Homeದಲಿತ್ ಫೈಲ್ಸ್ರಾಜಸ್ಥಾನ| 'ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..'; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

- Advertisement -
- Advertisement -

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ – ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.

ಫೆಬ್ರವರಿ 27 ರಂದು ಚುರುವಿನ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, 30 ವರ್ಷದ ಮೀನಾ ಮೇಘವಾಲ್, ಪ್ರೊಫೆಸರ್ ಅಪೂರ್ವ ಶರ್ಮಾ ಮತ್ತು ಪ್ರೊಫೆಸರ್ ಅನಿಲ್ ಅವರು ಅವಹೇಳನಕಾರಿ ಜಾತಿ ಹೇಳಿಕೆಗಳನ್ನು ಬಳಸಿ, ತನ್ನನ್ನು ಅನುತ್ತೀರ್ಣಗೊಳಿಸುವ ಬೆದರಿಕೆ ಹಾಕಿ, ಉದ್ದೇಶಪೂರ್ವಕವಾಗಿ ಕಡಿಮೆ ಅಂಕಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರು ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3 (1) (ಆರ್) ಮತ್ತು 3 (1) (ಎಸ್) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಚುರು ಸರ್ಕಲ್‌ ಆರ್‌ಪಿಎಸ್ ಸುನೀಲ್ ಕುಮಾರ್ ಜಜಾರಿಯಾ ಅವರಿಗೆ ರವಾನಿಸಲಾಗಿದೆ.

ಕಾಲೇಜು ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಜಾತಿ ನಿಂದನೆ ಆರೋಪ

ಜುನ್ಜುನು ಜಿಲ್ಲೆಯ ಖಾರಿಯಾ ಗ್ರಾಮದ ನಿವಾಸಿ ಮತ್ತು ತೋರುರಾಮ್ ಮೇಘವಾಲ್ ಅವರ ಪುತ್ರಿ ಮೀನಾ ಮೇಘವಾಲ್ ಅವರು ತಮ್ಮ ಲಿಖಿತ ದೂರಿನಲ್ಲಿ, ಈ ಘಟನೆ ಮೊದಲು ಡಿಸೆಂಬರ್ 2025 ರಲ್ಲಿ ನಡೆದ ಕಾಲೇಜು ಕಾರ್ಯಕ್ರಮದಲ್ಲಿ ನಡೆದಿತ್ತು ಎಂದು ಹೇಳಿದ್ದಾರೆ.

ಕಾರ್ಯಕ್ರಮದ ಸಮಯದಲ್ಲಿ, ಪ್ರಶ್ನೆ ಕೇಳಿದಾಗ ಪ್ರೊಫೆಸರ್ ಅಪೂರ್ವ ಶರ್ಮಾ ಕೋಪಗೊಂಡರು ಎಂದು ಅವರು ಹೇಳಿದರು. ದೂರಿನ ಪ್ರಕಾರ, ಪ್ರೊಫೆಸರ್ ಇತರ ವಿದ್ಯಾರ್ಥಿಗಳ ಮುಂದೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

“ನೀವು ಚಾಮರಿ, ನೀವು ಕೆಳಜಾತಿಯವರು. ನೀವು ಎಲ್ಎಲ್ ಬಿ ಮಾಡಲು ಸಾಧ್ಯವಿಲ್ಲ. ಅದು ನಿಮ್ಮ ಕೆಲಸವಲ್ಲ” ಎಂದು ಪ್ರಾಧ್ಯಾಪಕರು ಹೇಳಿದರು, ತನ್ನನ್ನು ಫೇಲ್ ಮಾಡುವುದಾಗಿ ಬೆದರಿಕೆ ಹಾಕಿದರು ಎಂದು ಅವರು ಹೇಳಿಕೊಂಡಿದ್ದಾರೆ.

ಆ ಸಮಯದಲ್ಲಿ ಆಕಾಶ್ ದೀಪ್, ಆಕಾಶ್ ಮಿಶ್ರಾ, ಹಿಮಾಂಶು ಮತ್ತು ಪ್ರೇಮ್ ಪ್ರಕಾಶ್ ಸೇರಿದಂತೆ ಹಲವಾರು ಸಹಪಾಠಿಗಳು ಸ್ಥಳದಲ್ಲಿದ್ದರು ಎಂದು ವಿದ್ಯಾರ್ಥಿನಿ ಹೇಳಿದ್ದಾರೆ.

ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಕಡಿಮೆ ಅಂಕ

ಡಿಸೆಂಬರ್‌ನಲ್ಲಿ ಘಟನೆ ನಡೆದ ನಂತರ, ಪ್ರೊಫೆಸರ್ ತನ್ನನ್ನು ಅವಮಾನಿಸುವುದನ್ನು ಮುಂದುವರೆಸಿದರು ಎಂದು ಮೀನಾ ಮೇಘವಾಲ್ ಆರೋಪಿಸಿದ್ದಾರೆ. ಪ್ರಾಯೋಗಿಕ ಪರೀಕ್ಷೆಯಲ್ಲಿ ತನಗೆ 20 ರಲ್ಲಿ 6 ಅಂಕಗಳನ್ನು ಮಾತ್ರ ನೀಡಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಆದರೆ ಇತರ ವಿಷಯಗಳಲ್ಲಿ, ವಿವಿಧ ಪ್ರಾಧ್ಯಾಪಕರು 12 ರಿಂದ 13 ಅಂಕಗಳನ್ನು ನೀಡಿದ್ದಾರೆ ಎಂದು ಅವರು ದೂರಿನಲ್ಲಿ ವಿರಿಸಿದ್ದಾರೆ.

ಫೆಬ್ರವರಿ 21 ರಂದು, ಕಡಿಮೆ ಅಂಕಗಳಿಗೆ ಕಾರಣ ಕೇಳಿದಾಗ, ಪ್ರೊಫೆಸರ್ ಅಪೂರ್ವ ಶರ್ಮಾ “ಇದು ನನ್ನ ಆಸೆ, ನಾನು ಅದನ್ನು ಮಾಡಿದ್ದೇನೆ. ನೀವು ಕೆಳಜಾತಿಯವರು” ಎಂದು ಹೇಳಿದ್ದರು ಎಂದು ಅವರು ಆರೋಪಿಸಿದ್ದಾರೆ.

ಕಾಲೇಜು ಆಡಳಿತಕ್ಕೆ ಲಿಖಿತ ದೂರು ಸಲ್ಲಿಸಿದ್ದೇನೆ. ಆದರೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವಿದ್ಯಾರ್ಥಿನಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...