುಖರಾಗಿದ್ದಾರೆ ಎಂದು ಆರೋಗ್ಯಧಿಕಾರಿ ತಿಳಿಸಿದ್ದಾರೆ.

ಲಸಿಕೆ ಪಡೆದ ಬಳಿಕವೂ ಸೋಂಕು ಕಾಣಿಕೊಳ್ಳಬಹುದು. ಆದರೆ ಲಸಿಕೆ ಪಡೆದಿರುವುದರಿಂದ ಹೆಚ್ಚಿನ ಹಾನಿ ಆಗುವುದಿಲ್ಲ ಎಂದು ತಜ್ಞ ವೈದ್ಯರು ಹೇಳುತ್ತಿದ್ದಾರೆ. ಇನ್ನು ಕೊರೊನಾ ಲಸಿಕೆಗಳು ರೂಪಾಂತರಿ ಸೋಂಕಿನ ವಿರುದ್ಧವೂ ಪರಿಣಾಮಕಾರಿಯಾಗಿವೆ. ಹೀಗಾಗಿ ತಡ ಮಾಡದೆ 2 ಡೋಸ್​ ಲಸಿಕೆ ಪಡೆಯುವುದು ಉತ್ತಮ ಎನ್ನುತ್ತಿದ್ದಾರೆ.

ಆದರೆ, ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವಿರುದ್ಧ ಹೋರಾಡುವಲ್ಲಿ ಈಗಿರುವ ವ್ಯಾಕ್ಸಿನ್‌ಗಳು ದುರ್ಬಲವಾಗಿರುವುದು ಕಂಡುಬಂದಿದೆ. ಮುಂದೆ ಹೊಸ ಹೊಸ ಕೊರೋನಾ ರೂಪಾಂತರಿಗಳು ಕಾಣಿಸಿಕೊಂಡರೆ ಅವುಗಳ ವಿರುದ್ಧ ವ್ಯಾಕ್ಸಿನ್‌ಗಳು ಯಾವುದೇ ಪರಿಣಾಮವನ್ನು ಬೀರದೇ ಇರುವ ಸಾಧ್ಯತೆಗಳಿವೆ ಎಂದು ವಿಶ್ವ ಆರೊಗ್ಯ ಸಂಸ್ಥೆಯು ಸೋಮವಾರ ಜೂನ್‌ 21 ರಂದು ತಿಳಿಸಿದೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್‌ ರೂಪಾಂತರಿಗೆ ಮಹಾರಾಷ್ಟ್ರದಲ್ಲಿ ಮೊದಲ ಸಾವು: ನಿರ್ಬಂಧಗಳ ಸಡಿಲಿಕೆಯಿಂದ ಹಿಂದೆ ಸರಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...