Homeಕರೋನಾ ತಲ್ಲಣಎರಡು ಡೋಸ್ ಲಸಿಕೆ ಪಡೆದ ಬಳಿಕವೂ ಮಹಿಳೆಗೆ ಡೆಲ್ಟಾ ಪ್ಲಸ್ ಸೋಂಕು..!

ಎರಡು ಡೋಸ್ ಲಸಿಕೆ ಪಡೆದ ಬಳಿಕವೂ ಮಹಿಳೆಗೆ ಡೆಲ್ಟಾ ಪ್ಲಸ್ ಸೋಂಕು..!

- Advertisement -
- Advertisement -

ದೇಶಾದ್ಯಂತ ಕೊರೊನಾ 2ನೇ ಅಲೆ ತೀವ್ರತೆ ಕಡಿಮೆಯಾಗುತ್ತಿರುವ ಮಧ್ಯೆಯೇ ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕಿನ ಭಯ ಹೆಚ್ಚಾಗುತ್ತಿದೆ. ರಾಜಸ್ಥಾನದಲ್ಲಿ ಮೊದಲ ಡೆಲ್ಟಾ ಪ್ಲಸ್​​ ಪ್ರಕರಣ ಪತ್ತೆಯಾಗಿದ್ದು, ಕೊರೊನಾ ಲಸಿಕೆಯ 2 ಡೋಸ್  ಪಡೆದಿದ್ದ, ಬಿಕನೇರ್​ ಪ್ರದೇಶದ 65 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೋವ್ಯಾಕ್ಸಿನ್​​ ಲಸಿಕೆಯ 2 ಡೋಸ್ ಪಡೆದ ಬಳಿಕವೂ ಮಹಿಳೆಯಲ್ಲಿ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತೆಯ ಸ್ಯಾಂಪಲ್​​ಗಳನ್ನು ರಾಷ್ಟ್ರೀಯ ವೈರಾಣು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮಹಿಳೆ ಸ್ಯಾಂಪಲ್​ನಲ್ಲಿ ಡೆಲ್ಟಾ ಪ್ಲಸ್​ ಪತ್ತೆಯಾಗಿದ್ದು, ರಾಜಸ್ಥಾನದಲ್ಲಿ ಮೊದಲ ಡೆಲ್ಟಾ ಪ್ಲಸ್​ ಪ್ರಕರಣ ಇದಾಗಿದೆ. ಡೆಲ್ಟಾ ಪ್ಲಸ್​ ವೈರಸ್​​ ಕಾಣಿಸಿಕೊಂಡಿದ್ದರೂ ಮನೆಯಲ್ಲಿಯೇ ಐಸೋಲೇಷನ್​ಗೆ ಒಳಗಾಗಿ 65 ವರ್ಷದ ಮಹಿಳೆ ಗುಣಮುಖರಾಗಿದ್ದಾರೆ.

ಕೊರೊನಾ ವ್ಯಾಕ್ಸಿನೇಷನ್​ ಬಳಿಕವೂ ರೂಪಾಂತರಿ ಸೋಂಕು ಕಾಣಿಸಿಕೊಂಡಿದ್ದು, ಮಹಿಳೆಯಲ್ಲಿ ಹೆಚ್ಚಿನ ರೋಗ ಲಕ್ಷಣಗಳು ಇರಲಿಲ್ಲ. ಹೀಗಾಗಿ ಮಹಿಳೆ ಹೋಂ ಐಸೋಲೇಷನ್​ಗೆ ಒಳಗಾಗಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಸ್ಥಳೀಯ ಆರೋಗ್ಯಾಧಿಕಾರಿ ಚಹಾರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

ಕೊರೊನಾ ಲಸಿಕೆ ಪಡೆದ ಬಳಿಕವೂ ಸೋಂಕು ಕಾಣಿಸಿಕೊಂಡಿದೆ ಎಂದು ಮಹಿಳೆಯ ಕುಟುಂಬ ಮನೆಯಲ್ಲಿಯೇ ವೈದ್ಯರ ನೆರವಿನಲ್ಲಿ ಚಿಕಿತ್ಸೆ ಪಡೆದಿದ್ದರು. ಇವರ ಸ್ಯಾಂಪಲನ್ನು ಪರೀಕ್ಷೆಗೆ ಒಳಪಡಿಸಿದಾಗ ಮಹಿಳೆ ರೂಪಾಂತರಿ ಸೋಂಕಿಗೆ ಒಳಗಾಗಿದ್ದು ಪತ್ತೆಯಾಗಿದೆ.

ಡೆಲ್ಟಾ ಪ್ಲಸ್ ಕಾಣಿಸಿಕೊಂಡಿದ್ದ ಮಹಿಳೆಯ ಕುಟುಂಬದ ಮೂವರಲ್ಲಿ ಸೋಂಕು ತಗುಲಿತ್ತಾದರೂ ರೂಪಾಂತರಿ ವೈರಸ್​​​ ಕಾಣಿಸಿಕೊಂಡಿಲ್ಲ. ಕುಟುಂಬದ ಎಲ್ಲರೂ ಹೋಂ ಐಸೋಲೇಷನ್​ನಲ್ಲಿ ಇದ್ದು ಗುಣಮುಖರಾಗಿದ್ದಾರೆ. ಲಸಿಕೆ ಪಡೆದಿದ್ದರಿಂದಲೇ ರೂಪಾಂತರಿ ಸೋಂಕಿಗೆ ತುತ್ತಾದರೂ 65 ವರ್ಷ ಮಹಿಳೆ ಅಪಾಯವಿಲ್ಲದೆ ಗುಣಮುಖರಾಗಿದ್ದಾರೆ ಎಂದು ಆರೋಗ್ಯಧಿಕಾರಿ ತಿಳಿಸಿದ್ದಾರೆ.

ಲಸಿಕೆ ಪಡೆದ ಬಳಿಕವೂ ಸೋಂಕು ಕಾಣಿಕೊಳ್ಳಬಹುದು. ಆದರೆ ಲಸಿಕೆ ಪಡೆದಿರುವುದರಿಂದ ಹೆಚ್ಚಿನ ಹಾನಿ ಆಗುವುದಿಲ್ಲ ಎಂದು ತಜ್ಞ ವೈದ್ಯರು ಹೇಳುತ್ತಿದ್ದಾರೆ. ಇನ್ನು ಕೊರೊನಾ ಲಸಿಕೆಗಳು ರೂಪಾಂತರಿ ಸೋಂಕಿನ ವಿರುದ್ಧವೂ ಪರಿಣಾಮಕಾರಿಯಾಗಿವೆ. ಹೀಗಾಗಿ ತಡ ಮಾಡದೆ 2 ಡೋಸ್​ ಲಸಿಕೆ ಪಡೆಯುವುದು ಉತ್ತಮ ಎನ್ನುತ್ತಿದ್ದಾರೆ.

ಆದರೆ, ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವಿರುದ್ಧ ಹೋರಾಡುವಲ್ಲಿ ಈಗಿರುವ ವ್ಯಾಕ್ಸಿನ್‌ಗಳು ದುರ್ಬಲವಾಗಿರುವುದು ಕಂಡುಬಂದಿದೆ. ಮುಂದೆ ಹೊಸ ಹೊಸ ಕೊರೋನಾ ರೂಪಾಂತರಿಗಳು ಕಾಣಿಸಿಕೊಂಡರೆ ಅವುಗಳ ವಿರುದ್ಧ ವ್ಯಾಕ್ಸಿನ್‌ಗಳು ಯಾವುದೇ ಪರಿಣಾಮವನ್ನು ಬೀರದೇ ಇರುವ ಸಾಧ್ಯತೆಗಳಿವೆ ಎಂದು ವಿಶ್ವ ಆರೊಗ್ಯ ಸಂಸ್ಥೆಯು ಸೋಮವಾರ ಜೂನ್‌ 21 ರಂದು ತಿಳಿಸಿದೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್‌ ರೂಪಾಂತರಿಗೆ ಮಹಾರಾಷ್ಟ್ರದಲ್ಲಿ ಮೊದಲ ಸಾವು: ನಿರ್ಬಂಧಗಳ ಸಡಿಲಿಕೆಯಿಂದ ಹಿಂದೆ ಸರಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...