Homeಕರೋನಾ ತಲ್ಲಣಎರಡು ಡೋಸ್ ಲಸಿಕೆ ಪಡೆದ ಬಳಿಕವೂ ಮಹಿಳೆಗೆ ಡೆಲ್ಟಾ ಪ್ಲಸ್ ಸೋಂಕು..!

ಎರಡು ಡೋಸ್ ಲಸಿಕೆ ಪಡೆದ ಬಳಿಕವೂ ಮಹಿಳೆಗೆ ಡೆಲ್ಟಾ ಪ್ಲಸ್ ಸೋಂಕು..!

- Advertisement -
- Advertisement -

ದೇಶಾದ್ಯಂತ ಕೊರೊನಾ 2ನೇ ಅಲೆ ತೀವ್ರತೆ ಕಡಿಮೆಯಾಗುತ್ತಿರುವ ಮಧ್ಯೆಯೇ ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕಿನ ಭಯ ಹೆಚ್ಚಾಗುತ್ತಿದೆ. ರಾಜಸ್ಥಾನದಲ್ಲಿ ಮೊದಲ ಡೆಲ್ಟಾ ಪ್ಲಸ್​​ ಪ್ರಕರಣ ಪತ್ತೆಯಾಗಿದ್ದು, ಕೊರೊನಾ ಲಸಿಕೆಯ 2 ಡೋಸ್  ಪಡೆದಿದ್ದ, ಬಿಕನೇರ್​ ಪ್ರದೇಶದ 65 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೋವ್ಯಾಕ್ಸಿನ್​​ ಲಸಿಕೆಯ 2 ಡೋಸ್ ಪಡೆದ ಬಳಿಕವೂ ಮಹಿಳೆಯಲ್ಲಿ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತೆಯ ಸ್ಯಾಂಪಲ್​​ಗಳನ್ನು ರಾಷ್ಟ್ರೀಯ ವೈರಾಣು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮಹಿಳೆ ಸ್ಯಾಂಪಲ್​ನಲ್ಲಿ ಡೆಲ್ಟಾ ಪ್ಲಸ್​ ಪತ್ತೆಯಾಗಿದ್ದು, ರಾಜಸ್ಥಾನದಲ್ಲಿ ಮೊದಲ ಡೆಲ್ಟಾ ಪ್ಲಸ್​ ಪ್ರಕರಣ ಇದಾಗಿದೆ. ಡೆಲ್ಟಾ ಪ್ಲಸ್​ ವೈರಸ್​​ ಕಾಣಿಸಿಕೊಂಡಿದ್ದರೂ ಮನೆಯಲ್ಲಿಯೇ ಐಸೋಲೇಷನ್​ಗೆ ಒಳಗಾಗಿ 65 ವರ್ಷದ ಮಹಿಳೆ ಗುಣಮುಖರಾಗಿದ್ದಾರೆ.

ಕೊರೊನಾ ವ್ಯಾಕ್ಸಿನೇಷನ್​ ಬಳಿಕವೂ ರೂಪಾಂತರಿ ಸೋಂಕು ಕಾಣಿಸಿಕೊಂಡಿದ್ದು, ಮಹಿಳೆಯಲ್ಲಿ ಹೆಚ್ಚಿನ ರೋಗ ಲಕ್ಷಣಗಳು ಇರಲಿಲ್ಲ. ಹೀಗಾಗಿ ಮಹಿಳೆ ಹೋಂ ಐಸೋಲೇಷನ್​ಗೆ ಒಳಗಾಗಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಸ್ಥಳೀಯ ಆರೋಗ್ಯಾಧಿಕಾರಿ ಚಹಾರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

ಕೊರೊನಾ ಲಸಿಕೆ ಪಡೆದ ಬಳಿಕವೂ ಸೋಂಕು ಕಾಣಿಸಿಕೊಂಡಿದೆ ಎಂದು ಮಹಿಳೆಯ ಕುಟುಂಬ ಮನೆಯಲ್ಲಿಯೇ ವೈದ್ಯರ ನೆರವಿನಲ್ಲಿ ಚಿಕಿತ್ಸೆ ಪಡೆದಿದ್ದರು. ಇವರ ಸ್ಯಾಂಪಲನ್ನು ಪರೀಕ್ಷೆಗೆ ಒಳಪಡಿಸಿದಾಗ ಮಹಿಳೆ ರೂಪಾಂತರಿ ಸೋಂಕಿಗೆ ಒಳಗಾಗಿದ್ದು ಪತ್ತೆಯಾಗಿದೆ.

ಡೆಲ್ಟಾ ಪ್ಲಸ್ ಕಾಣಿಸಿಕೊಂಡಿದ್ದ ಮಹಿಳೆಯ ಕುಟುಂಬದ ಮೂವರಲ್ಲಿ ಸೋಂಕು ತಗುಲಿತ್ತಾದರೂ ರೂಪಾಂತರಿ ವೈರಸ್​​​ ಕಾಣಿಸಿಕೊಂಡಿಲ್ಲ. ಕುಟುಂಬದ ಎಲ್ಲರೂ ಹೋಂ ಐಸೋಲೇಷನ್​ನಲ್ಲಿ ಇದ್ದು ಗುಣಮುಖರಾಗಿದ್ದಾರೆ. ಲಸಿಕೆ ಪಡೆದಿದ್ದರಿಂದಲೇ ರೂಪಾಂತರಿ ಸೋಂಕಿಗೆ ತುತ್ತಾದರೂ 65 ವರ್ಷ ಮಹಿಳೆ ಅಪಾಯವಿಲ್ಲದೆ ಗುಣಮುಖರಾಗಿದ್ದಾರೆ ಎಂದು ಆರೋಗ್ಯಧಿಕಾರಿ ತಿಳಿಸಿದ್ದಾರೆ.

ಲಸಿಕೆ ಪಡೆದ ಬಳಿಕವೂ ಸೋಂಕು ಕಾಣಿಕೊಳ್ಳಬಹುದು. ಆದರೆ ಲಸಿಕೆ ಪಡೆದಿರುವುದರಿಂದ ಹೆಚ್ಚಿನ ಹಾನಿ ಆಗುವುದಿಲ್ಲ ಎಂದು ತಜ್ಞ ವೈದ್ಯರು ಹೇಳುತ್ತಿದ್ದಾರೆ. ಇನ್ನು ಕೊರೊನಾ ಲಸಿಕೆಗಳು ರೂಪಾಂತರಿ ಸೋಂಕಿನ ವಿರುದ್ಧವೂ ಪರಿಣಾಮಕಾರಿಯಾಗಿವೆ. ಹೀಗಾಗಿ ತಡ ಮಾಡದೆ 2 ಡೋಸ್​ ಲಸಿಕೆ ಪಡೆಯುವುದು ಉತ್ತಮ ಎನ್ನುತ್ತಿದ್ದಾರೆ.

ಆದರೆ, ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವಿರುದ್ಧ ಹೋರಾಡುವಲ್ಲಿ ಈಗಿರುವ ವ್ಯಾಕ್ಸಿನ್‌ಗಳು ದುರ್ಬಲವಾಗಿರುವುದು ಕಂಡುಬಂದಿದೆ. ಮುಂದೆ ಹೊಸ ಹೊಸ ಕೊರೋನಾ ರೂಪಾಂತರಿಗಳು ಕಾಣಿಸಿಕೊಂಡರೆ ಅವುಗಳ ವಿರುದ್ಧ ವ್ಯಾಕ್ಸಿನ್‌ಗಳು ಯಾವುದೇ ಪರಿಣಾಮವನ್ನು ಬೀರದೇ ಇರುವ ಸಾಧ್ಯತೆಗಳಿವೆ ಎಂದು ವಿಶ್ವ ಆರೊಗ್ಯ ಸಂಸ್ಥೆಯು ಸೋಮವಾರ ಜೂನ್‌ 21 ರಂದು ತಿಳಿಸಿದೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್‌ ರೂಪಾಂತರಿಗೆ ಮಹಾರಾಷ್ಟ್ರದಲ್ಲಿ ಮೊದಲ ಸಾವು: ನಿರ್ಬಂಧಗಳ ಸಡಿಲಿಕೆಯಿಂದ ಹಿಂದೆ ಸರಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...